AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ

Manzil : ರಾಜಸ್ಥಾನ ಮಹಿಳಾ ಆಯೋಗದ ಅಧ್ಯಕ್ಷೆ ರೆಹಾನಾ ರಯಾಝ್​ ಚಿಷ್ಟಿ ''ವಿಡಿಯೋ ಹಂಚಿಕೊಂಡಿದ್ದಕ್ಕೆ ಧನ್ಯವಾದ ಆನಂದ್​ಜೀ, ಇದೆಲ್ಲವನ್ನೂ ಮುಂದುವರೆಸಿಕೊಂಡು ಹೋಗಬೇಕು. ವಯಸ್ಸು ಎಂದೂ ಅಡ್ಡಿಯಾಗಬಾರದು” ಎಂದಿದ್ದಾರೆ.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ
ರಿಮಝಿಮ ಗಿರೇ ಸಾವನ್​- ಹಾಡನ್ನು ಮರುಸೃಷ್ಟಿಸಿದ ಜೋಡಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 03, 2023 | 7:04 PM

Share

Couple : ರಿಮಝಿಮ ಗಿರೇ ಸಾವನ್ (RimJhim Gire Sawan), ಅಮಿತಾಬ್​ ಬಚ್ಚನ್ (Amitab Bacchan) ಮತ್ತು ಮೌಶಮಿ ಚಟರ್ಜಿ ಅಭಿನಯದ ”ಮಂಜಿಲ್​”  ಸಿನೆಮಾದ ಈ ಹಾಡು ಕೇಳುತ್ತಿರುವಾಗಲೇ ಕಿಟಕಿಯಾಚೆ ಧೋಮಳೆ. ಹಾಡು ನಿಂತಾಗ ಪರದೆ ಮೇಲಿರುವವರು ಅವರಲ್ಲವೆ…? ಮತ್ತೆ  ಇವರು ಯಾರು? ಇವರು ನಡುವಯಸ್ಸಿನ ಜೋಡಿ. ಅದೇ ಸಮುದ್ರ ಅದೇ ತೀರ ಅದೇ ಹಾಡು ಅದೇ ಹೆಜ್ಜೆ ಅದೇ ಭಾವ. ಈ ಜೋಡಿ ಅದೇ ಹಾಡನ್ನು ಹೀಗೆ ಮರುಸೃಷ್ಟಿಸಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಈ ವಿಡಿಯೋ ನೋಡುತ್ತ ರೋಮಾಂಚನಗೊಳ್ಳುತ್ತಿದ್ದಾರೆ. ಉದ್ಯಮಿ ಆನಂದ್ ಮಹೀಂದ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

”ಮುಂಬೈನ ಬೀಚಿನಲ್ಲಿ ಈ ಜೋಡಿ ವಿಡಿಯೋ ಅನ್ನು ಮರುಸೃಷ್ಟಿಸಿದೆ. ಈ ಜೋಡಿಯನ್ನು ಈ ಮೂಲಕ ನಾನು ಅಭಿನಂದಿಸುತ್ತಿದ್ದೇನೆ. ”ನಿಮ್ಮ ಕಲ್ಪನೆಗೆ ರೆಕ್ಕೆ ಹಚ್ಚಿಕೊಂಡರೆ ನಿಮಗೆ ಬೇಕಾದಂತೆ ನಿಮ್ಮ ಜೀವನವನ್ನು ಛಂದಗೊಳಿಸಿಕೊಳ್ಳಬಹುದು” ಎಂದು ಅವರು ನಮಗೆ ಸಂದೇಶ ರವಾನಿಸುತ್ತಿದ್ದಾರೆ!” ಎಂದಿದ್ದಾರೆ ಆನಂದ್ ಮಹೀಂದ್ರಾ.

ಇದನ್ನೂ ಓದು : Viral Video: ಅಣಾ ನೀನೆಷ್ಟಾರಾ ಕಣ್ಕಟ್ಟು ಬಯಲು ಮಾಡ್ಕೋ ನಾವ್ ಮಾತ್ರ ಆ ಹುಡುಗೀನೇ ನೋಡೋದು; ಸಮೂಹ ಸನ್ನಿಗೊಳಗಾದ ನೆಟ್ಟಿಗರು

ಈ ಜೋಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿದೆ ಆದ್ದರಿಂದ ಇಂಥ ಮಳೆಗಾಲದ ದಿನಗಳನ್ನು ಆನಂದಿಸುತ್ತಿದ್ದಾರೆ ಎಂದಿದ್ದಾರೆ ಒಬ್ಬರು. ವಯಸ್ಸು ಒಂದು ಅಂಕಿಸಂಖ್ಯೆ ಅಷ್ಟೇ. ಆದರೆ ನಿಮ್ಮೊಳಗಿನ ನಿಮ್ಮ ಮಗುತನ ಯಾವತ್ತೂ ಕಾಪಾಡಿಕೊಳ್ಳಿ ಎಂದಿದ್ಧಾರೆ ಮತ್ತೊಬ್ಬರು. ನಿನ್ನೆಯಷ್ಟೇ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನು ಓದಿದ ನಿಮಗೀಗ ಮಳೆಯಲ್ಲಿ ಹೋಗಿ ನೆನಯಬೇಕು ಹಾಗೇ ಹೆಜ್ಜೆ ಹಾಕಬೇಕು ಅನ್ನಿಸುತ್ತಿದೆಯಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:59 pm, Mon, 3 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ