AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ

Chhattisgarh : ಅಲ್ಲಿದ್ದವರು ಕೂಗಿಕೊಂಡರೂ ಲೆಕ್ಕಿಸದೇ ಈಕೆ 90 ಅಡಿಯಿಂದ ಧುಮುಕಿದ್ದಾಳೆ. ಪೋಷಕರು ಗದರಿದ್ದಕ್ಕೆ ಈಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದನ್ನು ಪೊಲೀಸರು ಸಾಬೀತುಪಡಿಸಿದ್ದಾರೆ. ಅದೃಷ್ಟಕ್ಕೆ ಬದುಕುಳಿದಿದ್ದಾಳೆ.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ
ಛತ್ತೀಸಗಡದ ಚಿತ್ರಕೋಟೆ ಜಲಪಾತದಲ್ಲಿ ಶಾಲಾಬಾಲಕಿ ಬೀಳುತ್ತಿರುವ ದೃಶ್ಯ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 20, 2023 | 3:07 PM

Share

Mobile : ಮೊಬೈಲ್​ ನೋಡಬೇಡ ಎಂದು ಮಕ್ಕಳನ್ನು ಗದರುವಾಗಲೂ ಪೋಷಕರ ಕೈಯಲ್ಲಿ ಮೊಬೈಲ್​ ಇದ್ದೇ ಇರುತ್ತದೆ. ಹೀಗಿದ್ದಾಗ ಪೋಷಕರು ಹೇಳಿದ್ದರ ಕಡೆ ಮಕ್ಕಳ ಗಮನವಾದರೂ ಹೇಗೆ ಹೋಗಬೇಕು? ಇದು ಇಂದಿನ ವಿಪರ್ಯಾಸ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಶಾಲಾಬಾಲಕಿಯೊಬ್ಬಳ ಪೋಷಕರು, ಜಾಸ್ತಿ ಮೊಬೈಲ್​ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ್ದಾಳೆ. ಹೀಗಾದರೆ ಹೇಗೆ? ಮಕ್ಕಳಿಗೆ ತಿಳಿಹೇಳುವುದು ಬಹಳೇ ಕಷ್ಟ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಈ ಬಾಲಕಿ ಹೀಗೆ ಜಲಪಾತಕ್ಕೆ ಹಾರುವ ದೃಶ್ಯವನ್ನು ನೋಡಿದ ಯಾರಿಗೂ ಭಯವಾಗುತ್ತದೆ. ಅವರವರ ಮನೆಯ ಮಕ್ಕಳ ಬಗ್ಗೆ ಆತಂಕವಾಗುತ್ತದೆ. ಆದರೆ ಅದೃಷ್ಟವಶಾತ್​ ಈ ಬಾಲಕಿ ಬದುಕುಳಿತಿದ್ದಾಳೆ! ಈ ವಿಡಿಯೋ ಅನ್ನು ಸುಶ್ರೀ ಸಂಗೀತಾ ಎಂಬ ಪತ್ರಕರ್ತೆ ಟ್ವೀಟ್ ಮಾಡಿದ್ದಾರೆ. ‘ಅತಿಯಾಗಿ ಮೊಬೈಲ್​ ಬಳಸಬೇಡ ಎಂದು ಪೋಷಕರು ಗದರಿದ್ದಕ್ಕೆ ಈ ಹುಡುಗಿ ಛತ್ತೀಸ್​ಗಢದ ಚಿತ್ರಕೋಟೆಯ ಜಲಪಾತಕ್ಕೆ ಹಾರಿದ್ದಾಳೆ. ಮೊಬೈಲ್​ನಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಸ್ಮಾರ್ಟ್​​ಫೋನ್​​ಗಳಿಂದ ನಿಮ್ಮ ಮಕ್ಕಳನ್ನು ದೂರವಿಡಿ’ ಎಂದು ಆಕೆ ಒಕ್ಕಣೆ ಬರೆದಿದ್ದಾರೆ.

ಇದನ್ನೂ ಓದಿ : Viral Video: ನಮ್ಮ ದೇಶದಲ್ಲಿ ಇಂಥ ಐಡಿಯಾ ಇತ್ತೇ, ಇದೆಯೇ? ನೆಟ್ಟಿಗರ ಜಗಳ ಬಿಡಿಸಿ

ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ.  ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ.

ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ  ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ. ಕೊನೆಗೆ ಆಕೆಯನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:05 pm, Thu, 20 July 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್