AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ

Viral Video : ಮುಗ್ಗರಿಸಿಕೊಂಡು ಬಿದ್ದರೂ, ನಾಯಿ ದರದರನೆ ಇವನನ್ನು ಎಳೆದುಕೊಂಡು ಹೋದರೂ ಈತ ಮಾತ್ರ ನಾಯಿಯನ್ನು ನಿಯಂತ್ರಿಸುವುದನ್ನು ಬಿಡುವುದಿಲ್ಲ. ಮಿಲಿಯನ್​ಗಟ್ಟಲೆ ಜನ ನೋಡಿದ ಈ ವಿಡಿಯೋ ಇಲ್ಲಿದೆ.

ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ
ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್​ ಹೊರಟಾಗ
TV9 Web
| Edited By: ಶ್ರೀದೇವಿ ಕಳಸದ|

Updated on: Nov 29, 2022 | 4:59 PM

Share

Viral Video : ಈ ರಸ್ತೆ ದಟ್ಟವಾದ ಹಿಮದಿಂದ ಆವರಿಸಿದೆ. ರಾತ್ರಿ ಸಮಯ ಬೇರೆ. ಆದರೂ ಈ ವ್ಯಕ್ತಿಗೆ ತನ್ನ ನಾಯಿಯೊಂದಿಗೆ ವಾಕಿಂಗ್​ ಮಾಡಬೇಕೆನ್ನಿಸಿದೆ. ಅಂತೂ ರಸ್ತೆಗಿಳಿದಿದ್ದಾನೆ. ತನ್ನ ನಡಿಗೆಗೆ ಅದರ ನಡಿಗೆಯನ್ನು ನಿಯಂತ್ರಿಸಲು ಆತ ನೋಡುತ್ತಿದ್ದಾನೆ. ಆದರೆ ನಾಯಿಯೋ ತನ್ನದೇ ಲೋಕದಲ್ಲಿ ಓಡುತ್ತಿದೆ. ರಸ್ತೆಯ ತಿರುವು ದಾಟಿಕೊಂಡು ಬರುವ ಹೊತ್ತಿಗೆ ಬೆಕ್ಕೋ ನಾಯಿಯೋ ಒಟ್ಟಿನಲ್ಲಿ ಒಂದು ಪ್ರಾಣಿ ಓಡಿಹೋಗುತ್ತಿದ್ದಂತೆ ನಾಯಿಗೆ ಹುಕಿ ಬಂದು ಓಡಲು ಶುರುಮಾಡುತ್ತದೆ. ಪೋಷಕನನ್ನು ದರದರನೆ ಎಳೆದೊಯ್ಯುತ್ತದೆ.

ಆನ್​ಲೈನ್​ನಲ್ಲಿ ಮಂದಿ ಇದನ್ನು ನೋಡಿ ಬಿದ್ದುಬಿದ್ದು ನಗುತ್ತಿದ್ದಾರೆ. ಬೇಕಿತ್ತಾ ಇಂಥ ರಾತ್ರಿಯಲ್ಲಿ ವಾಕಿಂಗ್​ ಎಂದು ಕೇಳುತ್ತಿದ್ದಾರೆ. ಸಾಕಿದ ಮಾತ್ರಕ್ಕೆ ನಾಯಿ ನಿಮ್ಮ ಮಾತು ಕೇಳಲೇಬೇಕು ಅಂತಿಲ್ಲ. ಅದನ್ನು ನಿಯಂತ್ರಿಸಲು ಹೋದರೆ ಏನಾಗುತ್ತದೆ ನೋಡಿ ಎಂದಿದ್ದಾರೆ ಒಬ್ಬರು. ಒಂದಲ್ಲ ಎರಡು ಮೂರು ಸಲ ಬಿದ್ದು ಎದ್ದು ನಾಯಿಯ ಹಿಂದೆ ಓಡಿದ್ದಾಯ್ತಲ್ಲ, ಇನ್ನೊಮ್ಮೆ ಹೀಗೆ ಚಳಿಯಲ್ಲಿ, ಹಿಮದಲ್ಲಿ ನಾಯಿಯನ್ನು ವಾಕಿಂಗ್​ ಕರೆದುಕೊಂಡು ಬರುತ್ತೀಯಾ ಎಂದು ಈ ವ್ಯಕ್ತಿಗೆ ಒಬ್ಬರು ಕೇಳಿದ್ದಾರೆ. ಇಂಥ ಹುಚ್ಚಾಟಗಳಿಗೆ ಬೀಳಬೇಡಿ ಇದು ಅಪಾಯ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ಅನ್ನು ಈಗಾಗಲೇ 2 ಮಿಲಿಯನ್​ ಜನರು ನೋಡಿದ್ದಾರೆ. 6,000ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಸುಮಾರು 70,000ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು