AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ದೇಶಗಳ ಮಧ್ಯೆ ಗಡಿ ಇರಬಹುದು, ಹೃದಯದಲ್ಲಲ್ಲ! ನೆರೆಯ ರಾಷ್ಟ್ರವಾಗಿ ನಿಮ್ಮ ಸಹಾಯಕ್ಕೆ ಸದಾ ಸಿದ್ಧ ಎಂದು ಮನಗೆದ್ದ ಪಾಕಿಸ್ತಾನ

ನಾವು ನೆರೆಹೊರೆಯವರು, ಶತ್ರುಗಳಲ್ಲ. ನಾವು ಎದುರಾಳಿಗಳು, ವಿರೋಧಿಗಳಲ್ಲ. ನಮ್ಮ ದೇಶಗಳ ನಡುವೆ ಗಡಿಯಿದೆ, ನಮ್ಮ ಹೃದಯದಲ್ಲಿ ಅಲ್ಲ. ನಾವು ಮನುಷ್ಯರು ನಮಗೀಗ ನೋವಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಕೆಲವರು ಭಾರತಕ್ಕೆ ಆಮ್ಲಜನಕ ಪೂರೈಕೆ ಆಗಬೇಕು ಮತ್ತು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಭಾರತಕ್ಕೆ ಶಕ್ತಿ ತುಂಬಬೇಕು ಎಂದು ಬೇಡಿಕೊಂಡಿದ್ದಾರೆ.

ನಮ್ಮ ದೇಶಗಳ ಮಧ್ಯೆ ಗಡಿ ಇರಬಹುದು, ಹೃದಯದಲ್ಲಲ್ಲ! ನೆರೆಯ ರಾಷ್ಟ್ರವಾಗಿ ನಿಮ್ಮ ಸಹಾಯಕ್ಕೆ ಸದಾ ಸಿದ್ಧ ಎಂದು ಮನಗೆದ್ದ ಪಾಕಿಸ್ತಾನ
ನಿಮ್ಮೊಂದಿಗೆ ನಾವಿದ್ದೇವೆ ಎಂದು ಭಾರತಕ್ಕೆ ಧೈರ್ಯ ತುಂಬಿದ ಪಾಕಿಸ್ತಾನ
Skanda
|

Updated on: Apr 24, 2021 | 3:06 PM

Share

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅಪಾಯಕಾರಿ ರೀತಿಯಲ್ಲಿ ವ್ಯಾಪಿಸುತ್ತಿದ್ದು ಇಡೀ ದೇಶವನ್ನೇ ಮತ್ತೊಮ್ಮೆ ಆತಂಕದ ಸುಳಿಗೆ ಸಿಲುಕಿಸಿದೆ. ಮೊದಲ ಅಲೆಗಿಂತಲೂ ಈ ಬಾರಿ ಹೆಚ್ಚು ಗಂಭೀರ ಸ್ವರೂಪಕ್ಕೆ ತಿರುಗಿರುವ ಕೊರೊನಾ ಸೋಂಕು ಆರೋಗ್ಯ ವ್ಯವಸ್ಥೆಯನ್ನು ಅಲುಗಾಡಿಸುತ್ತಿದೆ. ಈ ಸಂದರ್ಭದಲ್ಲಿ ಭಾರತಕ್ಕೆ ಆಸ್ಟ್ರಾಜೆನಕಾ ಲಸಿಕೆ ಪೂರೈಕೆ ಮಾಡುವುದಾಗಿ ಯುಎಸ್ ಚೇಂಬರ್ ಆಫ್ ಕಾಮರ್ಸ್ ಬೆಂಬಲವನ್ನೂ ಸೂಚಿಸಿದೆ. ಇನ್ನೂ ಅಚ್ಚರಿಯ ವಿಚಾರವೆಂದರೆ ಭಾರತ ಸಂಕಷ್ಟಕ್ಕೆ ಸಿಲುಕಿರುವುದಕ್ಕೆ ನೆರೆಯ ಪಾಕಿಸ್ತಾನದಲ್ಲಿ #PakistanstandswithIndia ಎಂಬ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದೆ.

ಭಾರತ ಇಂತಹ ವಿಷಮ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ನೆರೆಯ ರಾಷ್ಟ್ರವಾಗಿ ಪಾಕಿಸ್ತಾನ ಕಾಳಜಿ ತೋರಿಸುತ್ತಿರುವುದಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಭಾರತ ಮತ್ತು ಪಾಕಿಸ್ತಾನ ವೈರಿ ರಾಷ್ಟ್ರಗಳೆಂದೇ ಬಿಂಬಿಸಲ್ಪಟ್ಟಿದ್ದರೂ ಈ ಹೊತ್ತಿನಲ್ಲಿ ಎಲ್ಲವನ್ನೂ ಮರೆತು ಭಾರತಕ್ಕೆ ಬೆಂಬಲ ಸೂಚಿಸುತ್ತಿರುವ ಪಾಕಿಸ್ತಾನೀಯರಿಗೆ ಭಾರತದ ಅನೇಕರು ಧನ್ಯವಾದ ಅರ್ಪಿಸಿದ್ದಾರೆ.

ನಾವು ನೆರೆಹೊರೆಯವರು, ಶತ್ರುಗಳಲ್ಲ. ನಾವು ಎದುರಾಳಿಗಳು, ವಿರೋಧಿಗಳಲ್ಲ. ನಮ್ಮ ದೇಶಗಳ ನಡುವೆ ಗಡಿಯಿದೆ, ನಮ್ಮ ಹೃದಯದಲ್ಲಿ ಅಲ್ಲ. ನಾವು ಮನುಷ್ಯರು ನಮಗೀಗ ನೋವಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಕೆಲವರು ಭಾರತಕ್ಕೆ ಆಮ್ಲಜನಕ ಪೂರೈಕೆ ಆಗಬೇಕು ಮತ್ತು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಭಾರತಕ್ಕೆ ಶಕ್ತಿ ತುಂಬಬೇಕು ಎಂದು ಬೇಡಿಕೊಂಡಿದ್ದಾರೆ.

ಸಾವು ಬದುಕಿನ ಪ್ರಶ್ನೆ ಎದುರಾದಾಗ ನಾವು ಒಂದಾಗಿ ನಿಲ್ಲಬೇಕು. ಇಂತಹ ಸಂದರ್ಭದಲ್ಲಿ ಮಾನವೀಯತೆಯನ್ನು ತೋರಿಸುವುದು ಮುಖ್ಯ. ಪಾಕಿಸ್ತಾನದಲ್ಲಿ ಇರುವವರು ನಿಜವಾಗಿಯೂ ಭಾರತದ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ಭಾರತೀಯರು ಎದುರಿಸುತ್ತಿರುವ ಕಷ್ಟಕ್ಕೆ ಮರುಗುತ್ತಿದ್ದಾರೆ ಎಮದು ವಾಸಿಮ್ ಅಬ್ಬಾಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ ರಣಾವತ್ ಕೂಡಾ ಪಾಕಿಸ್ತಾನೀಯರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, #PakistanstandswithIndia ಟ್ರೆಂಡ್ ಆಗಿರುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ಪಾಕಿಸ್ತಾನದ ಅಬ್ದುಲ್ ಸತ್ತಾರ್ ಈದಿ ಫೌಂಡೇಶನ್​ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಳಾಸಕ್ಕೆ ಪತ್ರವೊಂದನ್ನು ಬರೆಯಲಾಗಿದ್ದು, ಪತ್ರದಲ್ಲಿ ಭಾರತೀಯರು ಎದುರಿಸುತ್ತಿರುವ ಕಷ್ಟಕ್ಕೆ ನಾವು ನೆರೆಯ ರಾಷ್ಟ್ರವಾಗಿ ಸ್ಪಂದಿಸುತ್ತೇವೆ. ನಿಮಗೆ ಏನೇ ಅಗತ್ಯವಿದ್ದರೂ ಅದನ್ನು ಈಡೇರಿಸಲು ನಾವು ಸಿದ್ದ. ನೀವು ಅನುಮತಿ ನೀಡಿದರೆ ಭಾರತಕ್ಕೆ ಬಂದು ಸೇವೆ ಸಲ್ಲಿಸುತ್ತೇವೆ. ಮಾನವೀಯತೆಯೇ ಮುಖ್ಯವಾಗಿದ್ದು 50 ಆ್ಯಂಬುಲೆನ್ಸ್​ಗಳನ್ನು ಭಾರತಕ್ಕೆ ತಕ್ಷಣವೇ ಕಳುಹಿಸಿಕೊಡಲು ತಯಾರಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪತ್ರ ಟ್ವಿಟರ್​ನಲ್ಲಿ ಭಾರೀ ಸದ್ದು ಮಾಡುತ್ತಿದ್ದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲೂ ಟ್ರೆಂಡ್​ ಆಗ್ತಿದೆ #IndiaNeedsOxygen.. ನಾವು ಸಹ ಭಾರತೀಯರಿಗಾಗಿ ಪ್ರಾರ್ಥಿಸುತ್ತಿದ್ದೇವೆ: ಶೋಯೆಬ್ ಅಖ್ತರ್ 

ಪಾಕ್​ ಕೈಹಿಡಿದ ಭಾರತ: ಆತ್ಮನಿರ್ಭರ್ ಕೊರೊನಾ ಲಸಿಕೆ ಇದೀಗ ಪಾಕಿಸ್ತಾನಕ್ಕೂ ಪೂರೈಕೆ!

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ