AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ತಾರಾ ಏರ್​ಲೈನ್ಸ್​ನಲ್ಲಿ ಪ್ರಯಾಣಿಕರಿಗೆ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ

Passenger finds cockroach in meals : ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ, ವಿಮಾನ ಸಂಸ್ಥೆಯು ವಿತರಿಸಿದ ಊಟದಲ್ಲಿ ಜಿರಳೆ ಸಿಕ್ಕಿದೆ. ಈ ವಿಷಯವನ್ನು ಟ್ವೀಟ್​ ಮಾಡಿದಾಗ ಸಂಸ್ಥೆಯು ಪ್ರತಿಕ್ರಿಯಿಸಿದೆ.

ವಿಸ್ತಾರಾ ಏರ್​ಲೈನ್ಸ್​ನಲ್ಲಿ ಪ್ರಯಾಣಿಕರಿಗೆ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ
Passenger finds cockroach in Vistara flight meal
TV9 Web
| Edited By: |

Updated on:Oct 15, 2022 | 2:49 PM

Share

Viral : ಮೊನ್ನೆಮೊನ್ನೆಯಷ್ಟೇ ಡೋಮಿನೋ ಪಿಝಾನಲ್ಲಿ ಗಾಜಿನ ಚೂರು ಪತ್ತೆಯಾಗಿದ್ದನ್ನು ಓದಿದ್ದೀರಿ. ಹಾಗೆಯೇ ರೈಲಿನಲ್ಲಿ ಐಆರ್​ಸಿಟಿಸಿ ಕೊಟ್ಟ ಸಮೋಸಾದಲ್ಲಿ ಹಳದಿ ಪ್ಲಾಸ್ಟಿಕ್​ ಚೂರು ಸಿಕ್ಕಿದ್ದನ್ನು ಓದಿದ್ದೀರಿ. ಈಗ ವಿಸ್ತಾರಾ ವಿಮಾನದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಜಿರಳೆ ಸಿಕ್ಕಿದೆ. ಹೇಗನ್ನಿಸಿರಬೇಡ ಪ್ರಯಾಣಿಕರಿಗೆ? ಅದೂ ಅರ್ಧ ಊಟ ಒಳಗಿಳಿದ ನಂತರ! ಕುಪಿತಗೊಂಡ ಪ್ರಯಾಣಿಕರು ಫೋಟೋ ತೆಗೆದು ಟ್ವಿಟರ್​ಗೆ ಪೋಸ್ಟ್​ ಮಾಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Small cockroach in air Vistara meal pic.twitter.com/ebrIyszhvV

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನಿಕುಲ್ ಸೋಲಂಕಿ ಎಂಬ ಪ್ರಯಾಣಿಕರು ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪ್ಯಾಕ್ ಮಾಡಿದ ಊಟವನ್ನು ವಿಮಾನ ಸಿಬ್ಬಂದಿಯು ವಿತರಿಸಿದೆ. ಊಟ ಶುರು ಮಾಡಿ ಮೊಸರನ್ನ ತಿನ್ನುವ ಹೊತ್ತಿಗೆ ಜಿರಳೆ ಕಂಡುಬಿಟ್ಟಿದೆ. ಹೋಟೆಲ್​, ಪಾರ್ಸೆಲ್​, ರೈಲಿನಲ್ಲಿ ಕೊಡುವ ತಿಂಡಿತಿನಿಸುಗಳಲ್ಲಿ ಅಚಾತುರ್ಯ ಘಟಿಸುವುದು ಸಾಮಾನ್ಯ. ಆದರೆ ವಿಮಾನದಲ್ಲಿ ಪ್ರಯಾಣಿಸುವವರು ಅಷ್ಟೊಂದು ಹಣ ತೆತ್ತು ಇಂಥ ಸಮಸ್ಯೆಯನ್ನು ಎದುರಿಸುತ್ತಾರೆಂದರೆ? ನಿಕುಲ್​ ಅವರಿಗೆ ಅಸಹ್ಯವೆನ್ನಿಸಿ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ಪೋಸ್ಟ್ ಮಾಡಿದ್ದಾರೆ.  

ಈ ಟ್ವೀಟ್​ನಲ್ಲಿ ವಿಮಾನ ಸಂಸ್ಥೆಯ ಹೆಸರನ್ನು ಟ್ಯಾಗ್ ಮಾಡಿದಾಗ, ಸಂಸ್ಥೆಯು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣವೇ ಪ್ರತಿಕ್ರಿಯೆ ನೀಡಿದೆ. ‘ಹಲೋ ನಿಕುಲ್, ನಮ್ಮ ವಿಮಾನದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಲಕ್ಷ್ಯದಲ್ಲಿಟ್ಟುಕೊಂಡು ಪೂರೈಸಲಾಗುತ್ತದೆ. ದಯವಿಟ್ಟು ನಿಮ್ಮ ಟಿಕೆಟ್​ನ ವಿವರವನ್ನು ಮೆಸೇಜ್ ಮಾಡಿ. ಶೀಘ್ರದಲ್ಲಿಯೇ ಈ ವಿಷಯವಾಗಿ ಪರಿಶೀಲಿಸಿ, ಪರಿಹಾರದ ವ್ಯವಸ್ಥೆ ಮಾಡಲಾಗುವುದು’ ಎಂದಿದೆ.

ಇಂಥ ಪ್ರಕರಣಗಳಿಗೆ ಕೊನೆಯೇ ಇಲ್ಲವೆ? ಪ್ರಯಾಣಿಕರು ಹೀಗೆ ಸಾಮಾಜಿಕ ಜಾಲತಾಣದಲ್ಲಿ ದನಿ ಎತ್ತುವುದು, ಸಂಬಂಧಿಸಿದ ಸಂಸ್ಥೆಗಳು ಹೀಗೊಂದು ಪ್ರತಿಕ್ರಿಯೆ ನೀಡುತ್ತಲೇ ಇರುವುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Sat, 15 October 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ