AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಟ್ಟು ನಿಂತ ವಿಮಾನವನ್ನು ರನ್​ವೇಯತ್ತ ತಳ್ಳಿದ ಪ್ರಯಾಣಿಕರು; ವಿಡಿಯೋ ನೋಡಿ

ತಾರಾ ಏರ್‌ಲೈನ್ಸ್‌ಗೆ ಸೇರಿದ ವಿಮಾನದ ಈ ವಿಡಿಯೋವನ್ನು ಸಾಮ್ರಾಟ್ ಎಂಬ ವ್ಯಕ್ತಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಬಸ್ ಅಥವಾ ಲಾರಿಯನ್ನು ಈ ರೀತಿಯಾಗಿ ತಳ್ಳುವ ದೃಶ್ಯವನ್ನು ನಾವು ನೋಡಿದ್ದೇವೆ. ಆದರೆ ಈ ರೀತಿ ವಿಮಾನವನ್ನು ಪ್ರಯಾಣಿಕರು ಸೇರಿ ತಳ್ಳಿರುವುದು ಸಾಮಾನ್ಯರಲ್ಲಿ ಆಶ್ಚರ್ಯ ಸೃಷ್ಟಿಸಿದೆ.

Viral Video: ಕೆಟ್ಟು ನಿಂತ ವಿಮಾನವನ್ನು ರನ್​ವೇಯತ್ತ ತಳ್ಳಿದ ಪ್ರಯಾಣಿಕರು; ವಿಡಿಯೋ ನೋಡಿ
ಪ್ರಯಾಣಿಕರು ವಿಮಾನ ತಳ್ಳುತ್ತಿರುವ ದೃಶ್ಯ
TV9 Web
| Edited By: |

Updated on: Dec 03, 2021 | 2:03 PM

Share

ನೇಪಾಳದಲ್ಲಿ ರನ್​ವೇಯಲ್ಲಿ ಡಿಢೀರ್ ಕೆಟ್ಟು ನಿಂತ ವಿಮಾನವನ್ನು ರನ್‌ವೇಯಿಂದ ದೂರ ತಳ್ಳಲು ಪ್ರಯಾಣಿಕರ ಗುಂಪೊಂದು ಹರಸಾಹಸ ಪಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ನೇಪಾಳದ ವಿಮಾನ ನಿಲ್ದಾಣದಲ್ಲಿ (Airport) ನಡೆದಿರುವ ಈ ಘಟನೆ ಜನರಲ್ಲಿ ಅಚ್ಚರಿ ಮೂಡಿಸಿದೆ. ಟೈರ್ ಸ್ಟೋಟಗೊಂಡು ರನ್​ವೇಯಲ್ಲಿ ತಾರಾ ವಿಮಾನ ನಿಂತಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ತಾರಾ ಏರ್‌ಲೈನ್ಸ್‌ಗೆ ಸೇರಿದ ವಿಮಾನದ ಈ ವಿಡಿಯೋವನ್ನು ಸಾಮ್ರಾಟ್ ಎಂಬ ವ್ಯಕ್ತಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಬಸ್ ಅಥವಾ ಲಾರಿಯನ್ನು ಈ ರೀತಿಯಾಗಿ ತಳ್ಳುವ ದೃಶ್ಯವನ್ನು ನಾವು ನೋಡಿದ್ದೇವೆ. ಆದರೆ ಈ ರೀತಿ ವಿಮಾನವನ್ನು ಪ್ರಯಾಣಿಕರು ಸೇರಿ ತಳ್ಳಿರುವುದು ಸಾಮಾನ್ಯರಲ್ಲಿ ಆಶ್ಚರ್ಯ ಸೃಷ್ಟಿಸಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಪ್ರಯಾಣಿಕರು ವಿಮಾನವನ್ನು ನಿಂತ ಸ್ಥಳದಿಂದ ದೂರ ತಳ್ಳಲು ಪ್ರಯತ್ನಿಸುತ್ತಾರೆ. ರನ್‌ವೇಯಲ್ಲಿ ಇಂತಹ ಸನ್ನಿವೇಶವನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುವುದು ಸಾಮಾನ್ಯ.

ವಿಮಾನದ ಹಿಂಭಾಗದ ಟೈರ್ ರನ್‌ವೇಯಲ್ಲಿ ಸಿಡಿದಿದೆ. ಇದು ಪ್ರಯಾಣಿಕರನ್ನು ಕೆಳಗಿಳಿಸಲು ಮತ್ತು ಲ್ಯಾಂಡಿಂಗ್ ಸ್ಟ್ರಿಪ್‌ನಿಂದ ವಿಮಾನವನ್ನು ತಳ್ಳಲು ಪ್ರೇರೇಪಿಸಿದೆ ಎಂದರೆ ತಪ್ಪಾಗಲಾರದು. ನೇಪಾಳದ ಬಾಜುರಾ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

airplane;

ಸದ್ಯ ಈ ವಿಡಿಯೋಗೆ 50 ಸಾವಿರಕ್ಕೂ ಹೆಚ್ಚು ವ್ಯೂವ್ಸ್ ಬಂದಿದ್ದು, ಹೆಚ್ಚಿನವರು ಕಮೆಂಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿದರೆ, ಇತರರು ವಿಮಾನವನ್ನು ಹಾರಿಸುವ ಮೊದಲು ಅಧಿಕಾರಿಗಳು ಹೇಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಕುರಿತು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಹೇರ್ ಡ್ರೈಯರ್ ಬದಲು ಕುಕ್ಕರ್​ ಬಳಸಿದ ಯುವಕ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು!

Viral Video: ಚಲಿಸುತ್ತಿದ್ದ ರೈಲಿನಿಂದ ಜಿಗಿದ ಇಬ್ಬರು ಮಹಿಳೆಯರು; ವೀರೋಚಿತ ರಕ್ಷಣೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್