AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಜನರ ಪರಿಸ್ಥಿತಿ ನೆನೆದು ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪಾಕಿಸ್ತಾನಿ ಸುದ್ದಿನಿರೂಪಕಿ

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ತಡರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಪಾಕ್ ಉಗ್ರರಿಗೆ ಬಿಸಿ ಮುಟ್ಟಿಸಿದೆ. ಹೌದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಂಡದ್ದಕ್ಕೆ ಭಾರತವೇ ಸಂಭ್ರಮಿಸುತ್ತಿದೆ. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನಿ ಸುದ್ದಿನಿರೂಪಕಿ ಯೊಬ್ಬಳು, ಭಾರತವು ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಲೈವ್ ನಲ್ಲಿಯೇ ಪಾಕ್ ಸ್ಥಿತಿ ಹಾಗೂ ಪಾಕ್ ಜನರನ್ನು ನೆನೆದು ಅಳಲು ಪ್ರಾರಂಭಿಸಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಪಾಕ್ ಜನರ ಪರಿಸ್ಥಿತಿ ನೆನೆದು ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪಾಕಿಸ್ತಾನಿ ಸುದ್ದಿನಿರೂಪಕಿ
ವೈರಲ್ ವಿಡಿಯೋ Image Credit source: Twitter
Follow us
ಸಾಯಿನಂದಾ
|

Updated on: May 07, 2025 | 3:27 PM

ಜಮ್ಮು ಮತ್ತು ಕಾಶ್ಮೀರ (jammu and kashmir) ದ ಪಹಲ್ಗಾಮ್‌ (pahalgam) ನಲ್ಲಿ ಪಾಕ್ ಉಗ್ರರು 26 ಭಾರತೀಯ ನಾಗರೀಕರನ್ನು ಹತ್ಯೆ ಮಾಡಿದ್ದು, ಇದೀಗ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಭಾರತವು ಆಪರೇಷನ್ ಸಿಂಧೂರ್ (operation sindoor) ಹೆಸರಿನಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿ ಪಾಕಿಸ್ತಾನದ ವಿರುದ್ದ ಸೇಡು ತೀರಿಸಿಕೊಂಡಿದೆ. ಆದರೆ ಇತ್ತ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿ ಜನ ಜೀವನವು ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಪಾಕಿಸ್ತಾನಿ ಸುದ್ದಿನಿರೂಪಕಿ ಲೈವ್ ನಲ್ಲಿ ಅಳುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ವಿಡಿಯೋವನ್ನು @RichKettle07 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೋ ದಲ್ಲಿ ಪಾಕಿಸ್ತಾನಿ ಸುದ್ದಿ ನಿರೂಪಕಿ ಲೈವ್ ನಲ್ಲಿ ಅಳುತ್ತಿರುವುದನ್ನು ಕಾಣಬಹುದು. ಇಲ್ಲಿನ ಅಮಾಯಕ ಜನರನ್ನು ಅಲ್ಲಾನೆ ಕಾಪಾಡಬೇಕು, ನಮ್ಮ ಮೇಲೆ ದೇವರೇ ಕರುಣೆ ತೋರಬೇಕು ಎಂದು ಅಳುತ್ತಾ ಹೇಳುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ
Image
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
Image
ರೈಲಿನ ಎಸಿ ಕೋಚ್​​ ಟಾಯ್ಲೆಟ್​​ನಲ್ಲಿ ಹಾವು ಪತ್ತೆ; ಆಮೇಲೇನಾಯ್ತು?
Image
ನಿಮ್ಗೊತ್ತಾ ಬ್ರೇಕಪ್‌ನಿಂದಲೂ ಹಲವಾರು ಪ್ರಯೋಜನಗಳಿವೆಯಂತೆ
Image
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್

ಇದನ್ನೂ ಓದಿ : Operation Sindoor : ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದು ಏನು ಗೊತ್ತಾ? ಇಲ್ಲಿದೆ ನೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಬಳಕೆದಾರರು ನಾನಾ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಆಕೆಯ ಕಣ್ಣಲ್ಲಿ ಕಣ್ಣೀರೆ ಬರುತ್ತಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ನಟಿಯಾಗಿ ಆಕೆಗೆ ಧಾರಾವಾಹಿಗಳಲ್ಲಿ ಒಳ್ಳೆಯ ಭವಿಷ್ಯವಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಅತ್ಯದ್ಭುತ ವಿಡಿಯೋವೊಂದು ವೈರಲ್ ಆಗಿದೆ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ