AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಘೋಷಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್‌, ಮೀಮ್ಸ್‌ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌
ವೈರಲ್​​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jan 09, 2025 | 3:52 PM

Share

ಮೈಸೂರಿನ ಹೊರವಲಯದಲ್ಲಿರುವ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿಸೆಂಬರ್‌ 31 ರಂದು ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ ಇನ್ಫೋಸಿಸ್‌ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಮತ್ತು ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್‌, ಮೀಮ್ಸ್‌ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಕೆಲ ಸಮಯಗಳ ಹಿಂದೆಯಷ್ಟೇ ಇನ್ಫೋಸಿಸ್‌ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಯುವಕರು ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಮಾತನ್ನೇ ಮುಂದಿಟ್ಟುಕೊಂಡು ಎಕ್ಸ್‌ ಪೇಜ್‌ ಒಂದರಲ್ಲಿ “ಮೈಸೂರು ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡ ಚಿರತೆ ಜ್ಯೂನಿಯರ್‌ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಸಖತ್ತಾಗಿ ಕಾರು ಚಲಾಯಿಸಿದ ತಾಯಿ; ಹೆಮ್ಮೆಯಿಂದ ವಿಡಿಯೋ ಶೇರ್‌ ಮಾಡಿದ ಮಗ

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

ಅದಕ್ಕೂ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗಿದೆ” ಎಂದು ಟ್ರೋಲ್‌ ಮಾಡಿದ್ದಾರೆ. ಇನ್ನೊಬ್ಬ ಎಕ್ಸ್‌ ಬಳಕೆದಾರರು ಚಿರತೆಯಿಂದ ಮಾತ್ರ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಸಾಧ್ಯ ಎಂದು ತಮಾಷೆ ಮಾಡಿದ್ದಾರೆ. ಈ ಎಲ್ಲಾ ಟ್ರೋಲ್‌ ಮೀಮ್ಸ್‌ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್