AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಳ್ಳು ನೂಕು ಐಸಾ; ರೈಲನ್ನೇ ತಳ್ಳಿ ಬೆಂಕಿ ಹೊತ್ತಿದ್ದ ಕಂಪಾರ್ಟ್​ಮೆಂಟ್ ಬೇರ್ಪಡಿಸಿದ ಪ್ರಯಾಣಿಕರು

ಎಂಜಿನ್​ ಬೇರ್ಪಟ್ಟ ಕಾರಣ ರೈಲು ಮುಂದೆ ಚಲಿಸಲು ಸಾಧ್ಯವಿಲ್ಲ. ಬೆಂಕಿ ತಗುಲಿದ ಕೋಚ್​ಗಳನ್ನು ಕೂಡಲೇ ಬೇರ್ಪಡಿಸದೆ ಇದ್ದರೆ, ಅದು ಇನ್ನಷ್ಟು ಬೋಗಿಗಳಿಗೆ ವ್ಯಾಪಿಸುವ ಸಾಧ್ಯತೆ ಇರುತ್ತದೆ.

Video: ತಳ್ಳು ನೂಕು ಐಸಾ; ರೈಲನ್ನೇ ತಳ್ಳಿ ಬೆಂಕಿ ಹೊತ್ತಿದ್ದ ಕಂಪಾರ್ಟ್​ಮೆಂಟ್ ಬೇರ್ಪಡಿಸಿದ ಪ್ರಯಾಣಿಕರು
ಪ್ರಯಾಣಿಕರು ರೈಲನ್ನು ತಳ್ಳುತ್ತಿರುವ ದೃಶ್ಯ
TV9 Web
| Edited By: |

Updated on: Mar 05, 2022 | 1:47 PM

Share

ಬಸ್​, ಲಾರಿ ಸೇರಿ ಇನ್ನಿತರ ವಾಹನಗಳು ಸ್ಟಾರ್ಟ್​ ಆಗದೆ ಇದ್ದಾಗ ಅದನ್ನು ಒಂದಷ್ಟು ಮಂದಿ ಸೇರಿ ತಳ್ಳುವುದು ಸರ್ವೇ ಸಾಮಾನ್ಯ. ಈ ದೃಶ್ಯವನ್ನು ನಾವು ಆಗಾಗ ನೋಡುತ್ತಿರುತ್ತೇವೆ. ಆದರೆ ಉತ್ತರಪ್ರದೇಶದ ಮೀರತ್​ ಜಿಲ್ಲೆಯ ದೌರಾಲಾ ರೈಲ್ವೆ ಸ್ಟೇಶನ್​​ನಲ್ಲಿ ಪ್ರಯಾಣಿಕರು ರೈಲನ್ನು ತಳ್ಳಬೇಕಾಗಿ ಬಂತು. ಅನೇಕರು ಸೇರಿ ಟ್ರೇನ್​​ ತಳ್ಳುವ ದೃಶ್ಯ ಈಗ ಸಿಕ್ಕಾಪಟೆ ವೈರಲ್​ ಆಗಿದೆ. ದೌರಾಲಾ ರೈಲ್ವೆ ಸ್ಟೇಶನ್​​ನಲ್ಲಿ ನಿಂತಿದ್ದ ಸಹರಾನ್​ಪುರ-ದೆಹಲಿ ಪ್ರಯಾಣಿಕರ ರೈಲಿನ ಎಂಜಿನ್​ ಮತ್ತು ಎರಡು ಕೋಚ್​ಗಳಿಗೆ ಬೆಂಕಿ ತಗುಲಿತ್ತು. ರೈಲು ನಿಂತಿದ್ದ ಕಾರಣ ಪ್ರಯಾಣಿಕರು ಕೋಚ್​ಗಳಿಂದ ಇಳಿದು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಯಿತು.

ಹೀಗೆ ಬೆಂಕಿ ತಗುಲಿದ ಎಂಜಿನ್​ ಮತ್ತು ಎರಡು ಕಂಪಾರ್ಟ್​​ಮೆಂಟ್​ಗಳನ್ನು ರೈಲಿನ ಉಳಿದ ಕಂಪಾರ್ಟ್​​ಮೆಂಟ್​​ನಿಂದ ಬೇರ್ಪಡಿಸಿ ದೂರ ಸರಿಸಲು ಹೀಗೆ ಪ್ರಯಾಣಿಕರಲ್ಲ ಸೇರಿ ತಳ್ಳಿದ್ದಾರೆ. ಎಂಜಿನ್​ ಬೇರ್ಪಟ್ಟ ಕಾರಣ ರೈಲು ಮುಂದೆ ಚಲಿಸಲು ಸಾಧ್ಯವಿಲ್ಲ. ಬೆಂಕಿ ತಗುಲಿದ ಕೋಚ್​ಗಳನ್ನು ಕೂಡಲೇ ಬೇರ್ಪಡಿಸದೆ ಇದ್ದರೆ, ಅದು ಇನ್ನಷ್ಟು ಬೋಗಿಗಳಿಗೆ ವ್ಯಾಪಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ಟೇಶನ್​​ನಲ್ಲಿದ್ದ ಪ್ರಯಾಣಿಕರೆಲ್ಲ ಸೇರಿ, ಉದ್ದನೆಯ ರೈಲನ್ನು ತಳ್ಳಿದ್ದಾರೆ. ಯಾರಿಗೂ ಪ್ರಾಣ ಹಾನಿಯಾಗಲಿಲ್ಲ. ಹಾಗಂತ ಬೆಂಕಿ ತಗುಲಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ.

ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್​ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಫೆ.19ರಂದು ಬೆಂಕಿ ಕಾಣಿಸಿಕೊಂಡು (Fire In Train) ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 9.13ರ ಹೊತ್ತಿಗೆ ಸ್ವತಂತ್ರ ಸೇನಾನಿ ಸೂಪರ್​ಫಾಸ್ಟ್​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿತ್ತು. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿತ್ತು. ಅಲ್ಲಿನ ಸಿಬ್ಬಂದಿ ಬಕೆಟ್​ಗಳ ಮೂಲಕ ನೀರು ಹಾಕಿ ನಂದಿಸಿದ್ದರು.

ಇದನ್ನೂ ಓದಿ: Shane Warne: ಅಗಲಿದ ಕ್ರಿಕೆಟ್ ದಂತಕಥೆಯ ಹೆಸರನ್ನು ಜೀವಂತವಾಗಿರಿಸಲು ಮುಂದಾದ ಕ್ರಿಕೆಟ್ ಆಸ್ಟ್ರೇಲಿಯಾ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್