AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರಾಣಿಲೋಕದ ಬುದ್ಧಿಮತ್ತೆ, ಸಂವಹನಾ ಸಾಮರ್ಥ್ಯಕ್ಕೆ ಇದಕ್ಕಿಂತ ದಂಗುಬಡಿಸುವ ಉದಾಹರಣೆ ಬೇಕೆ?

Chimpanzee : ಕಂಪನಿಯ ಟೀಮ್ ಔಟಿಂಗುಗಳಲ್ಲಿ ಅಥವಾ ಮನೆಯಲ್ಲಿ ಮಕ್ಕಳ ಪಾರ್ಟಿಗಳಲ್ಲಿ ಮೂಕಾಭಿನಯದ (Dumb Charades) ಆಟ ಆಡಿದ್ದೀರಾ? ಇಲ್ಲೊಂದು ಚಿಂಪಾಂಝಿ ಕೈಸನ್ನೆಯಿಂದಲೇ ತನಗೆ ಬೇಕಾದ್ದು ಪಡೆಯುತ್ತಿದೆ.

Viral: ಪ್ರಾಣಿಲೋಕದ ಬುದ್ಧಿಮತ್ತೆ, ಸಂವಹನಾ ಸಾಮರ್ಥ್ಯಕ್ಕೆ ಇದಕ್ಕಿಂತ ದಂಗುಬಡಿಸುವ ಉದಾಹರಣೆ ಬೇಕೆ?
ನಿನ್ನ ಚೀಲದಲ್ಲಿ ಇದೆಯಲ್ಲ ಅದು ಬೇಕು
ಶ್ರೀದೇವಿ ಕಳಸದ
|

Updated on:Jun 21, 2023 | 4:30 PM

Share

Animals: ಪ್ರಾಣಿಲೋಕದ ಆಹಾರ ಸರಪಳಿಯಲ್ಲಿ ಅತ್ಯಂತ ಎತ್ತರದ ಸ್ಥಾನವೇರಿ ಕುಳಿತಿರುವ ಮನುಷ್ಯನಿಗೂ ಅವನ ಬಹುಹತ್ತಿರದ ಸಂಬಂಧಿ ಚಿಂಪಾಂಝಿಗೂ DNAಯಲ್ಲಿ ಇರುವ ಸಾಮ್ಯ ಶೇ. 99. ಅಂದರೆ ಕೇವಲ ಶೇ. 1 ರಷ್ಟು ಮಾರ್ಪಾಡು ಎಷ್ಟೊಂದು ವ್ಯತ್ಯಾಸಗಳಿಗೆ ಕಾರಣವಾಗಿದೆಯಲ್ಲವೇ? ಅದು ನಮ್ಮ ಇಂದಿನವರೆಗಿನ ಏಳ್ಗೆಗೆ ಕಾರಣವಾಗಿದ್ದಂತೂ ಹೌದು, ಆದರೆ ನಮ್ಮ ಅಪರಿಮಿತ “ಬುದ್ಧಿಮತ್ತೆ” ಹಾಗೂ ಕಾರ್ಯಕ್ಷಮತೆ ನಮ್ಮ ವಿನಾಶಕ್ಕೂ ಕಾರಣವಾಗಬಹುದೆಂಬುದೂ ಅಷ್ಟೇ ಸತ್ಯ. ಪ್ರಕೃತಿಯನ್ನೇ (Nature) ಎದುರಿಸಿ ನಿಂತು ಎಲ್ಲವನ್ನೂ ನಿಯಂತ್ರಿಸುತ್ತೇವೆಂದು ಹೊರಟಿರುವ ನಾವು ನಿಜಕ್ಕೂ ಬುದ್ಧಿವಂತರೇ? ಗೊತ್ತಿಲ್ಲ. ಅದಿರಲಿ.

ನಮ್ಮ ವಿಕಸಿತ ಮಿದುಳಿನ ಬಲದಿಂದ ಮತ್ತು ನಾವು ಕಟ್ಟಿಕೊಂಡಿರುವ ನುಡಿಗಳ ಸಹಾಯದಿಂದ ನಾವು ಜಗತ್ತನ್ನು ಅರಿಯುವುದಲ್ಲದೇ ಒಬ್ಬರಿನ್ನೊಬ್ಬರ ಜೊತೆ ಸಂವಹಿಸಿ ಜಗತ್ತನ್ನು ಆಳುತ್ತಿದ್ದೇವೆ. ಅದರೆ ಇವು ನಮ್ಮ ಸ್ವತ್ತಷ್ಟೇ ಅಲ್ಲ. ಆನೆಗಳು, ಡಾಲ್ಫಿನ್‌ಗಳು, ತಿಮಿಂಗಿಲಗಳು ಮೊದಲಾದ ಪ್ರಾಣಿಗಳು ಅಸಾಧ್ಯ ನೆನಪಿನ ಶಕ್ತಿ ಪ್ರದರ್ಶಿಸುತ್ತವೆ. ಎಲ್ಲ ಸ್ತನಿಗಳೂ ಭಾವಜೀವಿಗಳು.

ಇದನ್ನೂ ಓದಿ : Viral Video: ಈ ಮುದ್ದಿನ ಸೊಕ್ಕು ಗೋಲ್​ಕೀಪರ್ ಆದೀತೇ?

ವಿಷಯ ಅದಲ್ಲ. ನಿನ್ನ ಕೈಚೀಲದಲ್ಲಿರುವ ಕ್ಯಾಂಡಿ ಬೇಕು, ಅದನ್ನು ತೆಗೆದು ಕೊಡು ಎಂದು ಝೂನಲ್ಲಿರುವ ಒರ್‍ಯಾಂಗುಟಾನ್ (Orangutan) ಪ್ರವಾಸಿಗಳಿಗೆ “ಹೇಳುತ್ತಿರುವ” ವಿಡಿಯೋವನ್ನು ನೋಡಿ ಜನ ನಿಬ್ಬೆರಗಾಗಿದ್ದಾರೆ. ಇಂಡೊನೇಶಿಯ ಮತ್ತು ಮಲೇಶಿಯಾದ ಮಳೆಕಾಡುಗಳಲ್ಲಿ ನೆಲೆಸಿರುವ ಒರ್‍ಯಾಂಗುಟಾನ್‌ಗಳು ದೊಡ್ಡ ಕಪಿಗಳ ಪ್ರಬೇಧಕ್ಕೆ ಸೇರಿದ ಪ್ರಾಣಿಗಳು. ಮಲಯ್ ಭಾಷೆಯಲ್ಲಿ ಒರ್‍ಯಾಂಗ್ ಎಂದರೆ ವ್ಯಕ್ತಿ, ಹುಟಾನ್ ಎಂದರೆ ಕಾಡು: ಎಂದರೆ ಇವು ಶಬ್ದಶಃ “ಕಾಡುಮನುಷ್ಯರು”. ತಪ್ಪೇನಿಲ್ಲ ಬಿಡಿ. ಮೇಲಿನ ವಿಡಿಯೋ ನೋಡಿದರೆ ನೀವು ಇದು ಮನುಷ್ಯರಂತೆ ವರ್ತಿಸುತ್ತಿದೆಯಲ್ಲ ಎಂದುಕೊಳ್ಳುತ್ತೀರಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:29 pm, Wed, 21 June 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ