AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಪುಣ್ಯ ತಿಥಿ; 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಲಕ್ಷಣ ಸುದ್ದಿಗಳು ನಮ್ಮನ್ನು ಬಾಯಿ ಮೇಲೆ ಬೆರಳಿಡುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ಸುದ್ದಿಯೊಂದು ವೈರಲ್‌ ಆಗಿದ್ದು ಪಾಕಿಸ್ತಾನದ ಭಿಕ್ಷುಕ ಕುಟುಂಬವೊಂದು ತಮ್ಮ ಅಜ್ಜಿಯ ಪುಣ್ಯ ತಿಥಿಯ ಸಲುವಾಗಿ ಬರೋಬ್ಬರಿ 1.25 ಕೋಟಿ ಪಾಕಿಸ್ತಾನಿ ರೂಪಾಯಿ ಖರ್ಚು ಮಾಡಿ 20 ಸಾವಿರ ಮಂದಿಗೆ ಔತಣ ಕೂಟವನ್ನು ಏರ್ಪಡಿಸಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಅಜ್ಜಿ ಪುಣ್ಯ ತಿಥಿ; 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 19, 2024 | 6:00 PM

ಭಿಕ್ಷುಕರು ಅಂದರೆ ತಿನ್ನಲು ಗತಿ ಇಲ್ಲದ, ಕೈಯಲ್ಲಿ ಬಿಡುಗಾಸು ಇಲ್ಲದ, ಉಳಿದುಕೊಳ್ಳಲು ಒಂದು ಸ್ವಂತ ಸೂರು ಇಲ್ಲದೆ ಜನರ ಮುಂದೆ ಕೈ ಚಾಚುವ ವ್ಯಕ್ತಿಗಳು ಎಂದು ಹಲವರು ಅಂದುಕೊಳ್ಳುತ್ತಾರೆ. ಮತ್ತು ಅವರನ್ನು ಕೈಲಾಗದವರು ಎಂದು ಅಸಡ್ಡೆಯ ಮಾತುಗಳನ್ನಾಡುತ್ತಾರೆ. ಆದ್ರೆ ಇಲ್ಲೊಂದು ಭಿಕ್ಷುಕ ಕುಟುಂಬ ತಾವು ಭಿಕ್ಷೆ ಬೇಡಿ ಸಂಪಾದಿಸಿದ ಹಣದಲ್ಲಿಯೇ ಬರೋಬ್ಬರಿ 20 ಸಾವಿರ ಮಂದಿಗೆ ಔತಣಕೂಟವನ್ನು ಏರ್ಪಡಿಸಿದೆ. ಹೌದು ಅಜ್ಜಿಯ ಪುಣ್ಯ ತಿಥಿಯ ಸಲುವಾಗಿ ಭಿಕ್ಷುಕ ಕುಟುಂಬ 1.25 ಕೋಟಿ ರೂ. ಖರ್ಚು ಮಾಡಿ ಊರ ಮಂದಿಗೆ ಔತಣಕೂಟವನ್ನು ಏರ್ಪಡಿಸಿದ್ದು, ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಇಲ್ಲಿನ ಗುಜ್ರನ್‌ವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು 1.25 ಕೋಟಿ ಪಾಕಿಸ್ತಾನಿ ರೂಪಾಯಿ (ಪಿಕೆಆರ್)‌ ಖರ್ಚು ಮಾಡಿ ಬರೋಬ್ಬರಿ 20 ಸಾವಿರ ಮಂದಿಗೆ ಹಬ್ಬದೂಟವನ್ನು ಏರ್ಪಡಿಸಿದೆ. ಅಜ್ಜಿಯ ಮರಣದ 40 ನೇ ದಿನದ ಪುಣ್ಯತಿಥಿಯ ಅಂಗವಾಗಿ ಈ ಕುಟುಂಬ ಊರ ಮಂದಿಗೆ ಈ ಭರ್ಜರಿ ಔತಣಕೂಟ ಏರ್ಪಡಿಸಿದೆ.

ವರದಿಗಳ ಪ್ರಕಾರ ಈ ಸಮಾರಂಭವು ಗುಜ್ರಾನ್‌ವಾಲಾದಲ್ಲಿನ ರಾಹ್ವಾಲಿ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು, ಬರೋಬ್ಬರಿ 20 ಸಾವಿರ ಜನರಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೊತೆಗೆ ಅಥಿತಿಗಳು ಹೋಗಿ ಬರಲು ಸುಮಾರು 2,000 ವಾಹನಗಳ ವ್ಯವಸ್ಥೆಯನ್ನು ಕೂಡಾ ಮಾಡಲಾಗಿತ್ತು. ಭಿಕ್ಷುಕ ಕುಟುಂಬ ಅಜ್ಜಿಯ ಪುಣ್ಯ ತಿಥಿಗೆ ಹಬ್ಬದ ಮೆನುವನ್ನೇ ಸಿದ್ಧಪಡಿಸಿತ್ತು. ಪಾಕಿಸ್ತಾನದ ಸಾಂಪ್ರದಾಯಿಕ ತಿನಿಸುಗಳಾದ ಸಿರಿ ಪಾಯ, ಮುರಬ್ಬ, ನಾನ್‌ ಮಟರ್‌ ಗಂಜ್‌ ಸೇರಿದಂತೆ ಹಲವಾರು ಖಾದ್ಯಗಳನ್ನು ತಯಾರಿಸಿದ್ದರು. ಜೊತೆಗೆ ಹಬ್ಬದೂಟಕ್ಕೆ ಸುಮಾರು 250 ಮೇಕೆಗಳನ್ನು ಕಡಿಯಲಾಗಿತ್ತು. ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದ ಈ ಕುಟುಂಬ ಇಷ್ಟು ದೊಡ್ಡ ಔತಣಕೂಟವನ್ನು ಏರ್ಪಡಿಸಿದ್ದನ್ನು ಕಂಡು ಎಲ್ಲರೂ ಶಾಕ್‌ ಆಗಿದ್ದಾರೆ.

ಇದನ್ನೂ ಓದಿ: 1857ರ ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿ ಎಂದು ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿ ಬರೆದ ತರ್ಲೆ ಉತ್ತರ ಹೇಗಿದೆ ನೋಡಿ…

ಈ ಕುರಿತ ವಿಡಿಯೋವನ್ನು 365newsdotpk ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಜ್ಜಿಯ ಪುಣ್ಯತಿಥಿಯ ಸಲುವಾಗಿ ಪಾಕಿಸ್ತಾನದ ಭಿಕ್ಷುಕ ಕುಟುಂಬ 20 ಸಾವಿರ ಜನಕ್ಕೆ ಭರ್ಜರಿ ಭೋಜನ ತಯಾರಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈ ದೃಶ್ಯವನ್ನು ಕಂಡು ಅಲ್ಲಾ ಭಿಕ್ಷುಕರಿಗೆ ಇಷ್ಟೆಲ್ಲಾ ಖರ್ಚು ಮಾಡಿ ಹಬ್ಬದೂಟವನ್ನು ಏರ್ಪಡಿಸಲು ಸಾಧ್ಯವೇ ಎಂದು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್