AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ

Chhattisgarh : ಅಲ್ಲಿದ್ದವರು ಕೂಗಿಕೊಂಡರೂ ಲೆಕ್ಕಿಸದೇ ಈಕೆ 90 ಅಡಿಯಿಂದ ಧುಮುಕಿದ್ದಾಳೆ. ಪೋಷಕರು ಗದರಿದ್ದಕ್ಕೆ ಈಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದನ್ನು ಪೊಲೀಸರು ಸಾಬೀತುಪಡಿಸಿದ್ದಾರೆ. ಅದೃಷ್ಟಕ್ಕೆ ಬದುಕುಳಿದಿದ್ದಾಳೆ.

Viral Video: ಮೊಬೈಲ್​ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾಬಾಲಕಿ
ಛತ್ತೀಸಗಡದ ಚಿತ್ರಕೋಟೆ ಜಲಪಾತದಲ್ಲಿ ಶಾಲಾಬಾಲಕಿ ಬೀಳುತ್ತಿರುವ ದೃಶ್ಯ
ಶ್ರೀದೇವಿ ಕಳಸದ
|

Updated on:Jul 20, 2023 | 3:07 PM

Share

Mobile : ಮೊಬೈಲ್​ ನೋಡಬೇಡ ಎಂದು ಮಕ್ಕಳನ್ನು ಗದರುವಾಗಲೂ ಪೋಷಕರ ಕೈಯಲ್ಲಿ ಮೊಬೈಲ್​ ಇದ್ದೇ ಇರುತ್ತದೆ. ಹೀಗಿದ್ದಾಗ ಪೋಷಕರು ಹೇಳಿದ್ದರ ಕಡೆ ಮಕ್ಕಳ ಗಮನವಾದರೂ ಹೇಗೆ ಹೋಗಬೇಕು? ಇದು ಇಂದಿನ ವಿಪರ್ಯಾಸ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಶಾಲಾಬಾಲಕಿಯೊಬ್ಬಳ ಪೋಷಕರು, ಜಾಸ್ತಿ ಮೊಬೈಲ್​ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ್ದಾಳೆ. ಹೀಗಾದರೆ ಹೇಗೆ? ಮಕ್ಕಳಿಗೆ ತಿಳಿಹೇಳುವುದು ಬಹಳೇ ಕಷ್ಟ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಈ ಬಾಲಕಿ ಹೀಗೆ ಜಲಪಾತಕ್ಕೆ ಹಾರುವ ದೃಶ್ಯವನ್ನು ನೋಡಿದ ಯಾರಿಗೂ ಭಯವಾಗುತ್ತದೆ. ಅವರವರ ಮನೆಯ ಮಕ್ಕಳ ಬಗ್ಗೆ ಆತಂಕವಾಗುತ್ತದೆ. ಆದರೆ ಅದೃಷ್ಟವಶಾತ್​ ಈ ಬಾಲಕಿ ಬದುಕುಳಿತಿದ್ದಾಳೆ! ಈ ವಿಡಿಯೋ ಅನ್ನು ಸುಶ್ರೀ ಸಂಗೀತಾ ಎಂಬ ಪತ್ರಕರ್ತೆ ಟ್ವೀಟ್ ಮಾಡಿದ್ದಾರೆ. ‘ಅತಿಯಾಗಿ ಮೊಬೈಲ್​ ಬಳಸಬೇಡ ಎಂದು ಪೋಷಕರು ಗದರಿದ್ದಕ್ಕೆ ಈ ಹುಡುಗಿ ಛತ್ತೀಸ್​ಗಢದ ಚಿತ್ರಕೋಟೆಯ ಜಲಪಾತಕ್ಕೆ ಹಾರಿದ್ದಾಳೆ. ಮೊಬೈಲ್​ನಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಸ್ಮಾರ್ಟ್​​ಫೋನ್​​ಗಳಿಂದ ನಿಮ್ಮ ಮಕ್ಕಳನ್ನು ದೂರವಿಡಿ’ ಎಂದು ಆಕೆ ಒಕ್ಕಣೆ ಬರೆದಿದ್ದಾರೆ.

ಇದನ್ನೂ ಓದಿ : Viral Video: ನಮ್ಮ ದೇಶದಲ್ಲಿ ಇಂಥ ಐಡಿಯಾ ಇತ್ತೇ, ಇದೆಯೇ? ನೆಟ್ಟಿಗರ ಜಗಳ ಬಿಡಿಸಿ

ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ.  ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ.

ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ  ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ. ಕೊನೆಗೆ ಆಕೆಯನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:05 pm, Thu, 20 July 23

Follow Us
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?