AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಪುಣ್ಯ ತಿಥಿ; 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಲಕ್ಷಣ ಸುದ್ದಿಗಳು ನಮ್ಮನ್ನು ಬಾಯಿ ಮೇಲೆ ಬೆರಳಿಡುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ಸುದ್ದಿಯೊಂದು ವೈರಲ್‌ ಆಗಿದ್ದು ಪಾಕಿಸ್ತಾನದ ಭಿಕ್ಷುಕ ಕುಟುಂಬವೊಂದು ತಮ್ಮ ಅಜ್ಜಿಯ ಪುಣ್ಯ ತಿಥಿಯ ಸಲುವಾಗಿ ಬರೋಬ್ಬರಿ 1.25 ಕೋಟಿ ಪಾಕಿಸ್ತಾನಿ ರೂಪಾಯಿ ಖರ್ಚು ಮಾಡಿ 20 ಸಾವಿರ ಮಂದಿಗೆ ಔತಣ ಕೂಟವನ್ನು ಏರ್ಪಡಿಸಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಅಜ್ಜಿ ಪುಣ್ಯ ತಿಥಿ; 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Nov 19, 2024 | 6:00 PM

Share

ಭಿಕ್ಷುಕರು ಅಂದರೆ ತಿನ್ನಲು ಗತಿ ಇಲ್ಲದ, ಕೈಯಲ್ಲಿ ಬಿಡುಗಾಸು ಇಲ್ಲದ, ಉಳಿದುಕೊಳ್ಳಲು ಒಂದು ಸ್ವಂತ ಸೂರು ಇಲ್ಲದೆ ಜನರ ಮುಂದೆ ಕೈ ಚಾಚುವ ವ್ಯಕ್ತಿಗಳು ಎಂದು ಹಲವರು ಅಂದುಕೊಳ್ಳುತ್ತಾರೆ. ಮತ್ತು ಅವರನ್ನು ಕೈಲಾಗದವರು ಎಂದು ಅಸಡ್ಡೆಯ ಮಾತುಗಳನ್ನಾಡುತ್ತಾರೆ. ಆದ್ರೆ ಇಲ್ಲೊಂದು ಭಿಕ್ಷುಕ ಕುಟುಂಬ ತಾವು ಭಿಕ್ಷೆ ಬೇಡಿ ಸಂಪಾದಿಸಿದ ಹಣದಲ್ಲಿಯೇ ಬರೋಬ್ಬರಿ 20 ಸಾವಿರ ಮಂದಿಗೆ ಔತಣಕೂಟವನ್ನು ಏರ್ಪಡಿಸಿದೆ. ಹೌದು ಅಜ್ಜಿಯ ಪುಣ್ಯ ತಿಥಿಯ ಸಲುವಾಗಿ ಭಿಕ್ಷುಕ ಕುಟುಂಬ 1.25 ಕೋಟಿ ರೂ. ಖರ್ಚು ಮಾಡಿ ಊರ ಮಂದಿಗೆ ಔತಣಕೂಟವನ್ನು ಏರ್ಪಡಿಸಿದ್ದು, ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಇಲ್ಲಿನ ಗುಜ್ರನ್‌ವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು 1.25 ಕೋಟಿ ಪಾಕಿಸ್ತಾನಿ ರೂಪಾಯಿ (ಪಿಕೆಆರ್)‌ ಖರ್ಚು ಮಾಡಿ ಬರೋಬ್ಬರಿ 20 ಸಾವಿರ ಮಂದಿಗೆ ಹಬ್ಬದೂಟವನ್ನು ಏರ್ಪಡಿಸಿದೆ. ಅಜ್ಜಿಯ ಮರಣದ 40 ನೇ ದಿನದ ಪುಣ್ಯತಿಥಿಯ ಅಂಗವಾಗಿ ಈ ಕುಟುಂಬ ಊರ ಮಂದಿಗೆ ಈ ಭರ್ಜರಿ ಔತಣಕೂಟ ಏರ್ಪಡಿಸಿದೆ.

ವರದಿಗಳ ಪ್ರಕಾರ ಈ ಸಮಾರಂಭವು ಗುಜ್ರಾನ್‌ವಾಲಾದಲ್ಲಿನ ರಾಹ್ವಾಲಿ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು, ಬರೋಬ್ಬರಿ 20 ಸಾವಿರ ಜನರಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೊತೆಗೆ ಅಥಿತಿಗಳು ಹೋಗಿ ಬರಲು ಸುಮಾರು 2,000 ವಾಹನಗಳ ವ್ಯವಸ್ಥೆಯನ್ನು ಕೂಡಾ ಮಾಡಲಾಗಿತ್ತು. ಭಿಕ್ಷುಕ ಕುಟುಂಬ ಅಜ್ಜಿಯ ಪುಣ್ಯ ತಿಥಿಗೆ ಹಬ್ಬದ ಮೆನುವನ್ನೇ ಸಿದ್ಧಪಡಿಸಿತ್ತು. ಪಾಕಿಸ್ತಾನದ ಸಾಂಪ್ರದಾಯಿಕ ತಿನಿಸುಗಳಾದ ಸಿರಿ ಪಾಯ, ಮುರಬ್ಬ, ನಾನ್‌ ಮಟರ್‌ ಗಂಜ್‌ ಸೇರಿದಂತೆ ಹಲವಾರು ಖಾದ್ಯಗಳನ್ನು ತಯಾರಿಸಿದ್ದರು. ಜೊತೆಗೆ ಹಬ್ಬದೂಟಕ್ಕೆ ಸುಮಾರು 250 ಮೇಕೆಗಳನ್ನು ಕಡಿಯಲಾಗಿತ್ತು. ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದ ಈ ಕುಟುಂಬ ಇಷ್ಟು ದೊಡ್ಡ ಔತಣಕೂಟವನ್ನು ಏರ್ಪಡಿಸಿದ್ದನ್ನು ಕಂಡು ಎಲ್ಲರೂ ಶಾಕ್‌ ಆಗಿದ್ದಾರೆ.

ಇದನ್ನೂ ಓದಿ: 1857ರ ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿ ಎಂದು ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿ ಬರೆದ ತರ್ಲೆ ಉತ್ತರ ಹೇಗಿದೆ ನೋಡಿ…

ಈ ಕುರಿತ ವಿಡಿಯೋವನ್ನು 365newsdotpk ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಜ್ಜಿಯ ಪುಣ್ಯತಿಥಿಯ ಸಲುವಾಗಿ ಪಾಕಿಸ್ತಾನದ ಭಿಕ್ಷುಕ ಕುಟುಂಬ 20 ಸಾವಿರ ಜನಕ್ಕೆ ಭರ್ಜರಿ ಭೋಜನ ತಯಾರಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈ ದೃಶ್ಯವನ್ನು ಕಂಡು ಅಲ್ಲಾ ಭಿಕ್ಷುಕರಿಗೆ ಇಷ್ಟೆಲ್ಲಾ ಖರ್ಚು ಮಾಡಿ ಹಬ್ಬದೂಟವನ್ನು ಏರ್ಪಡಿಸಲು ಸಾಧ್ಯವೇ ಎಂದು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್