AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿ ತಿರುಪತಿ ಎಕ್ಸ್​ಪ್ರೆಸ್​ ರೈಲಿನಲ್ಲಿ ‘ಜಿರಳೆದೇವೋಭವ’

Indian Railways : ರಾತ್ರಿ ಈ ರೈಲಿನಲ್ಲಿ ಮಲಗಿದ್ದಾಗ ಮೈಮೇಲೆಲ್ಲ ಜಿರಳೆಗಳು ಹರಿದಾಡಿವೆ ಎಂದು ಪ್ರಯಾಣಿಕರು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಎಲ್ಲಿದೆ ಶುಚಿತ್ವದ ಭರವಸೆ ಎಂದು ಪ್ರಶ್ನಿಸಿದ್ಧಾರೆ. ನೆಟ್ಟಿಗರನೇಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ದೆಹಲಿ ತಿರುಪತಿ ಎಕ್ಸ್​ಪ್ರೆಸ್​ ರೈಲಿನಲ್ಲಿ 'ಜಿರಳೆದೇವೋಭವ'
ದೆಹಲಿ ತಿರುಪತಿ ಎಕ್ಸ್​​ಪ್ರೆಸ್​ನಲ್ಲಿ ಪತ್ತೆಯಾದ ಜಿರಳೆಗಳು.
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Aug 08, 2023 | 3:46 PM

Share

Cockroach : ಕೆಲ ದಿನಗಳ ಹಿಂದೆಯಷ್ಟೇ ವಂದೇಭಾರತ ಎಕ್ಸ್​ಪ್ರೆಸ್​ನಲ್ಲಿ (Vande Bharat Express) ಐಆರ್​ಸಿಟಿಸಿಯ ಚಪಾತಿಯಲ್ಲಿ ಜಿರಳೆಯೊಂದು ಪತ್ತೆಯಾಗಿದ್ದನ್ನು ಓದಿದ್ದಿರಿ. ಇದೀಗ ದೆಹಲಿ ತಿರುಪತಿ ಎಕ್ಸ್​​ಪ್ರೆಸ್​ (Delhi Tirupati Express) ರೈಲಿನಲ್ಲಿಯೂ ಜಿರಳೆ ಪತ್ತೆಯಾಗಿದ್ದು ಪ್ರಯಾಣಿಕರೊಬ್ಬರು, ‘ದೆಹಲಿ ತಿರುಪತಿ ಎಕ್ಸ್​ಪ್ರೆಸ್ ರೈಲಿನ​ (12708 A/C) ಕಂಪಾರ್ಟ್‌ಮೆಂಟ್​ನಲ್ಲಿ ಮಲಗಿದ್ದಾಗ ನಮ್ಮ ಮೈಮೇಲೆಲ್ಲ ಜಿರಳೆಗಳು ಹರಿದಾಡುತ್ತಿದ್ದವು. ಶುಚಿತ್ವದ ಭರವಸೆ ಎಲ್ಲಿದೆ?’ ಎಂದು ಫೋಟೋ ಸಮೇತ ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಮತ್ತೀಗ ಭಾರತೀಯ ರೈಲ್ವೆ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಆತಿಫ್ ಅಲಿ ಎಂಬ ಪ್ರಯಾಣಿಕರು ದೆಹಲಿ-ತಿರುಪತಿ ಎಕ್ಸ್‌ಪ್ರೆಸ್‌ನ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದರು. ಹಾಸಿಗೆ ಮತ್ತು ಮೈಮನೇಲೆಲ್ಲ ಜಿರಳೆಮರಿಗಳು ಹರಿದಾಡಿದ್ದರಿಂದ ಕೋಪಗೊಂಡ ಪ್ರಯಾಣಿಕರು ದಿಂಬಿನ ಮೇಲೆ ಮತ್ತು ರೈಲಿನ ಗೋಡೆಯ ಮೇಲೆ ಜಿರಳೆಗಳು ಹರಿದಾಡುತ್ತಿರುವ ಫೋಟೋ ತೆಗೆದು ಟ್ವೀಟ್ ಮಾಡಿದ್ದಾರೆ. ವಂದೇಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಪಾತಿಯಲ್ಲಿ ಸಿಕ್ಕ ಜಿರಳೆಯ ಫೋಟೋ ಈ ಕೆಳಗಿದೆ.

ಭಾರತೀಯ ರೈಲ್ವೇಯ ಅಧಿಕೃತ ಖಾತೆಯಾದ ರೈಲ್ವೇ ಸೇವಾ, ದೆಹಲಿ-ತಿರುಪತಿ ರೈಲಿನ ಪ್ರಯಾಣಿಕರ ಮತ್ತು ವಂದೇಭಾರತ ಎಕ್ಸ್​ಪ್ರೆಸ್​ ರೈಲಿನ ಪ್ರಯಾಣಿಕರ ಟ್ವೀಟ್​ಗೆ ಪ್ರತಿಕ್ರಿಯಿಸಿದೆ. ಈ ವಿಷಯವನ್ನು ಉನ್ನತಾಧಿಕಾರಿಗಳ ಗಮನಕ್ಕೆ ತರಲಾಗಿದೆ. ದಯವಿಟ್ಟು ಪ್ರಯಾಣದ ವಿವರಗಳನ್ನು (PNR/UTS No.) ಮತ್ತು ಮೊಬೈಲ್ ನಂಬರ್​ ಅನ್ನು ಮೆಸೇಜ್ ಮಾಡಿ ಎಂದು ವಿನಂತಿಸಿಕೊಂಡಿದೆ. ಇಲ್ಲವೆ http://railmadad.indianrailways.gov.in ನಲ್ಲಿ ಕೂಡ ನೇರವಾಗಿ ದೂರು ಸಲ್ಲಿಸಬಹುದು. ಇನ್ನು ತುರ್ತು ಪರಿಹಾರಕ್ಕಾಗಿ 139 ಗೆ ಕರೆ ಮಾಡಬಹುದು ಎಂದು ತಿಳಿಸಿದೆ.

ಇದನ್ನೂ ಓದಿ : Viral Video: ವೃದ್ಧರೊಬ್ಬರ ಕಾಲ್ಪನಿಕ ಕ್ರಿಕೆಟ್​; ನೆಟ್ಟಿಗರಲ್ಲಿ ಚಿಮ್ಮಿದ ಉತ್ಸಾಹ

ಇಂಥ ಮೆಸೇಜುಗಳಿಂದ ಕಣ್ಣೊರೆಸುವ ತಂತ್ರವನ್ನು ರೈಲ್ವೇ ಇಲಾಖೆಯು ಕೈಬಿಡಬೇಕು. ಒಟ್ಟಾರೆಯಾಗಿ ಶುಚಿತ್ವದ ಕಡೆ ಗಮನ ಕೊಟ್ಟು ಪ್ರಯಾಣಿಕರ ಹಿತ ಮತ್ತು ಸುರಕ್ಷತೆಗಾಗಿ ಶ್ರಮಿಸಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 3:43 pm, Tue, 8 August 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್