AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​

ತನ್ನಮನೆಯ ಮುಂಭಾಗದಲ್ಲೇ ಡೆಲಿವರಿ ಹುಡುಗ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ಗ್ರಾಹಕ ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

Viral Video: ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Jul 25, 2024 | 11:50 AM

ಓಲಾ ಫುಡ್ಸ್‌ನಿಂದ ನೋಯ್ಡಾದ ಉದ್ಯಮಿಯೊಬ್ಬರು ಫ್ರೆಂಚ್ ಫ್ರೈಸ್ ಆರ್ಡರ್​​ ಮಾಡಿದ್ದರು. 40 ನಿಮಿಷವಾದರೂ ಬಾರದೇ ಇದ್ದರಿಂದ ಮನೆಯಿಂದ ಕೆಳಗಡೆ ಇಳಿದು ಹೋಗಿ ಡೆಲಿವರಿ ಬಾಯ್ಗೆ ಕರೆಮಾಡಿದ್ದಾರೆ. ಈ ವೇಳೆ ಮನೆಯ ಮುಂಭಾಗದಲ್ಲೇ ಡೆಲಿವರಿ ಏಜೆಂಟ್ ಆರ್ಡರ್​​​ ಮಾಡಿದ್ದ ಫುಡ್​​ ತಿನ್ನುತ್ತಿರುವುದನ್ನು ಕಂಡು ದಂಗಾಗಿ ಹೋಗಿದ್ದಾರೆ. ಈ ಘಟನೆಯನ್ನು ಉದ್ಯಮಿ ತನ್ನ ಫೋನಿನಲ್ಲಿ ಸೆರೆ ಹಿಡಿದ್ದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಉದ್ಯಮಿ ಅಮನ್ ಬಿರೇಂದ್ರ ಜೈಸ್ವಾಲ್ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನದಲ್ಲಿ 3.6 ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. “ಓಲಾ ನಿಮ್ಮ ಆಹಾರ ವಿತರಣಾ ಪಾಲುದಾರರು ತಮ್ಮ ಕೆಲಸವನ್ನು ಹೀಗೆ ಮಾಡುತ್ತಿದ್ದಾರೆ, ಮೊದಲು ಅವರು ಬರಲು ಹೆಚ್ಚುವರಿ 10 ರೂಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು. ನಾನು 10 ರೂ. ಹೆಚ್ಚುವರಿಯಾಗಿ ಪಾವತಿಸಿದ ಮೇಲೂ ನನ್ನನ್ನು ಸುಮಾರು 45 ನಿಮಿಷಗಳ ಕಾಲ ಕಾಯಿಸಿದ್ದಾರೆ. ಬಳಿಕ ಡೆಲಿವರಿ ಮಾಡಬೇಕಿದ್ದ ಆಹಾರವನ್ನು ಕೂಡ ಅವರೇ ತಿಂದಿದ್ದಾರೆ” ಎಂದು ಕ್ಯಾಪ್ಷನ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ಒಬ್ಬ ಬಳಕೆದಾರರು, “ಇದಕ್ಕಾಗಿಯೇ ನಾನು ಝೊಮಾಟೊಗೆ ಆದ್ಯತೆ ನೀಡುತ್ತೇನೆ” ಎಂದು ಬರೆದರೆ, ಮತ್ತೊಬ್ಬರು “ಅತ್ಯಂತ ಕೆಟ್ಟ ಆಹಾರ ವಿತರಣಾ ಸೇವೆ, ಕೆಟ್ಟ ಅಪ್ಲಿಕೇಶನ್ Ola. ಜನರು ಇದನ್ನು ಬಳಸುವುದನ್ನು ನಿಲ್ಲಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ