AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾಕಿಸ್ತಾನದಲ್ಲಿ ಮಾತ್ರ ಇದೆಲ್ಲಾ ಸಾಧ್ಯ ನೋಡಿ… ಪುಸ್ತಕ ಮೇಳದಲ್ಲಿ ಬುಕ್ಸ್‌ಗಳ ಬದಲು ಬಿರಿಯಾನಿ, ಶವರ್ಮಾ ಕೊಳ್ಳಲು ಮುಗಿಬಿದ್ದ ಜನ

ಪಾಕಿಸ್ತಾನದಲ್ಲಿ ನಡೆಯುವ ಕೆಲವೊಂದು ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇಲ್ಲಿನ ನಡೆಯುವ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತದೆ. ಇದೀಗ ಮತ್ತೊಂದು ಬಾರಿ ಅಂತಹದ್ದೇ ಘಟನೆ ನಡೆದಿದ್ದು, ಇಲ್ಲಿನ ಲಾಹೋರ್‌ನಲ್ಲಿ ನಡೆದ ಪ್ರಸಿದ್ಧ ಪುಸ್ತಕ ಮೇಳದಲ್ಲಿ ಬುಕ್ಸ್‌ಗಳ ಬದಲು ಅಲ್ಲಿನ ಸ್ಟಾಲ್‌ಗಳಲ್ಲಿ ಬಿರಿಯಾನಿ ಮತ್ತು ಶವರ್ಮಾ ಇತ್ಯಾದಿ ತಿನಿಸುಗಳೇ ಅಧಿಕ ಸಂಖ್ಯೆಯಲ್ಲಿ ಸೇಲ್‌ ಆಗಿದೆಯಂತೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 24, 2024 | 2:31 PM

Share

ಪುಸ್ತಕ ಪ್ರೇಮಿಗಳಿಗಾಗಿ ದೇಶ ವಿದೇಶಗಳಲ್ಲಿ ಆಗಾಗ್ಗೆ ಪುಸ್ತಕ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿರುತ್ತದೆ. ಸಾಮಾನ್ಯವಾಗಿ ಇಂತಹ ಮೇಳಗಳಿಗೆ ಭೇಟಿ ನೀಡುವವರು ತಮ್ಮಿಷ್ಟದ ಪುಸ್ತಕಗಳನ್ನೇ ಅಧಿಕ ಸಂಖ್ಯೆಯಲ್ಲಿ ಖರೀದಿ ಮಾಡುತ್ತಾರೆ. ಆದ್ರೆ ಪಾಕಿಸ್ತಾನದಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾದ ವಿಚಿತ್ರ ಘಟನೆಯೊಂದು ನಡೆದಿದ್ದು, ಇಲ್ಲಿನ ಲಾಹೋರ್‌ನಲ್ಲಿ ನಡೆದ ಪ್ರಸಿದ್ಧ ಪುಸ್ತಕ ಮೇಳದಲ್ಲಿ ಭಾಗವಹಿಸಿದ ಜನರು ಬುಕ್ಸ್‌ಗಳನ್ನು ಕೊಳ್ಳುವ ಬದಲು ಅಲ್ಲಿನ ಸ್ಟಾಲ್‌ಗಳಲ್ಲಿ ಬಿರಿಯಾನಿ ಮತ್ತು ಶವರ್ಮಾ ಇತ್ಯಾದಿ ತಿನಿಸುಗಳನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಖರೀಸಿದ್ದಾರಂತೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಪಾಕಿಸ್ತಾನದಲ್ಲಿ ಮಾತ್ರ ಇದೆಲ್ಲಾ ಸಾಧ್ಯ ನೋಡಿ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಇತ್ತೀಚಿಗಷ್ಟೇ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಗುರಿಯನ್ನು ಇಟ್ಟುಕೊಂಡು ಪಾಕಿಸ್ತಾನದ ಲಾಹೋರ್‌ನಲ್ಲಿ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿತ್ತು. ಆದ್ರೆ ವಿಪರ್ಯಾಸ ಏನಂದ್ರೆ ಇಲ್ಲಿನ ಜನರು ಪುಸ್ತಕ ಮೇಳದಲ್ಲಿ ಬುಕ್ಸ್‌ಗಳನ್ನು ಕೊಳ್ಳುವ ಬದಲು ಹೆಚ್ಚಿನ ಸಂಖ್ಯೆಯಲ್ಲಿ ಬಿರಿಯಾನಿ ಮತ್ತು ಶವರ್ಮಾವನ್ನೇ ಖರೀದಿಸಿ ತಿಂದಿದ್ದಾರೆ. ಈ ಪುಸ್ತಕ ಮೇಳದಲ್ಲಿ ಕೇವಲ 35 ಪುಸ್ತಕಗಳು ಮಾತ್ರ ಮಾರಾಟವಾಗಿವೆ. ಆದ್ರೆ ಇಲ್ಲಿನ ಆಹಾರ ಮಳಿಗೆಗಳಲ್ಲಿ 1,200 ಕ್ಕೂ ಹೆಚ್ಚು ಶಮರ್ಮಾ ಮತ್ತು 800 ಪ್ಲೇಟ್‌ಗಳಿಗಿಂತಲೂ ಅಧಿಕ ಬಿರಿಯಾನಿ ಮತ್ತು 1600 ಚಿಕನ್‌ ಸ್ಯಾಂಡ್‌ವಿಚ್‌ ಮಾರಾಟವಾಗಿದೆ.

ಈ ಕುರಿತ ವಿಡಿಯೋವೊಂದನ್ನು ಅಮಿತಭ್‌ ಚೌಧರಿ (MithilaWaala) ಎಂಬವರು ತಮ್ಮ ಎಕ್ಸ್‌ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಲಾಹೋರ್‌ನಲ್ಲಿ ನಡೆದ ಪುಸ್ತಕ ಮೇಳದಲ್ಲಿ ಕೇವಲ 35 ಪುಸ್ತಗಳು ಮಾತ್ರ ಮಾರಾಟವಾಗಿದೆ. ಆದ್ರೆ ಈ ಪುಸ್ತಕ ಮೇಳದಲ್ಲಿನ ಫುಡ್‌ ಸ್ಟಾಲ್‌ಗಳಲ್ಲಿ 1,200 ಕ್ಕೂ ಹೆಚ್ಚು ಶಮರ್ಮಾ ಮತ್ತು 800 ಪ್ಲೇಟ್‌ಗಳಿಗಿಂತಲೂ ಅಧಿಕ ಬಿರಿಯಾನಿ ಮತ್ತು 1600 ಚಿಕನ್‌ ಸ್ಯಾಂಡ್‌ವಿಚ್‌ ಮಾರಾಟವಾಗಿವೆ ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನು ಓದಿ: ನಿಮ್ಮ ಪಾದಗಳ ಆಕಾರವು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಅಕ್ಟೋಬರ್‌ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದರಲ್ಲಿ ಆಶ್ಚರ್ಯ ಏನಿದೆ? ಪಾಕಿಸ್ತಾನದಲ್ಲಿ ಇದೆಲ್ಲಾ ಸಾಮಾನ್ಯ ಬಿಡಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅವರಿಗೆ ಪುಸ್ತಕ ಮೇಳದ ಅವಶ್ಯಕತೆಯೇ ಇಲ್ಲ ಬಿಡಿʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​