AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ

Desi Indian Jugaad : ಅನಿವಾರ್ಯತೆ, ಸೌಲಭ್ಯಗಳ ಕೊರತೆ ಇದ್ದಲ್ಲಿ ಹೊಸ ಅನ್ವೇಷಣೆಗಳು ಯಾವಾಗಲೂ ಚಾಲ್ತಿಯಲ್ಲಿರುತ್ತವೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

Viral Video : ಕೊಟ್ಟಿಗೆಯಲ್ಲಿ ಕಾಡುವ ಸೊಳ್ಳೆಗಳಿಗಾಗಿ ಹೀಗೊಂದು ದೇಸೀ ಉಪಾಯ
ಕೊಟ್ಟಿಗೆಯ ಸೊಳ್ಳೆಗಳನ್ನು ಓಡಿಸಲು ಬೇವಿನಹೊಗೆ ಮತ್ತು ಫ್ಯಾನ್​ ಗಾಳಿ
TV9 Web
| Edited By: |

Updated on: Sep 17, 2022 | 4:58 PM

Share

Viral Video : ಹಸುವಿನ ಕೊಟ್ಟಿಗೆಯಲ್ಲಿ ಸೊಳ್ಳೆಗಳನ್ನು ಓಡಿಸಲು ಹಳ್ಳಿಗೊರೊಬ್ಬರು ಕಂಡುಕೊಂಡು ಈ ದೇಸೀ ತಂತ್ರವುಳ್ಳ ವಿಡಿಯೋ ಇತ್ತೀಚೆಗೆ ಮತ್ತೆ ವೈರಲ್ ಆಗಿದೆ. ಎಲ್ಲಿ ಅನಿವಾರ್ಯತೆ ಮತ್ತು ಸೌಲಭ್ಯಗಳ ಕೊರತೆ ಇರುತ್ತದೆಯೋ ಅಲ್ಲಿಯೇ ಹೀಗೆ ಹೊಸಹೊಸ ಆಲೋಚನೆ, ಪ್ರಯೋಗಗಳು ಹುಟ್ಟಿಕೊಳ್ಳುವುದು. ಈ ವಿಡಿಯೋದಲ್ಲಿ ಹಸುಗಳು ತಮ್ಮ ಪಾಡಿಗೆ ಕೊಟ್ಟಿಗೆಯಲ್ಲಿ ಮೇಯುತ್ತಿವೆ. ಇತ್ತ ಬೇವಿನಸೊಪ್ಪಿನ ಹೊಗೆ ಹಾಕಿ ಅದರ ಪಕ್ಕದಲ್ಲಿ ಟೇಬಲ್​ ಫ್ಯಾನ್​ ಇರಿಸಲಾಗಿದೆ. ಆ ಫ್ಯಾನ್​ಗಾಳಿಯಿಂದ ಹೊಗೆ ಕೊಟ್ಟಿಗೆ ಪೂರ್ತಿ ಹರಡಿ ಸೊಳ್ಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತಿದೆ.

Desi Indian Jhasu Jugad from india

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಐಎಎಸ್ ಅಧಿಕಾರಿ ಅವನೀಶ್​ ಶರಣ್​ ಈ ವಿಡಿಯೋ ಹಂಚಿಕೊಂಡಿದ್ದಾರೆ. ಆನಂತರ ರೆಡ್ಡಿಟ್​ನಲ್ಲಿ ಶುಕ್ರವಾರದಂದು ಮರುಪೋಸ್ಟ್​ಗೊಂಡಿದೆ. ರೆಡ್ಡಿಟ್​ ಖಾತೆದಾರರು, ಪ್ರಾಣಿಗಳ ರಕ್ಷಣೆಗೆ ಇಂಥ ದೇಸೀ ಉಪಾಯ ಕಂಡುಕೊಂಡ ಹಳ್ಳಿಗರನ್ನು ಪ್ರಶಂಸಿಸಿದ್ದಾರೆ.

‘ಎಂಥ ಪ್ರತಿಭಾವಂತ ಜನರು ನಮ್ಮಲ್ಲಿದ್ದಾರೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಸೃಜನಶೀಲತೆಗೆ ಇದೊಂದು ಉತ್ತಮ ಮಾದರಿ’ ಎಂದು ಇನ್ನೊಬ್ಬರು ಹೇಳಿದ್ದಾರೆ. ‘ಈ ದೇಸೀ ಜುಗಾಡ್​ ನನಗೆ ಬಹಳ ಇಷ್ಟವಾಯಿತು’ ಎಂದು ಮಗದೊಬ್ಬರು ಹೇಳಿದ್ದಾರೆ. ‘ಈ ಕಲ್ಪನೆಯೇ ಅದ್ಭುತ’ ಎಂದು ಇನ್ನೊಬ್ಬರು ಹೇಳಿದ್ದಾರೆ.

ಸೃಜನಶೀಲ ಮತ್ತು ರಚನಾತ್ಮಕ ಪ್ರಯೋಗಗಳಿಗೆ ಯಾವತ್ತೂ ಮನ್ನಣೆ ಇದ್ದೇ ಇದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ