Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

ಮಧ್ಯಪ್ರದೇಶದ ಈ ಗಿಳಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸ್ನೇಹ ಬೆಳೆಸಿದೆ. ವಿದ್ಯಾರ್ಥಿಗಳು ಶಾಲೆಗೆ ಹೊರಟಾಗ ಅವರೊಡನೆ ಈ ಮುದ್ದಾದ ಗಿಳಿಯೂ ಸಹ ಶಾಲೆಗೆ ಹೋಗುತ್ತಿದೆ.

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು
ಶಾಲೆಗೆ ಹೊರಟಿದೆ ಈ ಮುದ್ದಾದ ಗಿಳಿ
Follow us
| Updated By: shruti hegde

Updated on:Oct 03, 2021 | 1:01 PM

ಪ್ರಾಣಿಗಳು ಮತ್ತು ಪಕ್ಷಿಗಳು ಮನುಷ್ಯರನ್ನು ಎಷ್ಟು ಹಚ್ಚಿಕೊಳ್ಳುತ್ತವೆ ಎಂಬುದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಂದು ಸುದ್ದಿಯಿದೆ. ನಾವು ಪಕ್ಷಿ ಅಥವಾ ಪ್ರಾಣಿಗಳಿಗೆ ಎಷ್ಟು ಪ್ರೀತಿ ತೋರಿಸುತ್ತೇವೆಯೋ ಅಷ್ಟೇ ಪ್ರೀತಿಯನ್ನು ಅವು ನಮಗೆ ನೀಡುತ್ತವೆ ಎಂಬುದಕ್ಕೆ ಈ ಸುದ್ದಿ ಮಾದರಿಯಾಗಿದೆ. ಮನುಷ್ಯರ ಭಾಷೆ, ನಡವಳಿಕೆಯನ್ನು ಅರ್ಥ ಮಾಡಿಕೊಂಡ ಮುದ್ದಾದ ಗಿಳಿಮರಿಯೊಂದು ವಿದ್ಯಾರ್ಥಿಗಳೊಡನೆ ಶಾಲೆಗೆ ಹೋಗುತ್ತದೆ. ಹೃದಯಸ್ಪರ್ಶಿ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮಧ್ಯಪ್ರದೇಶದ ಈ ಗಿಳಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸ್ನೇಹ ಬೆಳೆಸಿದೆ. ವಿದ್ಯಾರ್ಥಿಗಳು ಶಾಲೆಗೆ ಹೊರಟಾಗ ಅವರೊಡನೆ ಈ ಮುದ್ದಾದ ಗಿಳಿಯೂ ಸಹ ಶಾಲೆಗೆ ಹೋಗುತ್ತಿದೆ. ಇವರಿಬ್ಬರ ನಡುವಿನ ಅನನ್ಯ ಸ್ನೇಹಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಕುರಿತಂತೆ ಎಎನ್​ಐ ಸುದ್ದಿ ಮಾಡಿದೆ. ಗಿಳಿಯು ವಿದ್ಯಾರ್ಥಿಗಳ ಜತೆಗಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಎಎನ್ಐ ಜತೆ ಮಾತನಾಡಿದ ವಿದ್ಯಾರ್ಥಿ ವಿವೇಕ್, ನಾವು ಶಾಲೆಗೆ ಹೊರಡುವಾಗ ಪ್ರತಿದಿನ ಗಿಳಿ ನಮ್ಮ ಜತೆಗೆ ಬರುತ್ತದೆ. ನಮ್ಮ ಹೆಗಲೆ ಮೇಲೆ ಕುಳಿತುಕೊಂಡು ಶಾಲೆಗೆ ಹೋಗುತ್ತದೆ ಕೆಲವು ಬಾರಿ ನಮ್ಮ ತಲೆಯ ಮೇಲೂ ಕುಳಿತುಕೊಳ್ಳುತ್ತದೆ. ಗಿಳಿಯೊಡನೆ ನಾವು ಹೆಚ್ಚು ಸಂತೋಷವಾಗಿದ್ದೇವೆ ಅದರೊಂದಿಗೆ ಆಡುತ್ತೇವೆ ಹಾಗಾಗಿ ಗಿಳಿ ನಮ್ಮ ಜತೆಯೇ ಇರುತ್ತದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾನೆ.

ಗಿಳಿ ಮತ್ತು ವಿದ್ಯಾರ್ಥಿಗಳ ಈ ಸ್ನೇಹ ನೆಟ್ಟಿಗರಿಗೆ ಹೆಚ್ಚು ಇಷ್ಟವಾಗಿದೆ. ಇದು ಜನ್ಮ ಜನ್ಮದ ಸಂಬಂಧ ಎಂದು ಓರ್ವರು ಹೇಳಿದ್ದಾರೆ. ಇನ್ನೋರ್ವರು ಇವರ ಸ್ನೇಹ ಮೆಚ್ಚಿಗೆಯಾಗುವಂತಿದೆ, ನನಗೆ ಇಷ್ಟವಾಯಿತು ಎಂದು ಹೇಳಿದ್ದಾರೆ. ಗಿಳಿ ವಿದ್ಯಾರ್ಥಿಯ ಭುಜದ ಮೇಲೆ ಕುಳಿತಿರುವ ಫೋಟೋ ಅನನ್ಯವಾಗಿದೆ ಎಂಬ ಅಭಿಪ್ರಾಯಗಳೂ ಸಹ ಕೇಳಿಬಂದಿದೆ.

ಇದನ್ನೂ ಓದಿ:

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

Viral Video: ಮದುವೆ ದಿನವೇ ಕೋಪಗೊಂಡು ಏಣಿ ಸಹಾಯದಿಂದ ಮನೆಯ ಮೇಲ್ಛಾವಣಿ ಹತ್ತಿ ಕುಳಿತ ವಧು; ವಿಡಿಯೋ ಮಜವಾಗಿದೆ ನೀವೂ ನೋಡಿ

Published On - 1:01 pm, Sun, 3 October 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ