AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಾಲಕನ ಕಷ್ಟ ಅರಿತು ತಾನೇ ಕ್ಯಾಬ್ ಓಡಿಸಿ ಲಖನೌ ತಲುಪಿದ ಪ್ರಯಾಣಿಕ

ಅಪರಿಚಿತ ವ್ಯಕ್ತಿಗಳಿಗೆ ಸಹಾಯ ಮಾಡುವವರನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದೀಗ ನಿದ್ದೆಯಲ್ಲಿದ್ದು ಆಯಾಸಗೊಂಡಿದ್ದ ಕ್ಯಾಬ್ ಡ್ರೈವರ್ ನನ್ನು ಗಮನಿಸಿದ ಪ್ರಯಾಣಿಕನೊಬ್ಬ ತಾನೇ ಕ್ಯಾಬ್ ಓಡಿಸಿ ತಲುಪಬೇಕಾದ್ದಲ್ಲಿಗೆ ತಲುಪಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಯುವಕನ ಈ ಮಾನವೀಯ ಕೆಲಸಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

Video: ಚಾಲಕನ ಕಷ್ಟ ಅರಿತು ತಾನೇ ಕ್ಯಾಬ್ ಓಡಿಸಿ ಲಖನೌ ತಲುಪಿದ ಪ್ರಯಾಣಿಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 15, 2026 | 7:34 PM

Share

ಈಗಿನ ಕಾಲದಲ್ಲಿ ಜನರ ಮನಸ್ಥಿತಿ ಅರಿತುಕೊಳ್ಳುವುದೇ ಕಷ್ಟ. ಹೀಗಿರುವಾಗ ಇನ್ನೊಬ್ಬರ ಕಷ್ಟ, ನೋವು ಅರಿತು ಸಹಾಯ (help) ಮಾಡುವ ಅಪರಿಚಿತ ವ್ಯಕ್ತಿಗಳು ಇದ್ದಾರೆ ಅಂದ್ರೆ ನೀವು ನಂಬುತ್ತಿರಾ. ಇದಕ್ಕೆ ಉದಾಹರಣೆಯಂತಿದ್ದಾನೆ ಈ ಪ್ರಯಾಣಿಕ. ಹೌದು, ಕ್ಯಾಬ್‌ ಡ್ರೈವರ್‌ನ ಆಯಾಸ ಅರಿತ ಪ್ರಯಾಣಿಕನೊಬ್ಬ ತಾನೇ ಕ್ಯಾಬ್ ಓಡಿಸಿ ಲಖನೌ ತಲುಪಿದ್ದಾನೆ. ಪ್ರಯಾಣಿಕನ ಒಳ್ಳೆತನಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

 ಕ್ಯಾಬ್‌ ಚಾಲಕನ ಕಷ್ಟ ಅರಿತ ಪ್ರಯಾಣಿಕ ಮಾಡಿದ್ದೇನು?

ಟ್ರಾವೆಲರ್ ಮಿಶ್ರಾ (travellermishra) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಶಿವ ಮಿಶ್ರಾ ಎಂಬ ಯುವಕನು ನೋಯ್ಡಾದಿಂದ ಲಖನೌಗೆ ಕ್ಯಾಬ್ ಬುಕ್ ಮಾಡಿದ್ದಾನೆ. ಇದೇ ವೇಳೆ ಕ್ಯಾಬ್ ಚಾಲಕನು ಆಯಾಸಗೊಂಡಿದ್ದಾನೆಯೆಂದು ತಿಳಿದು ರೆಸ್ಟ್ ಮಾಡಲು ಹೇಳಿದ್ದಾನೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ನಾನೀಗ ನೋಯ್ಡಾದಿಂದ ಲಖನೌಗೆ ಪ್ರಯಾಣಿಸುತ್ತಿದ್ದೇನೆ. ನಾನು ಕ್ಯಾಬ್ ಬುಕ್ ಮಾಡಿದ್ದೆ. ಆದರೆ ಡ್ರೈವರ್ ಹಿಂದಿನ ದಿನ ಡ್ರೈವ್ ಮಾಡಿ ದಣಿದಿದ್ದರು. ಇಂತಹ ಸಂದರ್ಭ ಏರ್ಪಟ್ಟಾಗ ಚಾಲಕರ ಮೇಲೆ ಕೋಪಗೊಳ್ಳಬಾರದು ಎನ್ನುವುದು ಅನಿಸುತ್ತದೆ. ನಾನೇ ಸ್ವತಃ ಡ್ರೈವ್ ಮಾಡಿದೆ ಎಂದು ಬರೆದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಕ್ಯಾಬ್‌ನಲ್ಲಿ ಡ್ರೈವರ್‌ಗೆ ರೆಸ್ಟ್ ಮಾಡಲು ಹೇಳಿ ಪ್ರಯಾಣಿಕನೊಬ್ಬ ಕ್ಯಾಬ್ ಓಡಿಸುತ್ತಿರುವುದನ್ನು ಕಾಣಬಹುದು. ಯುವಕನ ಪಕ್ಕದಲ್ಲಿ ಆತನ ಸಹೋದರ ಕುಳಿತುಕೊಂಡಿದ್ದಾನೆ. ಆಯಾಸಗೊಂಡ ಕ್ಯಾಬ್‌ ಚಾಲಕನು ಕಾರಿನ ಹಿಂದಿನ ಸೀಟ್‌ನಲ್ಲಿ ಮಲಗಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಒಳ್ಳೆತನ ನಾನು ಮೆಚ್ಚಿದೆ ಎಂದಿದ್ದಾರೆ. ಇನ್ನೊಬ್ಬರು, ಸಹಾಯ ಮಾಡುವ ಗುಣ ಎಲ್ಲರನ್ನೂ ಇರಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಮ ಒಳ್ಳೆತನ ಹೀಗೆಯೇ ಇರಲಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
"ನಮ್ಮ ಕುಟುಂಬದ ಧ್ವನಿ ಅಡಗಿಸಲು ಸಾಧ್ಯವಿಲ್ಲ": ಕುಮಾರಸ್ವಾಮಿ