AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ

Manzil : ರಾಜಸ್ಥಾನ ಮಹಿಳಾ ಆಯೋಗದ ಅಧ್ಯಕ್ಷೆ ರೆಹಾನಾ ರಯಾಝ್​ ಚಿಷ್ಟಿ ''ವಿಡಿಯೋ ಹಂಚಿಕೊಂಡಿದ್ದಕ್ಕೆ ಧನ್ಯವಾದ ಆನಂದ್​ಜೀ, ಇದೆಲ್ಲವನ್ನೂ ಮುಂದುವರೆಸಿಕೊಂಡು ಹೋಗಬೇಕು. ವಯಸ್ಸು ಎಂದೂ ಅಡ್ಡಿಯಾಗಬಾರದು” ಎಂದಿದ್ದಾರೆ.

Viral Video: ರಿಮಝಿಮ ಗಿರೆ ಸಾವನ್​; ಮುಂಬೈನಲ್ಲಿ ಈ ಹಾಡನ್ನು ಮರುಸೃಷ್ಟಿಸಿದ ಜೋಡಿ
ರಿಮಝಿಮ ಗಿರೇ ಸಾವನ್​- ಹಾಡನ್ನು ಮರುಸೃಷ್ಟಿಸಿದ ಜೋಡಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 03, 2023 | 7:04 PM

Share

Couple : ರಿಮಝಿಮ ಗಿರೇ ಸಾವನ್ (RimJhim Gire Sawan), ಅಮಿತಾಬ್​ ಬಚ್ಚನ್ (Amitab Bacchan) ಮತ್ತು ಮೌಶಮಿ ಚಟರ್ಜಿ ಅಭಿನಯದ ”ಮಂಜಿಲ್​”  ಸಿನೆಮಾದ ಈ ಹಾಡು ಕೇಳುತ್ತಿರುವಾಗಲೇ ಕಿಟಕಿಯಾಚೆ ಧೋಮಳೆ. ಹಾಡು ನಿಂತಾಗ ಪರದೆ ಮೇಲಿರುವವರು ಅವರಲ್ಲವೆ…? ಮತ್ತೆ  ಇವರು ಯಾರು? ಇವರು ನಡುವಯಸ್ಸಿನ ಜೋಡಿ. ಅದೇ ಸಮುದ್ರ ಅದೇ ತೀರ ಅದೇ ಹಾಡು ಅದೇ ಹೆಜ್ಜೆ ಅದೇ ಭಾವ. ಈ ಜೋಡಿ ಅದೇ ಹಾಡನ್ನು ಹೀಗೆ ಮರುಸೃಷ್ಟಿಸಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಈ ವಿಡಿಯೋ ನೋಡುತ್ತ ರೋಮಾಂಚನಗೊಳ್ಳುತ್ತಿದ್ದಾರೆ. ಉದ್ಯಮಿ ಆನಂದ್ ಮಹೀಂದ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

”ಮುಂಬೈನ ಬೀಚಿನಲ್ಲಿ ಈ ಜೋಡಿ ವಿಡಿಯೋ ಅನ್ನು ಮರುಸೃಷ್ಟಿಸಿದೆ. ಈ ಜೋಡಿಯನ್ನು ಈ ಮೂಲಕ ನಾನು ಅಭಿನಂದಿಸುತ್ತಿದ್ದೇನೆ. ”ನಿಮ್ಮ ಕಲ್ಪನೆಗೆ ರೆಕ್ಕೆ ಹಚ್ಚಿಕೊಂಡರೆ ನಿಮಗೆ ಬೇಕಾದಂತೆ ನಿಮ್ಮ ಜೀವನವನ್ನು ಛಂದಗೊಳಿಸಿಕೊಳ್ಳಬಹುದು” ಎಂದು ಅವರು ನಮಗೆ ಸಂದೇಶ ರವಾನಿಸುತ್ತಿದ್ದಾರೆ!” ಎಂದಿದ್ದಾರೆ ಆನಂದ್ ಮಹೀಂದ್ರಾ.

ಇದನ್ನೂ ಓದು : Viral Video: ಅಣಾ ನೀನೆಷ್ಟಾರಾ ಕಣ್ಕಟ್ಟು ಬಯಲು ಮಾಡ್ಕೋ ನಾವ್ ಮಾತ್ರ ಆ ಹುಡುಗೀನೇ ನೋಡೋದು; ಸಮೂಹ ಸನ್ನಿಗೊಳಗಾದ ನೆಟ್ಟಿಗರು

ಈ ಜೋಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿದೆ ಆದ್ದರಿಂದ ಇಂಥ ಮಳೆಗಾಲದ ದಿನಗಳನ್ನು ಆನಂದಿಸುತ್ತಿದ್ದಾರೆ ಎಂದಿದ್ದಾರೆ ಒಬ್ಬರು. ವಯಸ್ಸು ಒಂದು ಅಂಕಿಸಂಖ್ಯೆ ಅಷ್ಟೇ. ಆದರೆ ನಿಮ್ಮೊಳಗಿನ ನಿಮ್ಮ ಮಗುತನ ಯಾವತ್ತೂ ಕಾಪಾಡಿಕೊಳ್ಳಿ ಎಂದಿದ್ಧಾರೆ ಮತ್ತೊಬ್ಬರು. ನಿನ್ನೆಯಷ್ಟೇ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನು ಓದಿದ ನಿಮಗೀಗ ಮಳೆಯಲ್ಲಿ ಹೋಗಿ ನೆನಯಬೇಕು ಹಾಗೇ ಹೆಜ್ಜೆ ಹಾಕಬೇಕು ಅನ್ನಿಸುತ್ತಿದೆಯಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:59 pm, Mon, 3 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!