AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದೇನ್‌ ಹುಚ್ಚಾಟ…. ಹುಲಿ ಬಾಯಿಯೊಳಗೆ ಕೈ ಹಾಕಿದ ಯುವಕ; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ಚಿತ್ರ ವಿಚಿತ್ರ ವಿಡಿಯೋಗಳನ್ನು ನೋಡಿದಾಗ ಇದೆಂಥಾ ಹುಚ್ಚಾಟ ಎಂದು ಹಣೆ ಚಚ್ಚಿಕೊಳ್ಳುತ್ತವೆ. ಇದೀಗ ಅಂತಹದ್ದೇ ಅಚ್ಚರಿಯ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಯುವಕನೊಬ್ಬ ಹುಲಿ ಬಾಯಿಯೊಳಗೆ ಕೈ ಹಾಕಿ ನಾಯಿ ಮರಿಯ ಜೊತೆ ಆಟ ಆಡಿದ ಹಾಗೆ ಹುಲಿಯ ಜೊತೆ ಆಟವಾಡಿದ್ದಾನೆ. ಈತನ ಈ ಭಂಡ ಧೈರ್ಯಕ್ಕೆ ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 05, 2024 | 5:20 PM

Share

ಹುಲಿ, ಸಿಂಹ, ಇತ್ಯಾದಿ ಕಾಡು ಪ್ರಾಣಿಗಳನ್ನು ಕಂಡರೆ ಹೆಚ್ಚಿನವರು ಭಯ ಪಡುತ್ತಾರೆ. ಕಾಡಿನಲ್ಲಿ ಬಿಡಿ, ಮೃಗಾಲಯದಲ್ಲಿ ಹುಲಿಯನ್ನು ನೋಡಿದರೂ ಭಯ ಪಡುವವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬ ಯುವಕ ಹುಲಿಯ ಪಕ್ಕದಲ್ಲಿಯೇ ಕುಳಿದ ಅದರ ಬಾಯೊಳಗೆ ಕೈ ಹಾಕಿದ್ದಾನೆ. ಹೌದು ತಾನು ಸಾಕಿದ ಹುಲಿಯ ಬಾಯಿಗೆ ಕೈ ಹಾಕಿ ನಾಯಿ ಮರಿಯೊಂದಿಗೆ ಆಟವಾಡಿದಂತೆ ಹುಲಿಯೊಂದಿಗೆ ಆಟವಾಡಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಯುವಕನ ಹುಚ್ಚಾಟಕ್ಕೆ ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಭಾರತದ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ವನ್ಯಜೀವಿಗಳನ್ನು ಮನೆಗಳಲ್ಲಿ ಸಾಕಬಾರದು ಎಂಬ ಕಾನೂನು ಇದೆ. ಆದ್ರೆ ಕೆಲ ದೇಶಗಳಲ್ಲಿ ಕಾನೂನಿನ ಹೊರತಾಗಿಯೂ ವನ್ಯ ಜೀವಿಗಳನ್ನು ಸಾಕುವವರಿದ್ದಾರೆ. ಅದೇ ರೀತಿ ಪಾಕಿಸ್ತಾನಿ ಇನ್‌ಫ್ಲುಯೆನ್ಸರ್‌ ನೌಮನ್‌ ಹಸನ್‌ (Nouman.hassan1) ಎಂಬಾತ ಕೂಡಾ ಹುಲಿಯೊಂದನ್ನು ಸಾಕಿದ್ದು, ಹುಲಿಯೊಂದಿಗಿನ ವಿಡಿಯೋಗಳು ಆಗಾಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾನೆ.

ಇದೀಗ ಆತ ತಾನು ಸಾಕಿರುವ ಹುಲಿಯ ಬಾಯಿಯೊಳಗೆ ಕೈ ಹಾಕಿ ಅದರೊಂದಿಗೆ ಆಟವಾಡಿದಂತಹ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಜೊತೆಗೆ “ನನ್ನ ಹುಲಿ ರಾಕಿ ತುಂಬಾನೇ ಫ್ರೆಂಡ್ಲಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾನೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರು ವಿಡಿಯೋದಲ್ಲಿ ಪಾಕಿಸ್ತಾನಿ ಯುವಕ ಹುಲಿಯ ಬಾಯಿಯೊಳಗೆ ಕೈ ಹಾಕುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಹುಲಿಯೂ ಕೂಡಾ ಆತನಿಗೆ ಏನು ತೊಂದರೆ ಮಾಡದೆ, ಬೆಕ್ಕಿನಂತೆ ಅವನೊಂದಿಗೆ ಆಟವಾಡಿದೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಕರಿ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ?

ಅಕ್ಟೋಬರ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವನೇನು ನಾಯಿ ಸಾಕಿದಂಗೆ ಹುಲಿಯನ್ನು ಸಾಕಿದ್ದಾನೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ನಿಜವಾದ ಪ್ರೀತಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ