AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಏರ್ ಇಂಡಿಯಾದ ನಿರ್ಲಕ್ಷ್ಯದಿಂದ ವಿಮಾನ ನಿಲ್ದಾಣದಲ್ಲಿ ಬೆಕ್ಕಿನ ಮರಿಯನ್ನು ಕಳೆದುಕೊಂಡ ಪ್ರಯಾಣಿಕ

ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ ನಿರ್ಲಕ್ಷ್ಯದ ಕಾರಣದಿಂದ ಪ್ರಯಾಣಿಕರೊಬ್ಬರು ತಮ್ಮ ಮುದ್ದಿನ ಬೆಕ್ಕಿನ ಮರಿಯನ್ನು ಕಳೆದುಕೊಂಡಿದ್ದಾರೆ. ಮತ್ತು ಅಸಮರ್ಪಕ ಕಾರ್ಯನಿರ್ವಹಣೆಗಾಗಿ ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Viral Post: ಏರ್ ಇಂಡಿಯಾದ ನಿರ್ಲಕ್ಷ್ಯದಿಂದ ವಿಮಾನ ನಿಲ್ದಾಣದಲ್ಲಿ ಬೆಕ್ಕಿನ ಮರಿಯನ್ನು ಕಳೆದುಕೊಂಡ ಪ್ರಯಾಣಿಕ
ವೈರಲ್​​ ಫೋಸ್ಟ್
ಮಾಲಾಶ್ರೀ ಅಂಚನ್​
| Edited By: |

Updated on:Apr 28, 2023 | 6:31 PM

Share

ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವುದೇ ಅತೀ ದುಃಖದ ವಿಚಾರ. ಏಕೆಂದರೆ ಆ ಸಾಕು ಪ್ರಾಣಿಗಳ ಯಜಮಾನ ಅವುಗಳನ್ನು ತನ್ನ ಮಕ್ಕಳಂತೆ ಸಾಕಿರುತ್ತಾರೆ. ಏರ್ ಇಂಡಿಯಾದ ಸಿಬ್ಬಂದಿಗಳ ಬೇಜವಾಬ್ದಾರಿಯ ಕಾರಣದಿಂದಾಗಿ ಪ್ರಯಾಣಿಕರೊಬ್ಬರು ತಮ್ಮ ಬೆಕ್ಕಿನ ಮರಿಯನ್ನು ಕಳೆದುಕೊಂಡಿದ್ದಾರೆ. ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಬ್ಬಂದಿಗಳು ತಮ್ಮ ಕಾರ್ಯದಲ್ಲಿ ನಿರ್ಲಕ್ಷ್ಯವನ್ನು ತೋರಿದ್ದಾರೆ. ಇದರಿಂದಲೇ ನನ್ನ ಬೆಕ್ಕಿನ ಮರಿ ಕಾಣೆಯಾಗಿದ್ದು ಎಂದು ಅವರು ಆರೋಪಿಸಿದ್ದಾರೆ. ಮತ್ತು ಏರ್ ಇಂಡಿಯಾದ ಸಿಬ್ಬಂದಿಗಳ ನಿರ್ಲಕ್ಷ್ಯವನ್ನು ಟ್ವಿಟರ್​​​ನಲ್ಲಿ ಟ್ವೀಟ್ ಮಾಡುವ ಮೂಲಕ ಖಂಡಿಸಲಾಗಿದೆ.

ಸೋನಿ. ಎಸ್ ಸೋಬರ್ ಏರ್ ಇಂಡಿಯಾದ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ಮಹಿಳೆಯೊಬ್ಬರು ಟ್ವಿಟರ್​​ನಲ್ಲಿ ಗುಡುಗಿದ್ದು, ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ನನ್ನ ಸ್ನೇಹಿತನ ಬೆಕ್ಕಿನ ಮರಿ ಕಾಣೆಯಾಗಿದೆ. ಇದು ಹೃದಯ ವಿದ್ರಾವಕ ದುರಂತ. ಸಿಬ್ಬಂದಿಗಳ ನಿರ್ಲಕ್ಷ್ಯವು ಅಕ್ಷಮ್ಯ ಅಪರಾಧವಾಗಿದೆ. ಈ ಘಟನೆಗೆ ನೀವೇ ಜವಾಬ್ದಾರರು, ತಕ್ಷಣವೇ ನೀವು ಇದಕ್ಕೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಟ್ವಿಟರ್​​ನಲ್ಲಿ ಸೋನಿ ಎಸ್ ಸೋಬರ್ ಅವರು ನೀಡಿರುವ ದೂರಿನಂತೆ ಅವರ ಸ್ನೇಹಿತ ಜಂಗ್ನೀಚಾಂಗ್ ಕರೋಂಗ್ ತಾನು ಬೆಕ್ಕಿನ ಮರಿಗಳೊಂದಿಗೆ ದೆಹಲಿಯಿಂದ ಇಂಫಾಲ್​​​ಗೆ ವಿಮಾನಯಾನದ ಮೂಲಕ ಪ್ರಯಾಣಿಸುವ ಸಲುವಾಗಿ ಏರ್ ಪೋರ್ಟ್​​ಗೆ ಬಂದಿದ್ದರು. ನಂತರ ಚೆಕ್-ಇನ್ ಕೌಂಟರ್​​ನಲ್ಲಿ ಬೆಕ್ಕಿನ ಮರಿಗಳು ತನ್ನ ಜೊತೆಗೆ ಪ್ರಯಾಣಿಸಲು ಸಾಧ್ಯವಾಗುವಂತೆ ತನ್ನ ಟಿಕೆಟ್​​ನ್ನು ಬಿಸ್ನೆಸ್ ಕ್ಲಾಸ್ ಫೈಟ್​​ಗೆ ಅಪ್ ಗ್ರೇಡ್ ಮಾಡುವಂತೆ ಕರೋಂಗ್ ಕೇಳಿಕೊಂಡಿದ್ದಾರೆ. ಆದರೆ ಈ ಆಯ್ಕೆ ಲಭ್ಯವಿರಲಿಲ್ಲ. ನಂತರ ಕರೋಂಗ್ ಬೆಕ್ಕಿನ ಮರಿಗಳನ್ನು ಕಾರ್ಗೋದ ಮೂಲಕ ಸಾಗಿಸಲು ಒಪ್ಪಿಕೊಂಡಿದ್ದ ಕಾರಣ ಬೆಕ್ಕಿನ ಮರಿಗಳನ್ನು ಏರ್ ಇಂಡಿಯಾ ಸಿಬ್ಬಂದಿಗೆ ನೀಡುತ್ತಾರೆ.

ಇದನ್ನೂ ಓದಿ:Viral Video: ನೀವು ಎಂದಾದರೂ ಆಮೆ – ನಾಯಿ ಫುಟ್ಬಾಲ್ ಆಡುವುದನ್ನು ನೋಡಿದ್ದೀರಾ?

ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 3ರಲ್ಲಿ ಬೋರ್ಡಿಂಗ್ ಮಾಡುವ ಮೊದಲು, ಫೀನಿಕ್ಸ್ ಎಂಬ ಹೆಸರಿನ ಬೆಕ್ಕಿನ ಮರಿಯನ್ನು ಹಾಕಿದ ಬಾಕ್ಸ್​​ನಿಂದ ತಪ್ಪಿಸಿಕೊಂಡಿದೆ ಎಂದು ಸಿಬ್ಬಂದಿ ಬಂದು ಕರೋಂಗ್ ಬಳಿ ಹೇಳುತ್ತಾರೆ. ಇದರಿಂದ ಬೇಸರಗೊಂಡ ಕರೋಂಗ್, ಬೆಕ್ಕಿನ ಮರಿಗಳಿರುವ ಬಾಕ್ಸ್​​ನ ಜಾಗೃತೆಯ ಬಗ್ಗೆ ಸಿಬ್ಬಂದಿಗಳು ಅಸಡ್ಡೆ ತೋರಿದ ಕಾರಣದಿಂದಲೇ ಬೆಕ್ಕು ಬಾಕ್ಸ್​​ನಿಂದ ತಪ್ಪಿಸಿಕೊಂಡಿದೆ ಎಂದು ಹೇಳಿದ್ದಾರೆ. ನನ್ನ ಬೆಕ್ಕಿನ ಮರಿ ಕಾಣೆಯಾಗಿರುವುದಕ್ಕೆ ವಿಮಾನ ನಿಲ್ದಾಣದ ಆನ್ ಗ್ರೌಂಡ್ ಸಿಬ್ಬಂದಿಗಳೇ ನೇರ ಹೊಣೆ. ಮತ್ತು ಆ ಘಟನೆಯ ಸಿಸಿ ಟಿವಿ ಫೂಟೇಜ್ ತೋರಿಸುವಂತೆ ನಾನು ಮಾನವಿ ಮಾಡಿದರೂ, ಅದಕ್ಕೆ ಸಿಬ್ಬಂದಿಗಳು ಸರಿಯಾಗಿ ಉತ್ತರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಟ್ವಿಟರ್ ಪೋಸ್ಟ್ ಕುರಿತು ಪ್ರತಿಕ್ರಿಯಿಸಿದ ಏರ್ ಇಂಡಿಯಾ ಕರೆ ಮಾಡಿ ನನ್ನ ಬಳಿ ಕ್ಷಮೆಯಾಚಿಸಿದೆ. ಆದರೆ ನನಗೆ ಈಗ ಕ್ಷಮೆಯಾಚಿಸುವ ಅಗತ್ಯವಿಲ್ಲ. ನನ್ನ ಬೆಕ್ಕಿನ ಮರಿ ತನ್ನ ಬಳಿ ಬಂದು ಸೇರಿದರೆ ಸಾಕು ಎಂದು ಜಂಗ್ನೀಚಾಂಗ್ ಕರೋಂಗ್ ಹೇಳಿದ್ದಾರೆ.

ಈ ಟ್ವೀಟ್​​​ಗೆ ಹಲವಾರು ಕಮೆಂಟ್​​ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ಇದು ತುಂಬಾ ಬೇಸರದ ಸಂಗತಿ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ಏರ್ ಇಂಡಿಯಾವನ್ನು ಟ್ಯಾಗ್ ಮಾಡಿ ಅವರಿಗೆ ಬೆಕ್ಕಿನ ಮರಿಯನ್ನು ಹುಡುಕಿ ಕೊಡುವ ಮೂಲಕ ನಿಮ್ಮ ತಪ್ಪನ್ನು ಸರಿ ಪಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:31 pm, Fri, 28 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್