AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
TV9 Web
| Edited By: |

Updated on:Oct 06, 2021 | 12:28 PM

Share

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು