AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾರ್‌ಕೋಡ್‌ ತೋರಿಸಿ ಪ್ರಯಾಣಿಕರಿಂದ ಟಿಪ್ ಪಡೆಯುತ್ತಿರುವ ಅಡುಗೆ ಸಿಬ್ಬಂದಿ, ವಿಡಿಯೋ ವೈರಲ್

ಬಜೆಟ್‌ ಫ್ರೆಂಡ್ಲಿ ಹಾಗೂ ಆರಾಮದಾಯಕ ಎಂದು ಹೆಚ್ಚಿನ ಜನರು ತಮ್ಮ ದಿನ ನಿತ್ಯದ ಓಡಾಟಕ್ಕಾಗಿ ಈ ರೈಲನ್ನೇ ಅವಲಂಬಿಸಿದ್ದಾರೆ. ಆದರೆ ಕೆಲವೊಮ್ಮೆ ಪ್ರಯಾಣಿಕರು ಆಹಾರ ಖರೀದಿಸುವ ವೇಳೆ ಹೆಚ್ಚುವರಿ ಹಣ ವಸೂಲಿ ಮಾಡುವ ಘಟನೆಗಳು ನಡೆಯುತ್ತಿರುತ್ತದೆ. ಇದೀಗ ವಿಡಿಯೋದಲ್ಲಿ ಅಡುಗೆ ಸಿಬ್ಬಂದಿಯೊಬ್ಬರು ಪ್ರಯಾಣಿಕರಿಂದ ಟಿಪ್ ಆಗಿ ಹಣವನ್ನು ವಸೂಲಿ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

Follow us
ಸಾಯಿನಂದಾ
|

Updated on: Jun 06, 2025 | 3:38 PM

ಆರಾಮದಾಯಕ ಹಾಗೂ ಖರ್ಚು ಕಡಿಮೆ ಎನ್ನುವ ಕಾರಣಕ್ಕೆ ಈ ರೈಲು ಸಾರಿಗೆ (railway transp0rt) ಬೆಸ್ಟ್ ಎನ್ನಬಹುದು. ಹೀಗಾಗಿ ದೆಹಲಿ, ಮುಂಬೈಯಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜನರು ತಮ್ಮ ದಿನನಿತ್ಯದ ಕೆಲಸಕಾರ್ಯಗಳಿಗೆ ಹಾಗೂ ಓಡಾಟಕ್ಕೆ ರೈಲನ್ನು ಅವಲಂಬಿಸಿಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಪ್ರಯಾಣಿಕರಿಂದ ರೈಲ್ವೆ ಸಿಬ್ಬಂದಿಗಳು ಹೆಚ್ಚುವರಿ ಹಣ ವಸೂಲಿ ಮಾಡುವ ಘಟನೆಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ರಾಜಧಾನಿ ಎಕ್ಸ್‌ಪ್ರೆಸ್ (Rajdhani Express) ನಲ್ಲಿ ಅಡುಗೆ ಸಿಬ್ಬಂದಿ (pantry staff) ಯೊಬ್ಬರು ಮೊಬೈಲ್‌ನಲ್ಲಿ ಬಾರ್‌ಕೋಡ್‌ ತೋರಿಸಿ ಹಣ ವಸೂಲಿ ಮಾಡುತ್ತಿದ್ದು, ಇದನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

@Pritamtayde0 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಶೇರ್ ಮಾಡಿಕೊಂಡಿದ್ದು, ನಾನು ಕೆಆರ್ ಎಸ್ ಬೆಂಗಳೂರಿನಿಂದ ನಾಗ್ಪುರ ಜಂಕ್ಷನ್‌ಗೆ ರೈಲು ಸಂಖ್ಯೆ 22691, ಕೋಚ್ B 2 ನಲ್ಲಿ ಪ್ರಯಾಣಿಸುವುದಾಗಿ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ, ಅಡುಗೆ ಸಿಬ್ಬಂದಿಯೊಬ್ಬರು ಪ್ರಯಾಣಿಕರಿಂದ ಟಿಪ್ ನೀಡುವಂತೆ ಕೇಳಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅಡುಗೆ ಸಿಬ್ಬಂದಿಯೊಬ್ಬರು ಪ್ರಯಾಣಿಕರಿಂದ ಟಿಪ್ ಕೇಳುವುದನ್ನು  ನೋಡಬಹುದು. ಸಿಬ್ಬಂದಿಯೂ ನೇರವಾಗಿ ಹಣ ಕೇಳದೆ, ಹವಾನಿಯಂತ್ರಿತ ಕೋಚ್‌ನಲ್ಲಿರುವ ಪ್ರಯಾಣಿಕರಿಗೆ ಮೊಬೈಲ್ ನಲ್ಲಿ ಬಾರ್‌ಕೋಡ್‌ನ್ನು ತೋರಿಸಿ ಟಿಪ್ ಪಡೆಯುತ್ತಿರುವುದನ್ನು ಕಾಣಬಹುದು. ಪ್ರಯಾಣಿಕರೊಬ್ಬರು ನಾನು ಕೊಟ್ಟೆ ಎನ್ನುತ್ತಿದ್ದಂತೆ. ಸರಿ ಯಾವುದೇ ಸಮಸ್ಯೆ ಇಲ್ಲ ಎಂದು ನಿಧಾನ ಧ್ವನಿಯಲ್ಲಿ ಈ ಸಿಬ್ಬಂದಿ ಹೇಳುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ನಳಿನ್​​​ ಕುಮಾರ್​​ ಕಟೀಲ್‌ಗೆ ಥ್ಯಾಂಕ್ಸ್​​​​ ಹೇಳಿ : ಪ್ರತಾಪ್​​​ ಸಿಂಹ
Image
ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ರೊಮ್ಯಾನ್ಸ್ ಮಾಡ್ತಾ ನಿಂತ ಸ್ಟೂಡೆಂಟ್
Image
ಯುವತಿಯ ಎರಡು ಆಫರ್ ರಿಜೆಕ್ಟ್ ಮಾಡಿದ ಯುವಕ
Image
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ

ಇದನ್ನೂ ಓದಿ :Video : ಸೈಕಲ್‌ ಸವಾರನನ್ನು ಕಂಡು ಭಯಬಿದ್ದ ಕರಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಮೇ 9 ರಂದು ಶೇರ್ ಮಾಡಲಾದ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಈ ಪೋಸ್ಟ್‌ಗೆ ಅಧಿಕೃತ ಐಆರ್ ಸಿಟಿಸಿ ಖಾತೆ ಪ್ರತಿಕ್ರಿಯಿಸಿದ್ದು, ಸರ್, ದಯವಿಟ್ಟು ಮೊಬೈಲ್ ಸಂಖ್ಯೆಯನ್ನು ನೇರವಾಗಿ ಹಂಚಿಕೊಳ್ಳಿ ಎಂದು ತಿಳಿಸಿದೆ. ಬಳಕೆದಾರರೊಬ್ಬರು, ರೈಲ್ವೆ ಅಧಿಕಾರಿಗಳೇ ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಮತ್ತೊಬ್ಬರು, ಈ ಸಿಬ್ಬಂದಿ ಒಳ್ಳೆಯ ಸೇವೆಯನ್ನು ನೀಡಿದರೆ ನಿಮ್ಮಿಂದ ಟಿಪ್ ನಿರೀಕ್ಷಿಸಬಹುದು, ಆದರೆ ಒತ್ತಾಯಿಸುವಂತಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊರ್ವ ಬಳಕೆದಾರರು, ಈ ಅನುಭವವು ನನಗೂ ಆಗಿದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ