AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಳ್ಳು ನೂಕು ಐಸಾ; ರೈಲನ್ನೇ ತಳ್ಳಿ ಬೆಂಕಿ ಹೊತ್ತಿದ್ದ ಕಂಪಾರ್ಟ್​ಮೆಂಟ್ ಬೇರ್ಪಡಿಸಿದ ಪ್ರಯಾಣಿಕರು

ಎಂಜಿನ್​ ಬೇರ್ಪಟ್ಟ ಕಾರಣ ರೈಲು ಮುಂದೆ ಚಲಿಸಲು ಸಾಧ್ಯವಿಲ್ಲ. ಬೆಂಕಿ ತಗುಲಿದ ಕೋಚ್​ಗಳನ್ನು ಕೂಡಲೇ ಬೇರ್ಪಡಿಸದೆ ಇದ್ದರೆ, ಅದು ಇನ್ನಷ್ಟು ಬೋಗಿಗಳಿಗೆ ವ್ಯಾಪಿಸುವ ಸಾಧ್ಯತೆ ಇರುತ್ತದೆ.

Video: ತಳ್ಳು ನೂಕು ಐಸಾ; ರೈಲನ್ನೇ ತಳ್ಳಿ ಬೆಂಕಿ ಹೊತ್ತಿದ್ದ ಕಂಪಾರ್ಟ್​ಮೆಂಟ್ ಬೇರ್ಪಡಿಸಿದ ಪ್ರಯಾಣಿಕರು
ಪ್ರಯಾಣಿಕರು ರೈಲನ್ನು ತಳ್ಳುತ್ತಿರುವ ದೃಶ್ಯ
TV9 Web
| Edited By: |

Updated on: Mar 05, 2022 | 1:47 PM

Share

ಬಸ್​, ಲಾರಿ ಸೇರಿ ಇನ್ನಿತರ ವಾಹನಗಳು ಸ್ಟಾರ್ಟ್​ ಆಗದೆ ಇದ್ದಾಗ ಅದನ್ನು ಒಂದಷ್ಟು ಮಂದಿ ಸೇರಿ ತಳ್ಳುವುದು ಸರ್ವೇ ಸಾಮಾನ್ಯ. ಈ ದೃಶ್ಯವನ್ನು ನಾವು ಆಗಾಗ ನೋಡುತ್ತಿರುತ್ತೇವೆ. ಆದರೆ ಉತ್ತರಪ್ರದೇಶದ ಮೀರತ್​ ಜಿಲ್ಲೆಯ ದೌರಾಲಾ ರೈಲ್ವೆ ಸ್ಟೇಶನ್​​ನಲ್ಲಿ ಪ್ರಯಾಣಿಕರು ರೈಲನ್ನು ತಳ್ಳಬೇಕಾಗಿ ಬಂತು. ಅನೇಕರು ಸೇರಿ ಟ್ರೇನ್​​ ತಳ್ಳುವ ದೃಶ್ಯ ಈಗ ಸಿಕ್ಕಾಪಟೆ ವೈರಲ್​ ಆಗಿದೆ. ದೌರಾಲಾ ರೈಲ್ವೆ ಸ್ಟೇಶನ್​​ನಲ್ಲಿ ನಿಂತಿದ್ದ ಸಹರಾನ್​ಪುರ-ದೆಹಲಿ ಪ್ರಯಾಣಿಕರ ರೈಲಿನ ಎಂಜಿನ್​ ಮತ್ತು ಎರಡು ಕೋಚ್​ಗಳಿಗೆ ಬೆಂಕಿ ತಗುಲಿತ್ತು. ರೈಲು ನಿಂತಿದ್ದ ಕಾರಣ ಪ್ರಯಾಣಿಕರು ಕೋಚ್​ಗಳಿಂದ ಇಳಿದು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಯಿತು.

ಹೀಗೆ ಬೆಂಕಿ ತಗುಲಿದ ಎಂಜಿನ್​ ಮತ್ತು ಎರಡು ಕಂಪಾರ್ಟ್​​ಮೆಂಟ್​ಗಳನ್ನು ರೈಲಿನ ಉಳಿದ ಕಂಪಾರ್ಟ್​​ಮೆಂಟ್​​ನಿಂದ ಬೇರ್ಪಡಿಸಿ ದೂರ ಸರಿಸಲು ಹೀಗೆ ಪ್ರಯಾಣಿಕರಲ್ಲ ಸೇರಿ ತಳ್ಳಿದ್ದಾರೆ. ಎಂಜಿನ್​ ಬೇರ್ಪಟ್ಟ ಕಾರಣ ರೈಲು ಮುಂದೆ ಚಲಿಸಲು ಸಾಧ್ಯವಿಲ್ಲ. ಬೆಂಕಿ ತಗುಲಿದ ಕೋಚ್​ಗಳನ್ನು ಕೂಡಲೇ ಬೇರ್ಪಡಿಸದೆ ಇದ್ದರೆ, ಅದು ಇನ್ನಷ್ಟು ಬೋಗಿಗಳಿಗೆ ವ್ಯಾಪಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ಟೇಶನ್​​ನಲ್ಲಿದ್ದ ಪ್ರಯಾಣಿಕರೆಲ್ಲ ಸೇರಿ, ಉದ್ದನೆಯ ರೈಲನ್ನು ತಳ್ಳಿದ್ದಾರೆ. ಯಾರಿಗೂ ಪ್ರಾಣ ಹಾನಿಯಾಗಲಿಲ್ಲ. ಹಾಗಂತ ಬೆಂಕಿ ತಗುಲಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ.

ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್​ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಫೆ.19ರಂದು ಬೆಂಕಿ ಕಾಣಿಸಿಕೊಂಡು (Fire In Train) ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 9.13ರ ಹೊತ್ತಿಗೆ ಸ್ವತಂತ್ರ ಸೇನಾನಿ ಸೂಪರ್​ಫಾಸ್ಟ್​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿತ್ತು. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿತ್ತು. ಅಲ್ಲಿನ ಸಿಬ್ಬಂದಿ ಬಕೆಟ್​ಗಳ ಮೂಲಕ ನೀರು ಹಾಕಿ ನಂದಿಸಿದ್ದರು.

ಇದನ್ನೂ ಓದಿ: Shane Warne: ಅಗಲಿದ ಕ್ರಿಕೆಟ್ ದಂತಕಥೆಯ ಹೆಸರನ್ನು ಜೀವಂತವಾಗಿರಿಸಲು ಮುಂದಾದ ಕ್ರಿಕೆಟ್ ಆಸ್ಟ್ರೇಲಿಯಾ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು