AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ದೇಶಗಳ ಮಧ್ಯೆ ಗಡಿ ಇರಬಹುದು, ಹೃದಯದಲ್ಲಲ್ಲ! ನೆರೆಯ ರಾಷ್ಟ್ರವಾಗಿ ನಿಮ್ಮ ಸಹಾಯಕ್ಕೆ ಸದಾ ಸಿದ್ಧ ಎಂದು ಮನಗೆದ್ದ ಪಾಕಿಸ್ತಾನ

ನಾವು ನೆರೆಹೊರೆಯವರು, ಶತ್ರುಗಳಲ್ಲ. ನಾವು ಎದುರಾಳಿಗಳು, ವಿರೋಧಿಗಳಲ್ಲ. ನಮ್ಮ ದೇಶಗಳ ನಡುವೆ ಗಡಿಯಿದೆ, ನಮ್ಮ ಹೃದಯದಲ್ಲಿ ಅಲ್ಲ. ನಾವು ಮನುಷ್ಯರು ನಮಗೀಗ ನೋವಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಕೆಲವರು ಭಾರತಕ್ಕೆ ಆಮ್ಲಜನಕ ಪೂರೈಕೆ ಆಗಬೇಕು ಮತ್ತು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಭಾರತಕ್ಕೆ ಶಕ್ತಿ ತುಂಬಬೇಕು ಎಂದು ಬೇಡಿಕೊಂಡಿದ್ದಾರೆ.

ನಮ್ಮ ದೇಶಗಳ ಮಧ್ಯೆ ಗಡಿ ಇರಬಹುದು, ಹೃದಯದಲ್ಲಲ್ಲ! ನೆರೆಯ ರಾಷ್ಟ್ರವಾಗಿ ನಿಮ್ಮ ಸಹಾಯಕ್ಕೆ ಸದಾ ಸಿದ್ಧ ಎಂದು ಮನಗೆದ್ದ ಪಾಕಿಸ್ತಾನ
ನಿಮ್ಮೊಂದಿಗೆ ನಾವಿದ್ದೇವೆ ಎಂದು ಭಾರತಕ್ಕೆ ಧೈರ್ಯ ತುಂಬಿದ ಪಾಕಿಸ್ತಾನ
Skanda
|

Updated on: Apr 24, 2021 | 3:06 PM

Share

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅಪಾಯಕಾರಿ ರೀತಿಯಲ್ಲಿ ವ್ಯಾಪಿಸುತ್ತಿದ್ದು ಇಡೀ ದೇಶವನ್ನೇ ಮತ್ತೊಮ್ಮೆ ಆತಂಕದ ಸುಳಿಗೆ ಸಿಲುಕಿಸಿದೆ. ಮೊದಲ ಅಲೆಗಿಂತಲೂ ಈ ಬಾರಿ ಹೆಚ್ಚು ಗಂಭೀರ ಸ್ವರೂಪಕ್ಕೆ ತಿರುಗಿರುವ ಕೊರೊನಾ ಸೋಂಕು ಆರೋಗ್ಯ ವ್ಯವಸ್ಥೆಯನ್ನು ಅಲುಗಾಡಿಸುತ್ತಿದೆ. ಈ ಸಂದರ್ಭದಲ್ಲಿ ಭಾರತಕ್ಕೆ ಆಸ್ಟ್ರಾಜೆನಕಾ ಲಸಿಕೆ ಪೂರೈಕೆ ಮಾಡುವುದಾಗಿ ಯುಎಸ್ ಚೇಂಬರ್ ಆಫ್ ಕಾಮರ್ಸ್ ಬೆಂಬಲವನ್ನೂ ಸೂಚಿಸಿದೆ. ಇನ್ನೂ ಅಚ್ಚರಿಯ ವಿಚಾರವೆಂದರೆ ಭಾರತ ಸಂಕಷ್ಟಕ್ಕೆ ಸಿಲುಕಿರುವುದಕ್ಕೆ ನೆರೆಯ ಪಾಕಿಸ್ತಾನದಲ್ಲಿ #PakistanstandswithIndia ಎಂಬ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದೆ.

ಭಾರತ ಇಂತಹ ವಿಷಮ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ನೆರೆಯ ರಾಷ್ಟ್ರವಾಗಿ ಪಾಕಿಸ್ತಾನ ಕಾಳಜಿ ತೋರಿಸುತ್ತಿರುವುದಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಭಾರತ ಮತ್ತು ಪಾಕಿಸ್ತಾನ ವೈರಿ ರಾಷ್ಟ್ರಗಳೆಂದೇ ಬಿಂಬಿಸಲ್ಪಟ್ಟಿದ್ದರೂ ಈ ಹೊತ್ತಿನಲ್ಲಿ ಎಲ್ಲವನ್ನೂ ಮರೆತು ಭಾರತಕ್ಕೆ ಬೆಂಬಲ ಸೂಚಿಸುತ್ತಿರುವ ಪಾಕಿಸ್ತಾನೀಯರಿಗೆ ಭಾರತದ ಅನೇಕರು ಧನ್ಯವಾದ ಅರ್ಪಿಸಿದ್ದಾರೆ.

ನಾವು ನೆರೆಹೊರೆಯವರು, ಶತ್ರುಗಳಲ್ಲ. ನಾವು ಎದುರಾಳಿಗಳು, ವಿರೋಧಿಗಳಲ್ಲ. ನಮ್ಮ ದೇಶಗಳ ನಡುವೆ ಗಡಿಯಿದೆ, ನಮ್ಮ ಹೃದಯದಲ್ಲಿ ಅಲ್ಲ. ನಾವು ಮನುಷ್ಯರು ನಮಗೀಗ ನೋವಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಕೆಲವರು ಭಾರತಕ್ಕೆ ಆಮ್ಲಜನಕ ಪೂರೈಕೆ ಆಗಬೇಕು ಮತ್ತು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಭಾರತಕ್ಕೆ ಶಕ್ತಿ ತುಂಬಬೇಕು ಎಂದು ಬೇಡಿಕೊಂಡಿದ್ದಾರೆ.

ಸಾವು ಬದುಕಿನ ಪ್ರಶ್ನೆ ಎದುರಾದಾಗ ನಾವು ಒಂದಾಗಿ ನಿಲ್ಲಬೇಕು. ಇಂತಹ ಸಂದರ್ಭದಲ್ಲಿ ಮಾನವೀಯತೆಯನ್ನು ತೋರಿಸುವುದು ಮುಖ್ಯ. ಪಾಕಿಸ್ತಾನದಲ್ಲಿ ಇರುವವರು ನಿಜವಾಗಿಯೂ ಭಾರತದ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ಭಾರತೀಯರು ಎದುರಿಸುತ್ತಿರುವ ಕಷ್ಟಕ್ಕೆ ಮರುಗುತ್ತಿದ್ದಾರೆ ಎಮದು ವಾಸಿಮ್ ಅಬ್ಬಾಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ ರಣಾವತ್ ಕೂಡಾ ಪಾಕಿಸ್ತಾನೀಯರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, #PakistanstandswithIndia ಟ್ರೆಂಡ್ ಆಗಿರುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ಪಾಕಿಸ್ತಾನದ ಅಬ್ದುಲ್ ಸತ್ತಾರ್ ಈದಿ ಫೌಂಡೇಶನ್​ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಳಾಸಕ್ಕೆ ಪತ್ರವೊಂದನ್ನು ಬರೆಯಲಾಗಿದ್ದು, ಪತ್ರದಲ್ಲಿ ಭಾರತೀಯರು ಎದುರಿಸುತ್ತಿರುವ ಕಷ್ಟಕ್ಕೆ ನಾವು ನೆರೆಯ ರಾಷ್ಟ್ರವಾಗಿ ಸ್ಪಂದಿಸುತ್ತೇವೆ. ನಿಮಗೆ ಏನೇ ಅಗತ್ಯವಿದ್ದರೂ ಅದನ್ನು ಈಡೇರಿಸಲು ನಾವು ಸಿದ್ದ. ನೀವು ಅನುಮತಿ ನೀಡಿದರೆ ಭಾರತಕ್ಕೆ ಬಂದು ಸೇವೆ ಸಲ್ಲಿಸುತ್ತೇವೆ. ಮಾನವೀಯತೆಯೇ ಮುಖ್ಯವಾಗಿದ್ದು 50 ಆ್ಯಂಬುಲೆನ್ಸ್​ಗಳನ್ನು ಭಾರತಕ್ಕೆ ತಕ್ಷಣವೇ ಕಳುಹಿಸಿಕೊಡಲು ತಯಾರಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪತ್ರ ಟ್ವಿಟರ್​ನಲ್ಲಿ ಭಾರೀ ಸದ್ದು ಮಾಡುತ್ತಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲೂ ಟ್ರೆಂಡ್​ ಆಗ್ತಿದೆ #IndiaNeedsOxygen.. ನಾವು ಸಹ ಭಾರತೀಯರಿಗಾಗಿ ಪ್ರಾರ್ಥಿಸುತ್ತಿದ್ದೇವೆ: ಶೋಯೆಬ್ ಅಖ್ತರ್ 

ಪಾಕ್​ ಕೈಹಿಡಿದ ಭಾರತ: ಆತ್ಮನಿರ್ಭರ್ ಕೊರೊನಾ ಲಸಿಕೆ ಇದೀಗ ಪಾಕಿಸ್ತಾನಕ್ಕೂ ಪೂರೈಕೆ!

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?