AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾತನಾಡಲು ಅವಕಾಶ ಸಿಗಲಿಲ್ಲವೆಂದು ಟಿವಿ ಚಾನೆಲ್​ ಲೈವ್​ನಲ್ಲೇ ಎದ್ದು ಡ್ಯಾನ್ಸ್​ ಮಾಡಿದ ಪ್ಯಾನಲಿಸ್ಟ್​​

ರಿಪಬ್ಲಿಕ್​ ಬಾಂಗ್ಲಾ ಚಾನೆಲ್​ನಲ್ಲಿ ನಡೆಯುತ್ತಿದ್ದ ನೇರ ಪ್ರಸಾರದ ಕಾರ್ಯಕ್ರಮದ ಚರ್ಚೆಯಲ್ಲಿ ಪ್ಯಾನಲಿಸ್ಟ್​ ಒಬ್ಬರು ಮಾತನಾಡಲು ಅವಕಾಶ ಸಿಗಲಿಲ್ಲವೆಂದು ನೇರಪ್ರಸಾರದಲ್ಲೇ ಎದ್ದು ನಿಂತು ಡ್ಯಾನ್ಸ್​​ ಮಾಡಿದ್ದಾರೆ.

Viral Video: ಮಾತನಾಡಲು ಅವಕಾಶ ಸಿಗಲಿಲ್ಲವೆಂದು ಟಿವಿ ಚಾನೆಲ್​ ಲೈವ್​ನಲ್ಲೇ ಎದ್ದು ಡ್ಯಾನ್ಸ್​ ಮಾಡಿದ ಪ್ಯಾನಲಿಸ್ಟ್​​
ನೇರಪ್ರಸಾರದಲ್ಲಿ ಡ್ಯಾನ್ಸ್​ ಮಾಡಿದ ಪಾನಲಿಸ್ಟ್​
TV9 Web
| Edited By: |

Updated on:Jan 19, 2022 | 6:00 PM

Share

ಕೆಲವೊಮ್ಮೆ ಜನ ತಮ್ಮಡೆಗೆ ಇತರರು ಗಮನಹರಿಸಬೇಕೆಂದು ವಿಚಿತ್ರ ರೀತಿಯಲ್ಲಿ ವರ್ತಿಸುತ್ತಾರೆ. ಅಂತಹದ್ದೇ ಒಂದು ಘಟನೆ ಟಿವಿಯೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ನಡೆದಿದೆ. ರಿಪಬ್ಲಿಕ್​ ಬಾಂಗ್ಲಾ (Republic Bangla)  ಚಾನೆಲ್​ನಲ್ಲಿ ನಡೆಯುತ್ತಿದ್ದ ನೇರ ಪ್ರಸಾರದ ಕಾರ್ಯಕ್ರಮದ ಚರ್ಚೆಯಲ್ಲಿ ಪ್ಯಾನಲಿಸ್ಟ್ (Panelist)​ ಒಬ್ಬರು ಮಾತನಾಡಲು ಅವಕಾಶ ಸಿಗಲಿಲ್ಲವೆಂದು ನೇರಪ್ರಸಾರದಲ್ಲೇ ಎದ್ದು ನಿಂತು ಡ್ಯಾನ್ಸ್ (Dance) ಮಾಡಿದ್ದಾರೆ. ಇದು ಒಂದು ವರ್ಷದ ಹಳೆಯ ವಿಡಿಯೋ. ಆದರೆ ಈಗ ವೈರಲ್​ ಆಗಿದೆ. ಎದ್ದು ನಿಂತು ಡ್ಯಾನ್ಸ್​ ಮಾಡಿದ ಪ್ಯಾನಲಿಸ್ಟ್​ ಅನ್ನು ಪರಿಸರವಾದಿ ರೋಶನಿ ಅಲಿ (Roshni Ali) ಎಂದು ಗುರುತಿಸಲಾಗಿದೆ. ದೀಪಾವಳಿಯಲ್ಲಿ ಪಟಾಕಿ ನಿಷೇಧಿಸಬೇಕು ಎನ್ನುವ ಕುರಿತಾದ ಚರ್ಚೆಯ ವೇಳೆ ಮಾತನಾಡಲು ಅವಕಾಶ  ಸಿಗಲಿಲ್ಲವೆಂದು ಎದ್ದು ನಿಂತು ಡ್ಯಾನ್ಸ್​ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ರೋಶನಿ ಅಲಿ ಈ ಹಿಂದೆ ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಸಲ್ಲಿಸಿದ್ದ ದೂರಿನಲ್ಲಿ ಪಟಾಕಿಯಿಂದ ವಾಯು ಮಾಲಿನ್ಯದಿಂದ ಕೊರೋನಾ ಸೋಂಕು ಹೆಚ್ಚುತ್ತದೆ ಎಂದು ಹೇಳಿದ್ದರು. ಇದೀಗ ವಿಡಿಯೋದಲ್ಲಿ ಡಿಬೇಟ್​ ವೇಳೆ ಪಟಾಕಿಯನ್ನು ನಿಷೇಧಿಸಬೇಕು. ಅದು ಪರಿಸರಕ್ಕೆ ಮಾರಕವಾಗಿದೆ. ಅಲ್ಲದೆ ಕೊರೋನಾ ಹರಡಲೂ ಕಾರಣವಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಬಯಸಿದ್ದರು. ಆದರೆ ಅವಕಾಶ ಸಿಗದೆ ಎದ್ದು ನಿಂತು ಡ್ಯಾನ್ಸ್​ ಮಾಡಿದ್ದಾರೆ. ರೋಶನಿ ಅವರು ಎದ್ದು ನಿಂತು ಡ್ಯಾನ್ಸ್​ ಮಾಡುತ್ತಿದ್ದಂತೆಯೆ ಉಳಿದ ಪ್ಯಾನಲಿಸ್ಟ್​ಗಳು ಗಾಬರಿಗೊಂಡಿದ್ದಾರೆ. ನಂತರ ಅವರ ವರ್ತನೆ ನೋಡಿ ಮಾತನಾಡಲು ಅವಕಾಶ ನೀಡಲಾಯಿತು. ಈ ಕುರಿತು ನ್ಯೂಸ್​ 18 ಸುದ್ದಿ ಸಂಸ್ಥೆ ವರದಿ ಮಾಡಿದೆ.

2021ರ ನವೆಂಬರ್​ನಲ್ಲಿ ಸುಪ್ರೀಮ್​ ಕೋರ್ಟ್​ ವಾಯು ಮಾಲಿನ್ಯ ಹೆಚ್ಚಿರುವ ಮತ್ತು ಕೊರೋನಾ ರೋಗಿಗಳು ಐಸೋಲೇಟ್​ ಆಗಿರುವ ಪ್ರದೇಶಗಳಲ್ಲಿ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪಟಾಕಿಗಳನ್ನು ನಿಷೇಧಿಸಿತ್ತು. ಉಳಿದ ಪ್ರದೇಶಗಳಲ್ಲಿಯೂ ಹಸಿರು ಪಟಾಕಿಯನ್ನು ಮಾತ್ರ ಸಿಡಿಸಲು ಅವಕಾಶ ನೀಡಿತ್ತು. ಈ ಕುರಿತು ವಾದ ಮಂಡಿಸಿದ್ದ ರೋಶನಿ ಅವರ ವಿಡಯೋವನ್ನು ಎಲಿಜಬೇತ್​ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಮಸಾಲಾ ದೋಸೆ ಐಸ್​ಕ್ರೀಮ್​ ಕಂಡು ಮೂಗುಮುರಿದ ನೆಟ್ಟಿಗರು

Published On - 5:17 pm, Wed, 19 January 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ