AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ನನ್ನು ವಿಮಾನ ನಿಲ್ದಾಣದಲ್ಲಿ ತಡೆದು ವೃತ್ತಿಪರತೆ ಮೆರೆದ ಅಧಿಕಾರಿಯನ್ನು ಪುರುಸ್ಕರಿಸಿದ ಸಿಐಎಸ್ಎಫ್

ಸಿಐಎಸ್ ಎಫ್ ಮಾಡಿರುವುದು ನಿಜಕ್ಕೂ ಅನುಕರಣೀಯ. ಸೆಲೆಬ್ರಿಟಿಗಳು ಉಳಿದ ಜನಸಾಮಾನ್ಯರಿಗಿಂತ ಹೆಚ್ಚು ಸಮಾನರು ಅಲ್ಲ ಎನ್ನವುದನ್ನು ಸಲ್ಮಾನ್​ನಂಥ ನಟರು ಅರ್ಥಮಾಡಿಕೊಳ್ಳಬೇಕಿದೆ.

ಸಲ್ಮಾನ್ ಖಾನ್​ನನ್ನು ವಿಮಾನ ನಿಲ್ದಾಣದಲ್ಲಿ ತಡೆದು ವೃತ್ತಿಪರತೆ ಮೆರೆದ ಅಧಿಕಾರಿಯನ್ನು ಪುರುಸ್ಕರಿಸಿದ ಸಿಐಎಸ್ಎಫ್
ಸಿಐಎಸ್​ಎಫ್ ಅಧಿಕಾರಿ ಸಲ್ಮಾನ್​ ಖಾನ್​​ನನ್ನು ತಡೆಯುತ್ತಿರುವುದು​
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 25, 2021 | 4:35 PM

ಮುಂಬೈ: ಇತ್ತೀಚಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ನನ್ನು ತಡೆದು ದೇಶದ ಎಲ್ಲಾ ಮೂಲೆಗಳ ಜನರಿಂದ ಭೇಷ್ ಅನಿಸಿಕೊಂಡಿದ್ದ ಕೇಂದ್ರ ಕೈಗಾರಿಕಾ ಭದ್ರತೆ ಪಡೆ (ಸಿ ಐ ಎಸ್ ಎಫ್) ಅಧಿಕಾರಿಯೊಬ್ಬರನ್ನು ಅವರು ಪ್ರದರ್ಶಿಸಿದ ನಿದರ್ಶನೀಯ ವೃತ್ತಿಪರತೆ ಮತ್ತು ಕರ್ತವ್ಯ ನಿಷ್ಠೆಯ ಹಿನ್ನೆಲೆಯಲ್ಲಿ ಸೂಕ್ತವಾಗಿ ಪುರಸ್ಕರಿಸಿ ಗೌರವಿಸಲಾಗಿದೆ. ಇಲ್ಲಿ ಗಮನಿಸಬೇಕಿರುವ ಅಂಶವೆಂದರೆ, ಒಬ್ಬ ಹೆಸರಾಂತ ನಟನನ್ನು ಹಾಗೆ ತಡೆದಿದ್ದುಕ್ಕೆ ಅಧಿಕಾರಿಯನ್ನು ಶಿಕ್ಷೆಗೊಳಪಡಿಸಲಾಗುವುದು, ಜುಲ್ಮಾನೆ ವಿಧಿಸಲಾಗುವುದು ಎಂದು ಹರಡಿದ್ದ ವದಂತಿಗಳಿಗೆ ತದ್ವಿರುದ್ಧವಾಗಿ ಸಿ ಐ ಎಸ್ ಎಫ್ ಅವರ ಕಾರ್ಯವನ್ನು ಶ್ಲಾಘಿಸಿ ಪುರಸ್ಕರಿಸಿ ಒಂದು ಮೇಲ್ಪಂಕ್ತಿಯನ್ನು ಹಾಕಿದೆ.

ಮೊದಲಿನ ಟ್ವೀಟ್ ಅನ್ನು ಉಲ್ಲೇಖಿಸಿ ಮತ್ತೊಂದು ಟ್ವೀಟ್ ಮಾಡಿರುವ ಸಿ ಐ ಎಸ್ ಎಫ್, ‘ಈ ಟ್ವೀಟ್ನಲ್ಲಿ ಹೇಳಿರುವ ಸಂಗತಿಗಳು ಸತ್ಯಕ್ಕೆ ದೂರ ಮತ್ತು ಆಧಾರರಹಿತವಾಗಿವೆ. ವಾಸ್ತವ ಸಂಗತಿಯೆಂದರೆ, ಸದರಿ ಅಧಿಕಾರಿಯನ್ನು ಅವರು ತೋರಿದ ಅಪ್ರತಿಮ ವೃತ್ತ್ತಿಪರತೆ ಮತ್ತು ಕರ್ತವ್ಯ ನಿಷ್ಠೆಯ ಹಿನ್ನೆಲೆಯಲ್ಲಿ ಸೂಕ್ತವಾಗಿ ಪುರಸ್ಕರಿಸಲಾಗಿದೆ,’  (sic) ಎಂದು ಹೇಳಿದೆ. ಒಬ್ಬ ಟ್ವಿಟರ್ ಯೂಸರ್ ಅಧಿಕಾರಿಯ ಮೇಲೆ ದಂಡ ವಿಧಿಸಲಾಗುವುದು ಎಂದು ತನ್ನ ಟ್ವೀಟ್ನಲ್ಲಿ ಹೇಳಿದ್ದ. ಪ್ರಾಯಶಃ ಅವನು ನಟನ ಭಕ್ತನಿರಬಹುದು!

ಸಿಐಎಸ್ ಎಫ್ ಮಾಡಿರುವುದು ನಿಜಕ್ಕೂ ಅನುಕರಣೀಯ. ಸೆಲೆಬ್ರಿಟಿಗಳು ಉಳಿದ ಜನಸಾಮಾನ್ಯರಿಗಿಂತ ಹೆಚ್ಚು ಸಮಾನರು ಅಲ್ಲ ಎನ್ನವುದನ್ನು ಸಲ್ಮಾನ್​ನಂಥ ನಟರು ಅರ್ಥಮಾಡಿಕೊಳ್ಳಬೇಕಿದೆ.

ಕಳೆದ ಗುರುವಾರ ಸಲ್ಮಾನ್ ಖಾನ್ ಮತ್ತು ನಟಿ ಕತ್ರೀನಾ ಕೈಫ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಮೂಲಗಳ ಪ್ರಕಾರ ಅವರು ‘ಟೈಗರ್ 3’ ಚಿತ್ರದ ಶೂಟ್​ಗಾಗಿ ರಷ್ಯಾಗೆ ತೆರಳಿದರು.

ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅವ್ಯಾಹತವಾಗಿ ಶೇರ್ ಆಗಿರುವ ವಿಡಿಯೋನಲ್ಲಿ ಸಲ್ಮಾನ್ ಮತ್ತು ಕತ್ರೀನಾ ಏರ್ಪೋರ್ಟ್ಗೆ ಆಗಮಿಸುತ್ತಿದ್ದು ಅವರ ಹಿಂದೆ ಮಾಧ್ಯಮದವರು ಬರುತ್ತಿದ್ದಾರೆ. ನಿಲ್ದಾಣದಲ್ಲಿ ಸಲ್ಮಾನ್ನನ್ನು ತಡೆದ ಸಿ ಐ ಎಸ್ಎಫ್ ಆಧಿಕಾರಿಯು ಟರ್ಮಿನಲ್ ಪ್ರವೇಶಿಸದಂತೆ ತಡೆದು, ಸೆಕ್ಯುರಿಟಿ ಚೆಕ್ ಪಾಯಿಂಟ್ನಿಂದ ಕ್ಲಿಯರೆನ್ಸ್ ಪಡೆಯುವಂತೆ ಹೇಳುತ್ತಿರುವುದು ಕಾಣಿಸುತ್ತಿದೆ.

ಟೈಗರ್ 3 ಚಿತ್ರವು ‘ಏಕ್ ಥಾ ಟೈಗರ್’ ಸಿನಿಮಾದ ಸೀಕ್ವೆಲ್ ಆಗಿದೆ. ಚಿತ್ರವನ್ನು ಮನೀಶ್ ಶರ್ಮ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ:  ತಾಲಿಬಾನಿಗಳ ಕ್ರೌರ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಲ್ಮಾನ್​ ಖಾನ್​ ನಾಯಕಿ; 20 ವರ್ಷ ಹಿಂದಕ್ಕೆ ಹೋದ ಆಪ್ಘನ್​

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ