AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ

Chhattisgarh : ಅಲ್ಲಿದ್ದವರು ಕೂಗಿಕೊಂಡರೂ ಲೆಕ್ಕಿಸದೇ ಈಕೆ 90 ಅಡಿಯಿಂದ ಧುಮುಕಿದ್ದಾಳೆ. ಪೋಷಕರು ಗದರಿದ್ದಕ್ಕೆ ಈಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದನ್ನು ಪೊಲೀಸರು ಸಾಬೀತುಪಡಿಸಿದ್ದಾರೆ. ಅದೃಷ್ಟಕ್ಕೆ ಬದುಕುಳಿದಿದ್ದಾಳೆ.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ
ಛತ್ತೀಸಗಡದ ಚಿತ್ರಕೋಟೆ ಜಲಪಾತದಲ್ಲಿ ಶಾಲಾಬಾಲಕಿ ಬೀಳುತ್ತಿರುವ ದೃಶ್ಯ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 20, 2023 | 3:07 PM

Share

Mobile : ಮೊಬೈಲ್​ ನೋಡಬೇಡ ಎಂದು ಮಕ್ಕಳನ್ನು ಗದರುವಾಗಲೂ ಪೋಷಕರ ಕೈಯಲ್ಲಿ ಮೊಬೈಲ್​ ಇದ್ದೇ ಇರುತ್ತದೆ. ಹೀಗಿದ್ದಾಗ ಪೋಷಕರು ಹೇಳಿದ್ದರ ಕಡೆ ಮಕ್ಕಳ ಗಮನವಾದರೂ ಹೇಗೆ ಹೋಗಬೇಕು? ಇದು ಇಂದಿನ ವಿಪರ್ಯಾಸ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಶಾಲಾಬಾಲಕಿಯೊಬ್ಬಳ ಪೋಷಕರು, ಜಾಸ್ತಿ ಮೊಬೈಲ್​ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ್ದಾಳೆ. ಹೀಗಾದರೆ ಹೇಗೆ? ಮಕ್ಕಳಿಗೆ ತಿಳಿಹೇಳುವುದು ಬಹಳೇ ಕಷ್ಟ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಈ ಬಾಲಕಿ ಹೀಗೆ ಜಲಪಾತಕ್ಕೆ ಹಾರುವ ದೃಶ್ಯವನ್ನು ನೋಡಿದ ಯಾರಿಗೂ ಭಯವಾಗುತ್ತದೆ. ಅವರವರ ಮನೆಯ ಮಕ್ಕಳ ಬಗ್ಗೆ ಆತಂಕವಾಗುತ್ತದೆ. ಆದರೆ ಅದೃಷ್ಟವಶಾತ್​ ಈ ಬಾಲಕಿ ಬದುಕುಳಿತಿದ್ದಾಳೆ! ಈ ವಿಡಿಯೋ ಅನ್ನು ಸುಶ್ರೀ ಸಂಗೀತಾ ಎಂಬ ಪತ್ರಕರ್ತೆ ಟ್ವೀಟ್ ಮಾಡಿದ್ದಾರೆ. ‘ಅತಿಯಾಗಿ ಮೊಬೈಲ್​ ಬಳಸಬೇಡ ಎಂದು ಪೋಷಕರು ಗದರಿದ್ದಕ್ಕೆ ಈ ಹುಡುಗಿ ಛತ್ತೀಸ್​ಗಢದ ಚಿತ್ರಕೋಟೆಯ ಜಲಪಾತಕ್ಕೆ ಹಾರಿದ್ದಾಳೆ. ಮೊಬೈಲ್​ನಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಸ್ಮಾರ್ಟ್​​ಫೋನ್​​ಗಳಿಂದ ನಿಮ್ಮ ಮಕ್ಕಳನ್ನು ದೂರವಿಡಿ’ ಎಂದು ಆಕೆ ಒಕ್ಕಣೆ ಬರೆದಿದ್ದಾರೆ.

ಇದನ್ನೂ ಓದಿ : Viral Video: ನಮ್ಮ ದೇಶದಲ್ಲಿ ಇಂಥ ಐಡಿಯಾ ಇತ್ತೇ, ಇದೆಯೇ? ನೆಟ್ಟಿಗರ ಜಗಳ ಬಿಡಿಸಿ

ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ.  ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ.

ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ  ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ. ಕೊನೆಗೆ ಆಕೆಯನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:05 pm, Thu, 20 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!