AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ತಾರಾ ಏರ್​ಲೈನ್ಸ್​ನಲ್ಲಿ ಪ್ರಯಾಣಿಕರಿಗೆ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ

Passenger finds cockroach in meals : ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ, ವಿಮಾನ ಸಂಸ್ಥೆಯು ವಿತರಿಸಿದ ಊಟದಲ್ಲಿ ಜಿರಳೆ ಸಿಕ್ಕಿದೆ. ಈ ವಿಷಯವನ್ನು ಟ್ವೀಟ್​ ಮಾಡಿದಾಗ ಸಂಸ್ಥೆಯು ಪ್ರತಿಕ್ರಿಯಿಸಿದೆ.

ವಿಸ್ತಾರಾ ಏರ್​ಲೈನ್ಸ್​ನಲ್ಲಿ ಪ್ರಯಾಣಿಕರಿಗೆ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ
Passenger finds cockroach in Vistara flight meal
TV9 Web
| Edited By: |

Updated on:Oct 15, 2022 | 2:49 PM

Share

Viral : ಮೊನ್ನೆಮೊನ್ನೆಯಷ್ಟೇ ಡೋಮಿನೋ ಪಿಝಾನಲ್ಲಿ ಗಾಜಿನ ಚೂರು ಪತ್ತೆಯಾಗಿದ್ದನ್ನು ಓದಿದ್ದೀರಿ. ಹಾಗೆಯೇ ರೈಲಿನಲ್ಲಿ ಐಆರ್​ಸಿಟಿಸಿ ಕೊಟ್ಟ ಸಮೋಸಾದಲ್ಲಿ ಹಳದಿ ಪ್ಲಾಸ್ಟಿಕ್​ ಚೂರು ಸಿಕ್ಕಿದ್ದನ್ನು ಓದಿದ್ದೀರಿ. ಈಗ ವಿಸ್ತಾರಾ ವಿಮಾನದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಜಿರಳೆ ಸಿಕ್ಕಿದೆ. ಹೇಗನ್ನಿಸಿರಬೇಡ ಪ್ರಯಾಣಿಕರಿಗೆ? ಅದೂ ಅರ್ಧ ಊಟ ಒಳಗಿಳಿದ ನಂತರ! ಕುಪಿತಗೊಂಡ ಪ್ರಯಾಣಿಕರು ಫೋಟೋ ತೆಗೆದು ಟ್ವಿಟರ್​ಗೆ ಪೋಸ್ಟ್​ ಮಾಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Small cockroach in air Vistara meal pic.twitter.com/ebrIyszhvV

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನಿಕುಲ್ ಸೋಲಂಕಿ ಎಂಬ ಪ್ರಯಾಣಿಕರು ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪ್ಯಾಕ್ ಮಾಡಿದ ಊಟವನ್ನು ವಿಮಾನ ಸಿಬ್ಬಂದಿಯು ವಿತರಿಸಿದೆ. ಊಟ ಶುರು ಮಾಡಿ ಮೊಸರನ್ನ ತಿನ್ನುವ ಹೊತ್ತಿಗೆ ಜಿರಳೆ ಕಂಡುಬಿಟ್ಟಿದೆ. ಹೋಟೆಲ್​, ಪಾರ್ಸೆಲ್​, ರೈಲಿನಲ್ಲಿ ಕೊಡುವ ತಿಂಡಿತಿನಿಸುಗಳಲ್ಲಿ ಅಚಾತುರ್ಯ ಘಟಿಸುವುದು ಸಾಮಾನ್ಯ. ಆದರೆ ವಿಮಾನದಲ್ಲಿ ಪ್ರಯಾಣಿಸುವವರು ಅಷ್ಟೊಂದು ಹಣ ತೆತ್ತು ಇಂಥ ಸಮಸ್ಯೆಯನ್ನು ಎದುರಿಸುತ್ತಾರೆಂದರೆ? ನಿಕುಲ್​ ಅವರಿಗೆ ಅಸಹ್ಯವೆನ್ನಿಸಿ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ಪೋಸ್ಟ್ ಮಾಡಿದ್ದಾರೆ.  

ಈ ಟ್ವೀಟ್​ನಲ್ಲಿ ವಿಮಾನ ಸಂಸ್ಥೆಯ ಹೆಸರನ್ನು ಟ್ಯಾಗ್ ಮಾಡಿದಾಗ, ಸಂಸ್ಥೆಯು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣವೇ ಪ್ರತಿಕ್ರಿಯೆ ನೀಡಿದೆ. ‘ಹಲೋ ನಿಕುಲ್, ನಮ್ಮ ವಿಮಾನದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಲಕ್ಷ್ಯದಲ್ಲಿಟ್ಟುಕೊಂಡು ಪೂರೈಸಲಾಗುತ್ತದೆ. ದಯವಿಟ್ಟು ನಿಮ್ಮ ಟಿಕೆಟ್​ನ ವಿವರವನ್ನು ಮೆಸೇಜ್ ಮಾಡಿ. ಶೀಘ್ರದಲ್ಲಿಯೇ ಈ ವಿಷಯವಾಗಿ ಪರಿಶೀಲಿಸಿ, ಪರಿಹಾರದ ವ್ಯವಸ್ಥೆ ಮಾಡಲಾಗುವುದು’ ಎಂದಿದೆ.

ಇಂಥ ಪ್ರಕರಣಗಳಿಗೆ ಕೊನೆಯೇ ಇಲ್ಲವೆ? ಪ್ರಯಾಣಿಕರು ಹೀಗೆ ಸಾಮಾಜಿಕ ಜಾಲತಾಣದಲ್ಲಿ ದನಿ ಎತ್ತುವುದು, ಸಂಬಂಧಿಸಿದ ಸಂಸ್ಥೆಗಳು ಹೀಗೊಂದು ಪ್ರತಿಕ್ರಿಯೆ ನೀಡುತ್ತಲೇ ಇರುವುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Sat, 15 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್