AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

Suspend : ಎಚ್‌ಡಿಎಫ್‌ಸಿ ಬ್ಯಾಂಕ್​ನ (HDFC) ಆನ್‌ಲೈನ್ ಮೀಟಿಂಗ್​ ನಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಉದ್ಯೋಗಿಗಳನ್ನು ನಿಂದಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು
ಎಚ್​ಡಿಎಫ್​ಸಿಯ ಅಧಿಕೃತ ಆನ್​ಲೈನ್​ ಮೀಟಿಂಗ್​ನ ದೃಶ್ಯ
TV9 Web
| Edited By: |

Updated on: Jun 06, 2023 | 12:19 PM

Share

Viral: ಎಚ್​ಡಿಎಫ್​ಸಿ ಬ್ಯಾಂಕಿಂಗ್​ ಮತ್ತು ವಿಮಾ ಸಂಬಂಧಿ (HDFC) ಉತ್ಪನ್ನಗಳ ಕುರಿತು ನಿರೀಕ್ಷಿತ ಗುರಿಯನ್ನು ಸಾಧಿಸದೇ ಇದ್ದ ಕಾರಣಕ್ಕಾಗಿ ಆನ್​ಲೈನ್​ ಮೀಟಿಂಗ್​ನಲ್ಲಿ ಕಿರಿಯ ಉದ್ಯೋಗಿಗಳನ್ನು ಹಿರಿಯ ಅಧಿಕಾರಿಯೊಬ್ಬರು ನಿಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಯನ್ನು ಬ್ಯಾಂಕ್​ ಅಮಾನತುಗೊಳಿಸಿದೆ. ಉದ್ಯೋಗಿಗಳೊಂದಿಗೆ ಅಗೌರವ ಮತ್ತು ಅಶಿಸ್ತಿನಿಂದ ನಡೆದುಕೊಂಡ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಸೋಮವಾರದಂದು ಕೊಲ್ಕತ್ತಾದಲ್ಲಿ ವಾಸಿಸುತ್ತಿರುವ ಹಿರಿಯ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮೇಲಿನ ಈ ವಿಡಿಯೋದಲ್ಲಿ ಕಿರಿಯ ಉದ್ಯೋಗಿಗಳ ಮೇಲೆ ಹಿರಿಯ ಅಧಿಕಾರಿಯು ಕೂಗಾಡಿರುವುದನ್ನು ಗಮನಿಸಬಹುದು. ಎಚ್‌ಡಿಎಫ್‌ಸಿ ಬ್ಯಾಂಕ್‌ನ ಕೊಲ್ಕತ್ತಾ ಶಾಖೆಯ ಕ್ಲಸ್ಟರ್ ಹೆಡ್ ಆಗಿದ್ದ ಪುಷ್ಪಲ್ ರಾಯ್ ಅಮಾನತುಗೊಂಡ ಅಧಿಕಾರಿ. ಬೆಂಗಾಲಿಯಲ್ಲಿ ಹೀಗೆ ಕೂಗಾಡಿದ್ದಾರೆ.

ಇದನ್ನೂ ಓದಿ : Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಎಚ್​ಡಿಎಫ್​ಸಿ ಬ್ಯಾಂಕ್​ನ ಸರ್ವೀಸ್​ ಮ್ಯಾನೇಜರ್​ ಅಜಯ್​, ‘ಬ್ಯಾಂಕ್​ನ ಮಾರ್ಗಸೂಚಿಗಳ ಪ್ರಕಾರ ಈ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಲಸದ ಸ್ಥಳದಲ್ಲಿಉದ್ಯೋಗಿಗಳನ್ನು ಅಗೌರವದಿಂದ ನಡೆಸಿಕೊಂಡ ಹಿನ್ನೆಲೆಯಲ್ಲಿ, ಪ್ರಾಥಮಿಕ ವಿಚಾರಣೆಯ ನಂತರವೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿವರವಾದ ತನಿಖೆಯನ್ನೂ ಆರಂಭಿಸಲಾಗಿದೆ.’ ಎಂದು ಎನ್​ಡಿಟಿವಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ