AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ

Manzil : ರಾಜಸ್ಥಾನ ಮಹಿಳಾ ಆಯೋಗದ ಅಧ್ಯಕ್ಷೆ ರೆಹಾನಾ ರಯಾಝ್​ ಚಿಷ್ಟಿ ''ವಿಡಿಯೋ ಹಂಚಿಕೊಂಡಿದ್ದಕ್ಕೆ ಧನ್ಯವಾದ ಆನಂದ್​ಜೀ, ಇದೆಲ್ಲವನ್ನೂ ಮುಂದುವರೆಸಿಕೊಂಡು ಹೋಗಬೇಕು. ವಯಸ್ಸು ಎಂದೂ ಅಡ್ಡಿಯಾಗಬಾರದು” ಎಂದಿದ್ದಾರೆ.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ
ರಿಮಝಿಮ ಗಿರೇ ಸಾವನ್​- ಹಾಡನ್ನು ಮರುಸೃಷ್ಟಿಸಿದ ಜೋಡಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 03, 2023 | 7:04 PM

Share

Couple : ರಿಮಝಿಮ ಗಿರೇ ಸಾವನ್ (RimJhim Gire Sawan), ಅಮಿತಾಬ್​ ಬಚ್ಚನ್ (Amitab Bacchan) ಮತ್ತು ಮೌಶಮಿ ಚಟರ್ಜಿ ಅಭಿನಯದ ”ಮಂಜಿಲ್​”  ಸಿನೆಮಾದ ಈ ಹಾಡು ಕೇಳುತ್ತಿರುವಾಗಲೇ ಕಿಟಕಿಯಾಚೆ ಧೋಮಳೆ. ಹಾಡು ನಿಂತಾಗ ಪರದೆ ಮೇಲಿರುವವರು ಅವರಲ್ಲವೆ…? ಮತ್ತೆ  ಇವರು ಯಾರು? ಇವರು ನಡುವಯಸ್ಸಿನ ಜೋಡಿ. ಅದೇ ಸಮುದ್ರ ಅದೇ ತೀರ ಅದೇ ಹಾಡು ಅದೇ ಹೆಜ್ಜೆ ಅದೇ ಭಾವ. ಈ ಜೋಡಿ ಅದೇ ಹಾಡನ್ನು ಹೀಗೆ ಮರುಸೃಷ್ಟಿಸಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಈ ವಿಡಿಯೋ ನೋಡುತ್ತ ರೋಮಾಂಚನಗೊಳ್ಳುತ್ತಿದ್ದಾರೆ. ಉದ್ಯಮಿ ಆನಂದ್ ಮಹೀಂದ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

”ಮುಂಬೈನ ಬೀಚಿನಲ್ಲಿ ಈ ಜೋಡಿ ವಿಡಿಯೋ ಅನ್ನು ಮರುಸೃಷ್ಟಿಸಿದೆ. ಈ ಜೋಡಿಯನ್ನು ಈ ಮೂಲಕ ನಾನು ಅಭಿನಂದಿಸುತ್ತಿದ್ದೇನೆ. ”ನಿಮ್ಮ ಕಲ್ಪನೆಗೆ ರೆಕ್ಕೆ ಹಚ್ಚಿಕೊಂಡರೆ ನಿಮಗೆ ಬೇಕಾದಂತೆ ನಿಮ್ಮ ಜೀವನವನ್ನು ಛಂದಗೊಳಿಸಿಕೊಳ್ಳಬಹುದು” ಎಂದು ಅವರು ನಮಗೆ ಸಂದೇಶ ರವಾನಿಸುತ್ತಿದ್ದಾರೆ!” ಎಂದಿದ್ದಾರೆ ಆನಂದ್ ಮಹೀಂದ್ರಾ.

ಇದನ್ನೂ ಓದು : Viral Video: ಅಣಾ ನೀನೆಷ್ಟಾರಾ ಕಣ್ಕಟ್ಟು ಬಯಲು ಮಾಡ್ಕೋ ನಾವ್ ಮಾತ್ರ ಆ ಹುಡುಗೀನೇ ನೋಡೋದು; ಸಮೂಹ ಸನ್ನಿಗೊಳಗಾದ ನೆಟ್ಟಿಗರು

ಈ ಜೋಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿದೆ ಆದ್ದರಿಂದ ಇಂಥ ಮಳೆಗಾಲದ ದಿನಗಳನ್ನು ಆನಂದಿಸುತ್ತಿದ್ದಾರೆ ಎಂದಿದ್ದಾರೆ ಒಬ್ಬರು. ವಯಸ್ಸು ಒಂದು ಅಂಕಿಸಂಖ್ಯೆ ಅಷ್ಟೇ. ಆದರೆ ನಿಮ್ಮೊಳಗಿನ ನಿಮ್ಮ ಮಗುತನ ಯಾವತ್ತೂ ಕಾಪಾಡಿಕೊಳ್ಳಿ ಎಂದಿದ್ಧಾರೆ ಮತ್ತೊಬ್ಬರು. ನಿನ್ನೆಯಷ್ಟೇ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನು ಓದಿದ ನಿಮಗೀಗ ಮಳೆಯಲ್ಲಿ ಹೋಗಿ ನೆನಯಬೇಕು ಹಾಗೇ ಹೆಜ್ಜೆ ಹಾಕಬೇಕು ಅನ್ನಿಸುತ್ತಿದೆಯಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:59 pm, Mon, 3 July 23

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ