AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 10 ಲಕ್ಷಕ್ಕೂ ಹೆಚ್ಚು ವಲಸೆ ಹಕ್ಕಿಗಳ ಕಲರವದಿಂದ ತುಂಬಿದ ಒಡಿಶಾದ ಚಿಲಿಕಾ ಸರೋವರ

ಕಳೆದ ಬಾರಿ 190 ಜಾತಿಯ 11 ಲಕ್ಷ ಪಕ್ಷಿಗಳು ಚಿಲಿಕಾ ಸರೋವರಕ್ಕೆ ವಲಸೆ ಬಂದಿದ್ದವು. ಈ ಬಾರಿ 183 ಜಾತಿಯ 10.4 ಲಕ್ಷ  ಪಕ್ಷಿಗಳು ವಲಸೆ ಬಂದಿವೆ. ಈ ಬಾರಿ ವಿಶೇಷವಾಗಿ  ಮಾಂಗೋಲಿಯನ್​ ಗುಲ್​ ಎನ್ನುವ ಅಪರೂಪದ ಪಕ್ಷಿಯನ್ನು ಗುರುತಿಸಲಾಗಿದೆ ಎಂದಿದ್ದಾರೆ.

Viral Video: 10 ಲಕ್ಷಕ್ಕೂ ಹೆಚ್ಚು ವಲಸೆ ಹಕ್ಕಿಗಳ ಕಲರವದಿಂದ ತುಂಬಿದ ಒಡಿಶಾದ ಚಿಲಿಕಾ ಸರೋವರ
TV9 Web
| Edited By: |

Updated on: Jan 06, 2022 | 4:34 PM

Share

ಭುವನೇಶ್ವರ: ಚಳಿಗಾಲದಲ್ಲಿ ಎಲ್ಲೆಡೆ ವಲಸೆ ಹಕ್ಕಿಗಳದೇ ಕಲವರ. ಲಕ್ಷಾಂತರ ಪಕ್ಷಿಗಳು ಸಂತಾನೋತ್ಪತ್ತಿಗಾಗಿ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುತ್ತವೆ. ವಲಸೆ ಹಕ್ಕಿಗಳು ಹಿಂಡು ಹಿಂಡಾಗಿ ತೆರಳುವುದನ್ನು ನೋಡುವುದೇ ಒಂದು ಸುಂದರ ಅನುಭವ.  ಅಂತಹ ಸುಂದರ ದೃಶ್ಯಕ್ಕೆ ಇದೀಗ ಒಡಿಶಾದ ಚಿಲಿಕಾ ಸರೋವರ ಸಾಕ್ಷಿಯಾಗಿದೆ. ಏಷ್ಯಾದ ಅತೀ ದೊಡ್ಡ ಉಪ್ಪುನೀರಿನ ಸರೋವರ ಎಂದು ಖ್ಯಾತಿ ಪಡೆದ ಒಡಿಶಾದ ಚಿಲಿಕಾ ಸರೋವರದಲ್ಲೀಗ 10 ಲಕ್ಷಕ್ಕೂ ಹೆಚ್ಚು ಪಕ್ಷಿಗಳು ವಲಸೆ ಬಂದಿವೆ.  ಈ ಕುರಿತು ಒಡಿಶಾದ ಸಿಡಿಎ ಮುಖ್ಯ ನಿರ್ವಾಹಕ ಸುಸಾಂತ್​ ನಂದಾ ಎನ್ನುವವರು ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಬಾರಿ 190 ಜಾತಿಯ 11 ಲಕ್ಷ ಪಕ್ಷಿಗಳು ಚಿಲಿಕಾ ಸರೋವರಕ್ಕೆ ವಲಸೆ ಬಂದಿದ್ದವು. ಈ ಬಾರಿ 183 ಜಾತಿಯ 10.4 ಲಕ್ಷ  ಪಕ್ಷಿಗಳು ವಲಸೆ ಬಂದಿವೆ. ಈ ಬಾರಿ ವಿಶೇಷವಾಗಿ  ಮಾಂಗೋಲಿಯನ್​ ಗುಲ್​ ಎನ್ನುವ ಅಪರೂಪದ ಪಕ್ಷಿಯನ್ನು ಗುರುತಿಸಲಾಗಿದೆ ಎಂದಿದ್ದಾರೆ. ಚಿಲಿಕಾ ಸರೋವರವು ಪೂರಿ,  ಗಂಜಮ್​ ಮತ್ತು ಖೋರಡಾ ಜಿಲ್ಲೆಗಳಲ್ಲಿ ಸುಮಾರು 1,100 ಚದರ ಕಿಮೀ ವರೆಗೆ ವಿಸ್ತಾರವಾಗಿದೆ. ಹೀಗಾಗಿ ಲಕ್ಷಾಂತರ ಪಕ್ಷಿಗಳು ಬಂದು ಹಾರಾಟ ನಡೆಸುತ್ತವೆ.

ಈ ಬಾರಿ ಪಿಂಟೈಲ್​, ಗಡ್ವಾಲ್​,  ಯುರೇಷಿಯನ್​ ವೆಗಾನ್​  ಸೇರಿದಂತೆ ಹಲವು ಪಕ್ಷಿಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಿಲಿಕಾ ಸರೋವರದಲ್ಲಿ ಪಕ್ಷಿಗಳ ಹಾರಾಟದ ವಿಡಿಯೋ, ಫೋಟೋಗಳು ವೈರಲ್ ಆಗಿವೆ. ಚಿಲಿಕಾ ಸರೋವರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ, ನೂರಾರು ಹಕ್ಕಿಗಳು ಒಂದೇ ಸಲಕ್ಕೆ ಹಾರುವ ವೀಡಿಯೋಗಳು, ಪಕ್ಷಿಗಳು ಏಕಾಂತದಲ್ಲಿ ಕುಳಿತ ಫೋಟೋಗಳು ನೋಡುಗರ ಮನ ಸೆಳೆದಿದೆ.

ಇದನ್ನೂ ಓದಿ:

ನಾಯಿಯ ಮುಖದಂತೆ ಕಾಣುವ ಪ್ರಾಣಿಯ ವಿಡಿಯೋ ನೋಡಿ ಬೆರಗಾದ ನೆಟ್ಟಿಗರು: ವಿಡಿಯೋದಲ್ಲೇನಿದೆ?

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್