AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗ್ರಾಹಕನಿಗೆ ಯೂಸರ್‌ ಮಾನ್ಯುಯಲ್‌ ಕೊಡದ ಮೊಬೈಲ್‌ ಕಂಪೆನಿಗೆ 5 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

ಮೊಬೈಲ್‌ ಖರೀದಿಸಿದಾಗ ಯೂಸರ್‌ ಮಾನ್ಯುಯಲ್‌ ನೀಡದ ಮೊಬೈಲ್‌ ಕಂಪೆನಿಯ ವಿರುದ್ಧ ಬೆಂಗಳೂರಿನ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಗ್ರಾಹಕರ ನ್ಯಾಯಾಲಯವು ಗ್ರಾಹಕನಿಗೆ ಕೈಪಿಡಿ ನೀಡದ ಒನ್‌ ಪ್ಲಸ್‌ ಇಂಡಿಯಾಗೆ 5 ಸಾವಿರ ರೂ. ದಂಡ ವಿಧಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ಗ್ರಾಹಕನಿಗೆ ಯೂಸರ್‌ ಮಾನ್ಯುಯಲ್‌ ಕೊಡದ ಮೊಬೈಲ್‌ ಕಂಪೆನಿಗೆ 5 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 09, 2024 | 4:22 PM

Share

ಯಾವುದೇ ಎಲೆಕ್ಟ್ರಾನಿಕ್‌ ವಸ್ತು ಅಥವಾ ಗ್ಯಾಜೆಟ್‌ಗಳನ್ನು ಕೊಂಡಾಗ ಆ ಕಂಪೆನಿಯು ಬಳಕೆದಾರರ ಕೈ ಪಿಡಿ ಅಂದರೆ ಯೂಸರ್‌ ಮಾನ್ಯುಯಲ್‌ ಅನ್ನು ಕೊಟ್ಟಿರುತ್ತಾರೆ. ಯಾಕಂದ್ರೆ ಕೈ ಪಿಡಿಯ ಸಹಾಯದಿಂದ ಖರೀದಿಸಿದ ಉಪಕರಣದಲ್ಲಿ ಯಾವುದೇ ಸಮಸ್ಯೆ ಅಥವಾ ಲೋಪದೋಷಗಳು ಕಂಡು ಬಂದಾಗ ಅದರ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟೇ ಅಲ್ಲದೆ ಆ ಉಪಕರಣದ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಕೂಡಾ ತಿಳಿದುಕೊಳ್ಳಬಹುದು. ಆದ್ರೆ ಇಲ್ಲೊಂದು ಮೊಬೈಲ್‌ ಕಂಪೆನಿ ಫೋನ್‌ ಖರೀದಿಸಿದ ಗ್ರಾಹಕನಿಗೆ ಯಾವುದೇ ರೀತಿಯ ಕೈಪಿಡಿ ನೀಡಿಲ್ಲ. ಈ ಬಗ್ಗೆ ಆ ವ್ಯಕ್ತಿ ಗ್ರಾಹಕರ ನ್ಯಾಯಾಲಯದ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಮೊಬೈಲ್‌ ಕಂಪೆನಿಗೆ ಬರೋಬ್ಬರಿ 5 ಸಾವಿರ ರೂ. ದಂಡ ವಿಧಿಸಿದೆ.

ವರದಿಗಳ ಪ್ರಕಾರ ಬೆಂಗಳೂರಿನ ಸಂಜಯ್‌ ನಗರದ ನಿವಾಸಿ ಎಸ್.ಎಂ ರಮೇಶ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ 24,598 ರೂ. ಗಳ ಒನ್‌ಪ್ಲಸ್‌ ನಾರ್ಡ್‌ ಸಿಇ 3 ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಿದ್ದರು. ಮೊಬೈಲ್‌ ಖರೀದಿಸಿದ ಸಂದರ್ಭದಲ್ಲಿ ಕಂಪೆನಿ ಇವರಿಗೆ ಯೂಸರ್‌ ಮಾನ್ಯುಯಲ್‌ ಅನ್ನು ನೀಡಿರಲಿಲ್ಲ. ಇದರಿಂದಾಗಿ ಅವರು ಫೋನ್‌ನ ವಾರಂಟಿ ಮಾಹಿತಿ ಮತ್ತು ಕಂಪೆನಿಯ ವಿಳಾಸವನ್ನು ಕಂಡುಹಿಡಿಯಲು ಪರದಾಡಬೇಕಾಯಿತು. ಈ ಬಗ್ಗೆ ಕಂಪೆನಿಯನ್ನು ಪದೇ ಪದೇ ಸಂಪರ್ಕಿಸಿದಾಗ ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಅಂದರೆ ಏಪ್ರಿಲ್‌ನಲ್ಲಿ ಕೈಪಿಡಿಯನ್ನು ಕಳುಹಿಸಿಕೊಟ್ಟಿತು. ಗ್ರಾಹಕರ ಸಮಸ್ಯೆಗಳಿಗೆ ಸರಿಯಾದ ಸಮಯಕ್ಕೆ ಸ್ಪಂದಿಸದಿದ್ದ ಕಾರಣಕ್ಕೆ ಬೇಸರಗೊಂಡು ಹಾಗೂ ಮಾನಸಿಕ ಯಾತನೆ ಅನುಭವಿಸಿದ ರಮೇಶ್‌ ಜೂನ್‌ನಲ್ಲಿ ಈ ಬಗ್ಗೆ ಬೆಂಗಳೂರಿನ ಗ್ರಾಹಕರ ನ್ಯಾಯಾಲಯದಲ್ಲಿ ದೂರನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಯಾಂಡ್‌ವಿಚ್‌ ಮಾರಾಟ ಮಾಡಿ ವರ್ಷಕ್ಕೆ 50 ಕೋಟಿ ರೂ. ಗಳಿಸುತ್ತಿರುವ ಫ್ರೆಂಚ್‌ ವ್ಯಕ್ತಿ

ನವೆಂಬರ್‌ 29 ರಂದು ಈ ಅರ್ಜಿಯ ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ “ಇದು ಒನ್‌ ಪ್ಲಸ್‌ ಇಂಡಿಯಾದ ಪರಿಪೂರ್ಣ ನಿರ್ಲಕ್ಷ್ಯ ಮತ್ತು ಉದಾಸೀನತೆಯಾಗಿದೆ, ಗ್ರಾಹಕರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವುದು ಯಾವುದೇ ಕಂಪೆನಿಯ ಕರ್ತವ್ಯವಾಗಿದೆ ಎಂದು ಹೇಳಿ ಗ್ರಾಹಕನಿಗೆ ಮಾನಸಿಕ ಯಾತನೆ ನೀಡಿದ್ದಕ್ಕೆ 5,000 ದಂಡ ಮತ್ತು ಆ ಗ್ರಾಹಕನ ಕಾನೂನು ಹೋರಾಟದ ವೆಚ್ಚಕ್ಕಾಗಿ 1, ಸಾವಿರ ರೂ. ಪರಿಹಾರ ನಿಡುವಂತೆ ಒನ್‌ ಪ್ಲಸ್‌ ಇಂಡಿಯಾಗೆ ಆದೇಶಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ