Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚಪಾತಿಯಲ್ಲಿ ಜಿರಳೆಮರಿ; ವಂದೇ ಭಾರತ್​​​ನಿಂದ ಪ್ರಯಾಣಿಕರೊಬ್ಬರಿಗೆ ‘ಉಚಿತ ಕೊಡುಗೆ’

IRCTC : ಸೇವೆ ಎಂಬ ಹೆಸರಲ್ಲಿ ಲಾಭ ಮಾಡಿಕೊಳ್ಳಲು ಹೋದರೆ ಹೀಗೇ ಆಗುವುದು. ಐಆರ್​ಸಿಟಿಸಿಯಿಂದಾಗಿ ಪ್ರಯಾಣಿಕರ ಒಟ್ಟಾರೆ ನೆಮ್ಮದಿ ಹಾಳಾಗಿದೆ, ಬದಲಿ ವ್ಯವಸ್ಥೆ ಮಾಡಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Viral: ಚಪಾತಿಯಲ್ಲಿ ಜಿರಳೆಮರಿ; ವಂದೇ ಭಾರತ್​​​ನಿಂದ ಪ್ರಯಾಣಿಕರೊಬ್ಬರಿಗೆ 'ಉಚಿತ ಕೊಡುಗೆ'
ವಂದೇ ಭಾರತ ರೈಲಿನ ಚಪಾತಿಯಲ್ಲಿ ಜಿರಳೆಮರಿ
Follow us
ಶ್ರೀದೇವಿ ಕಳಸದ
|

Updated on:Jul 29, 2023 | 4:28 PM

Vande Bharath Express : ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿನಲ್ಲಿ ಭೋಪಾಲ್​ನಿಂದ ಗ್ವಾಲಿಯರ್​ಗೆ ಪ್ರಯಾಣಿಸುತ್ತಿದ್ದ ಸುಬೋಧ್​ ಪಹಲಾಜನ್​ ಎಂಬ ಪ್ರಯಾಣಿಕರಿಗೆ ಎಸ್​ಆರ್​ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ ಟ್ವೀಟ್​ ಮೂಲಕ ಐಆರ್​ಸಿಟಿಸಿಯ ಕಳಪೆ ಸೇವೆಯ (IRCTC) ಕುರಿತು ರೈಲ್ವೇ ಇಲಾಖೆಯ ಗಮನ ಸೆಳೆದಿದ್ದಾರೆ. ನೆಟ್ಟಿಗರು ಈ ಟ್ವೀಟಿನಡಿ ತಾವು ಎದುರಿಸಿದ ಅನುಭವಗಳನ್ನೂ ಹಂಚಿಕೊಂಡು ಭಾರತೀಯ ರೈಲ್ವೆ ಇಲಾಖೆಯ ಬಗ್ಗೆ ಕಿಡಿಕಾರಿದ್ಧಾರೆ.

ರೈಲ್ವೆ ಸೌಲಭ್ಯ, ಸ್ವಚ್ಛತೆ ಮತ್ತು ಸೇವೆಗಳ ಬಗ್ಗೆ ತಕರಾರು ಹೊಸದೇನಲ್ಲ. ಅದರಲ್ಲೂ ಸಾಮಾಜಿಕ ಜಾಲತಾಣಗಳ ಮೂಲಕವಂತೂ ಆಗಾಗ ಇವು ಚರ್ಚೆಯಾಗುತ್ತಲೇ ಇರುತ್ತವೆ. ವಂದೇಭಾರತ ರೈಲುಗಳ ಅವ್ಯವಸ್ಥೆಯ ಬಗೆಗೂ ಮೇಲಿಂದ ಮೇಲೆ ತಕರಾರುಗಳು ಸಾಕ್ಷಿಸಮೇತ ಕೇಳಿಬರುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಜು. 24ರಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ : Viral Video: ದೆಹಲಿ ಮೆಟ್ರೋ; ಈ ಎರಡೂ ರೀಲ್​​ಗಳ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದೆ

ಈ ಪೋಸ್ಟ್​ ಅನ್ನು ಸುಮಾರು 17,300 ಜನರು ನೋಡಿದ್ದಾರೆ. 90 ಜನರು ರೀಟ್ವೀಟ್ ಮಾಡಿದ್ದಾರೆ. ವಂದೇಭಾರತ ರೈಲಿನಲ್ಲಿ ಯಾವ ವ್ಯವಸ್ಥೆ ಸರಿ ಇದೆ ಹೇಳಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ರೈಲಿನಲ್ಲಿರುವ ಆಹಾರಸೇವೆಗಳ ಪರವಾನಿಗೆಯನ್ನು ದಯವಿಟ್ಟು ರದ್ದುಪಡಿಸಿ. ಇಲ್ಲಿರುವವರೆಲ್ಲರೂ ಊಟವನ್ನೇನೋ ಮಾಡಿಯಾಗಿದೆ. ಈಗ ಹೆಚ್ಚೂ ಕಡಿಮೆಯಾದರೆ ಏನು ಮಾಡುವುದು ಎಂದು ಒಬ್ಬರು ಕೇಳಿದ್ದಾರೆ.

ಇದನ್ನೂ ಓದಿ : Viral Video: ವೈಪರ್ ವಿಥ್ ಸ್ಟಿಕರ್​; ಈ ಕಾರ್​ನಿಂದ ಅದೆಷ್ಟು ಅಪಘಾತಗಳಾಗಿವೆಯೋ

ಸೇವೆ ಎಂಬ ಪದವನ್ನು ‘ಲಾಭದಾಯಕತೆ’ಯು ಆವರಿಸಿದಾಗ ಇಂಥವೆಲ್ಲ ಸಂಭವಿಸುತ್ತವೆ. ಇದು ಪ್ರಪಂಚದಾದ್ಯಂತ ಆವರಿಸಿದೆ. ವಾಸ್ತವದ ಸಮಸ್ಯೆಗಳನ್ನು ಎದುರಿಸಲು ನೀವು ಸಿದ್ಧರಾಗಿ ಎಂದು ಮತ್ತೊಬ್ಬರು ಹೇಳಿದ್ದಾರೆ. ರಾಜಧಾನಿ ರೈಲಿನ ಎಸಿ ಕೋಚ್​ನಲ್ಲಿ ಊಟದ ವಿಷಯವಾಗಿ ಮಾತನಾಡುವುದೇ ಬೇಡ ಎಂದಿದ್ದಾರೆ ಮಗದೊಬ್ಬರು.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:26 pm, Sat, 29 July 23

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ