AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
TV9 Web
| Updated By: shruti hegde|

Updated on:Oct 06, 2021 | 12:28 PM

Share

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!