AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Vedio: ಬೈಕ್​ ಹಿಂಬದಿ ಸೀಟ್​ಲ್ಲಿ ಕುಳಿತ ಎತ್ತು: ಬೈಕ್​ ಸವಾರನ ಈ ಸಾಹಸಕ್ಕೆ ದಂಗಾದ ನೆಟ್ಟಿಗರು

ವಿಡಿಯೋದಲ್ಲಿ ಆ ವ್ಯಕ್ತಿ ಹೋರಿನ್ನು ಬೈಕ್​​ಗೆ ಹಗ್ಗದಿಂದ ಕಟ್ಟಿ ಹಿಂಬದಿಯ ಸೀಟಿನಲ್ಲಿ ಕೂರಿಸಿದ್ದಾನೆ. ಜೊತೆಗೆ ಫುಲ್​ ಸ್ಪೀಡ್‌ನಲ್ಲಿ ಬೈಕ್ ಓಡಿಸುತ್ತಿದ್ದಾನೆ. ಎತ್ತು ಕೂಡ ಆರಾಮವಾಗಿ ಬೈಕ್‌ನಲ್ಲಿ ಕುಳಿತಿರುವುದು ನಾವು ನೋಡಬಹುದು.

Viral Vedio: ಬೈಕ್​ ಹಿಂಬದಿ ಸೀಟ್​ಲ್ಲಿ ಕುಳಿತ ಎತ್ತು: ಬೈಕ್​ ಸವಾರನ ಈ ಸಾಹಸಕ್ಕೆ ದಂಗಾದ ನೆಟ್ಟಿಗರು
Viral Vedio
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 13, 2022 | 9:24 PM

Share

ಇಂಟರ್ನೆಟ್ ಅದ್ಭುತ ಮತ್ತು ತಮಾಷೆ ವಿಡಿಯೋಗಳ ಉಗ್ರಾಣವಾಗಿದೆ. ಪ್ರತಿದಿನ ಒಂದಿಲ್ಲ ಒಂದು ಹೊಸ ವಿಡಿಯೋಗಳು ಕಾಣಸಿಗುತ್ತವೆ. ಇವು ನಮಗೆ ಮನರಂಜನೆ ಸಹ ನೀಡುತ್ತವೆ. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗೆ ವೈರಲ್ ಆದ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ತನ್ನ ಬೈಕ್‌ನಲ್ಲಿ ಎತ್ತು ಹೊತ್ತುಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ಎತ್ತನ್ನು ಬೈಕ್​​ಗೆ ಹಗ್ಗದಿಂದ ಕಟ್ಟಿ ಹಿಂಬದಿಯ ಸೀಟಿನಲ್ಲಿ ಕೂರಿಸಿದ್ದಾನೆ. ಜೊತೆಗೆ ಫುಲ್​ ಸ್ಪೀಡ್‌ನಲ್ಲಿ ಬೈಕ್ ಓಡಿಸುತ್ತಿದ್ದಾನೆ. ಎತ್ತು ಕೂಡ ಆರಾಮವಾಗಿ ಬೈಕ್‌ನಲ್ಲಿ ಕುಳಿತಿರುವುದು ನಾವು ನೋಡಬಹುದು. ಬೈಕ್ ಚಾಲಕ ಎಷ್ಟು ಅದ್ಭುತವಾಗಿ ಸಮತೋಲನ ಕಾಯ್ದುಕೊಂಡಿದ್ದಾನೆ ಎಂದು ನೋಡಿದರೆ ಸಾಕಷ್ಟು ಆಶ್ಚರ್ಯವಾಗುತ್ತದೆ.

ಈ ವಿಲಕ್ಷಣ ದೃಶ್ಯವನ್ನು ದಾರಿಹೋಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ವಿಡಿಯೋವನ್ನು ಅನಿಮಲ್ಸ್‌ಇಂಥೆನೇಚರ್‌ಟುಡೇ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಿಂದ ಅಪ್‌ಲೋಡ್ ಮಾಡಲಾಗಿದೆ. ಸದ್ಯ ಇದು ಎಲ್ಲೆಡೆ ವೈರಲ್ ಆಗಿದೆ.

ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಬಳಕೆದಾರರು ವಿಡಿಯೋ ನೋಡಿ ನಕ್ಕು ಸುಮ್ಮನಾದರೆ, ಇನ್ನು ಕೆಲವರು ಎತ್ತನ್ನು ಹೀಗೂ ಸಾಗಿಸಬಹುದಾ ಎಂದು ಆಶ್ಚರ್ಯ ಪಟ್ಟರು. ಮತ್ತೊಬ್ಬ ನೆಟ್ಟಿಗ ಹೋಂಡಾ ಬೈಕ್ ಮೇಲೆ ಏನು ಬೇಕಾದರೂ ಸಾಗಿಸಬಹುದು ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಮೂರನೆಯವರು ಸೂಪರ್ ಅನಿಮಲ್ ಟ್ಯಾಕ್ಸಿ ಎಂದು ಬರೆದಿದ್ದುಕೊಂಡಿದ್ದು, ನಾಲ್ಕನೆಯ ವ್ಯಕ್ತಿ ಇದು ತಮಾಷೆಯಲ್ಲ ಎಂದು ಕಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 9:22 pm, Tue, 13 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?