AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​

ತನ್ನಮನೆಯ ಮುಂಭಾಗದಲ್ಲೇ ಡೆಲಿವರಿ ಹುಡುಗ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ಗ್ರಾಹಕ ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Jul 25, 2024 | 11:50 AM

Share

ಓಲಾ ಫುಡ್ಸ್‌ನಿಂದ ನೋಯ್ಡಾದ ಉದ್ಯಮಿಯೊಬ್ಬರು ಫ್ರೆಂಚ್ ಫ್ರೈಸ್ ಆರ್ಡರ್​​ ಮಾಡಿದ್ದರು. 40 ನಿಮಿಷವಾದರೂ ಬಾರದೇ ಇದ್ದರಿಂದ ಮನೆಯಿಂದ ಕೆಳಗಡೆ ಇಳಿದು ಹೋಗಿ ಡೆಲಿವರಿ ಬಾಯ್ಗೆ ಕರೆಮಾಡಿದ್ದಾರೆ. ಈ ವೇಳೆ ಮನೆಯ ಮುಂಭಾಗದಲ್ಲೇ ಡೆಲಿವರಿ ಏಜೆಂಟ್ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಉದ್ಯಮಿ ತನ್ನ ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಉದ್ಯಮಿ ಅಮನ್ ಬಿರೇಂದ್ರ ಜೈಸ್ವಾಲ್ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನದಲ್ಲಿ 3.6 ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. “ಓಲಾ ನಿಮ್ಮ ಆಹಾರ ವಿತರಣಾ ಪಾಲುದಾರರು ತಮ್ಮ ಕೆಲಸವನ್ನು ಹೀಗೆ ಮಾಡುತ್ತಿದ್ದಾರೆ, ಮೊದಲು ಅವರು ಬರಲು ಹೆಚ್ಚುವರಿ 10 ರೂಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು. ನಾನು 10 ರೂ. ಹೆಚ್ಚುವರಿಯಾಗಿ ಪಾವತಿಸಿದ ಮೇಲೂ ನನ್ನನ್ನು ಸುಮಾರು 45 ನಿಮಿಷಗಳ ಕಾಲ ಕಾಯಿಸಿದ್ದಾರೆ. ಬಳಿಕ ಡೆಲಿವರಿ ಮಾಡಬೇಕಿದ್ದ ಆಹಾರವನ್ನು ಕೂಡ ಅವರೇ ತಿಂದಿದ್ದಾರೆ” ಎಂದು ಕ್ಯಾಪ್ಷನ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ಒಬ್ಬ ಬಳಕೆದಾರರು, “ಇದಕ್ಕಾಗಿಯೇ ನಾನು ಝೊಮಾಟೊಗೆ ಆದ್ಯತೆ ನೀಡುತ್ತೇನೆ” ಎಂದು ಬರೆದರೆ, ಮತ್ತೊಬ್ಬರು “ಅತ್ಯಂತ ಕೆಟ್ಟ ಆಹಾರ ವಿತರಣಾ ಸೇವೆ, ಕೆಟ್ಟ ಅಪ್ಲಿಕೇಶನ್ Ola. ಜನರು ಇದನ್ನು ಬಳಸುವುದನ್ನು ನಿಲ್ಲಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ