AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಆರು ಸಹೋದರಿಯರನ್ನು ವರಿಸಿದ ಆರು ಸಹೋದರರು, ಮದುವೆಗಾದ ಖರ್ಚೆಷ್ಟು?

ಆರು ಹೆಣ್ಣುಮಕ್ಕಳ ಮದುವೆ ಮಾಡುವುದೆಂದರೆ ಸುಲಭದ ಮಾತಲ್ಲ, ಕೆಲವರುತಮ್ಮ ಮಕ್ಕಳು ಚೆನ್ನಾಗಿರಲಿ ಎಂದು ಆಸ್ತಿಪಾಸ್ತಿಯನ್ನೇ ಮಾರಾಟ ಮಾಡುವ ಈ ಕಾಲದಲ್ಲಿ 6 ಹೆಣ್ಣುಮಕ್ಕಳ ಮದುವೆ ಕೇವಲ 30 ಸಾವಿರ ರೂ. ಖರ್ಚಿನಲ್ಲಿ ನಡೆದಿದೆ. ಆರು ಸಹೋದರರು ಮತ್ತು ಆರು ಸಹೋದರಿಯರು ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾದರು, ಇದು ಸರಳತೆ ಮತ್ತು ಏಕತೆಗೆ ಅದ್ಭುತ ಉದಾಹರಣೆಯಾಗಿದೆ. 100 ಕ್ಕೂ ಹೆಚ್ಚು ಅತಿಥಿಗಳ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ದುಬಾರಿ ಸಂಪ್ರದಾಯಗಳನ್ನು ತ್ಯಜಿಸಿ ಸರಳತೆ ಒತ್ತು ನೀಡಲಾಯಿತು.

ಪಾಕಿಸ್ತಾನ: ಆರು ಸಹೋದರಿಯರನ್ನು ವರಿಸಿದ ಆರು ಸಹೋದರರು, ಮದುವೆಗಾದ ಖರ್ಚೆಷ್ಟು?
ಮದುವೆ
ನಯನಾ ರಾಜೀವ್
|

Updated on: Jan 08, 2025 | 11:37 AM

Share

ಇದು ಡಿಜಿಟಲ್ ಯುಗ, ಎಲ್ಲಿ ಯಾವ ಘಟನೆ ನಡೆದರೂ ಕ್ಷಣಮಾತ್ರದಲ್ಲಿ ನಮ್ಮನ್ನು ತಲುಪಿಬಿಡುತ್ತದೆ. ಹಾಗೆಯೇ ಪಾಕಿಸ್ತಾನದಲ್ಲಿ 6 ಸಹೋದರರು 6 ಸಹೋದರಿಯರನ್ನು ಮದುವೆಯಾಗಿರುವ ಘಟನೆ ವರದಿಯಾಗಿದೆ. ಎಷ್ಟೇ ಸಾಧಾರಣ ಮದುವೆ ಎನಿಸಿಕೊಂಡರೂ ಒಂದು ಮದುವೆ ಕನಿಷ್ಠವೆಂದರೂ 6-7 ಲಕ್ಷ ರೂ. ಬೇಕೇ ಬೇಕು, ಅಂಥಾ ಸಮಯದಲ್ಲಿ ಕೇವಲ 30 ಸಾವಿರ ರೂ,ನಲ್ಲಿ 6 ಮದುವೆಗಳು ನಡೆದಿವೆ.

ಮದುವೆಯಲ್ಲಿ ಸುಮಾರು 100 ಮಂದಿ ಭಾಗವಹಿಸಿದ್ದರು. ಒಟ್ಟಿಗೆ ಮದುವೆಯಾಗುವುದರಿಂದ ಖರ್ಚು ಕಡಿಮೆಯಾಗುತ್ತದೆ ಎನ್ನುವ ಕಾರಣಕ್ಕೆ ಸಹೋದರಿಗೆ 18 ವರ್ಷ ತುಂಬುವವರೆಗೂ ಕಾದು ಎಲ್ಲರೂ ಒಟ್ಟಿಗೆ ವಿವಾಹವಾಗಿದ್ದಾರೆ.

ಈ ಮದುವೆಗೆ ಯಾರೂ ವರದಕ್ಷಿಣೆ ತೆಗೆದುಕೊಂಡಿಲ್ಲ, ಪಾಕಿಸ್ತಾನದ ಮುಲ್ತಾನ್​ನಲ್ಲಿ ಈ ಘಟನೆ ನಡೆದಿದೆ. ವಧು-ವರರು ಸೋದರ ಸಂಬಂಧಿಗಳು ಎಂದು ಹೇಳಲಾಗುತ್ತಿದೆ. ಇದೀಗ ಈ ಸಾಮೂಹಿಕ ವಿವಾಹ ಚರ್ಚೆಗೆ ಗ್ರಾಸವಾಗಿದೆ.

ಮತ್ತಷ್ಟು ಓದಿ: Viral: ಪತಿ ಹಾಗೂ ತನ್ನ ಆರು ಮಂದಿ ಮಕ್ಕಳನ್ನು ತೊರೆದು ಭಿಕ್ಷುಕನ ಜೊತೆ ಓಡಿ ಹೋದ ಮಹಿಳೆ

ಈ ಸಾಮೂಹಿಕ ವಿವಾಹಕ್ಕೆ ಕೇವಲ 1 ಲಕ್ಷ ಪಾಕಿಸ್ತಾನಿ ರೂಪಾಯಿ ಖರ್ಚಾಗಿದೆ. ಭಾರತೀಯ ಕರೆನ್ಸಿಯಲ್ಲಿ ನೋಡಿದರೆ ಈ ಮೊತ್ತ ಕೇವಲ 30,000 ರೂ. ಆಗಿದೆ.

ಯಾರೂ ವರದಕ್ಷಿಣೆ ತೆಗೆದುಕೊಂಡಿಲ್ಲ, ಅನಗತ್ಯ ಖರ್ಚು ಮಾಡಿಲ್ಲ, ಸರಳವಾಗಿ ಮದುವೆಯಾಗಿದ್ದಾರೆ. ಇದೇ ವೇಳೆ ವರನ ತಂದೆಯನ್ನು ಈ ವಿಚಾರವಾಗಿ ಮಾತನಾಡಿಸಿದಾಗ, ಕೆಲವು ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಇಂತಹ ಘಟನೆಗಳು ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ