AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​

ಪಾಟ್ನಾದ ಕೆನರಾ ಬ್ಯಾಂಕ್‌ನಲ್ಲಿ ಒಬ್ಬ ವ್ಯಕ್ತಿ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ವೈರಲ್ ಆಗಿದೆ. ಸಾಲ ಮಂಜೂರಾಗದ ಕಾರಣ ಕೋಪಗೊಂಡ ಆರೋಪಿ, ಮಹಿಳಾ ಮ್ಯಾನೇಜರ್‌ಗೆ ಬೆದರಿಕೆ ಹಾಕಿ ಅವಮಾನಿಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Dec 08, 2024 | 12:45 PM

Share

ಪಾಟ್ನಾ: ಬಿಹಾರದ ಪಾಟ್ನಾದಿಂದ ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆರೋಪಿ ಬ್ಯಾಂಕ್ ಮ್ಯಾನೇಜರ್ ಜೊತೆ ಅನುಚಿತವಾಗಿ ವರ್ತಿಸಿದ್ದು, ಮಹಿಳೆ ತನ್ನ ಕೃತ್ಯವನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದಂತೆ ಆಕೆಯ ಮೊಬೈಲ್ ಫೋನ್ ಅನ್ನು ನೆಲಕ್ಕೆ ಒಡೆದು ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಬೆದರಿಕೆ ಹಾಕಿ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ (ಡಿಸೆಂಬರ್ 6) ಈ ಘಟನೆ ಸಂಭವಿಸಿದ್ದು, ಬ್ಯಾಂಕ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಆರೋಪಿಯನ್ನು ರಾಕೇಶ್ ಕುಮಾರ್ ಸಿಂಗ್ ಎಂದು, ಬ್ಯಾಂಕ್ ಮ್ಯಾನೇಜರ್ ವಂದನಾ ವರ್ಮಾ ಎಂದು ಗುರುತಿಸಲಾಗಿದೆ. ರಾಕೇಶ್ ಕುಮಾರ್ ಅವರು ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದು, ಸಾಲಕ್ಕಾಗಿ ಬ್ಯಾಂಕ್‌ಗೆ ಮನವಿ ಮಾಡಿದರು. ಆದರೆ, ಅವರ CIBIL ಸ್ಕೋರ್‌ಗೆ ಅನುಗುಣವಾಗಿಲ್ಲದ ಕಾರಣ ಅವರ ಸಾಲವನ್ನು ಮಂಜೂರು ಮಾಡಿರಲ್ಲಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಇದರಿಂದ ಕೋಪಗೊಂಡ ರಾಕೇಶ್ ಬ್ಯಾಂಕ್ ಮ್ಯಾನೇಜರ್‌ಗೆ ಬೆದರಿಕೆ ಹಾಕಿದ್ದಾನೆ. ಬ್ಯಾಂಕ್‌ನ ಮಹಿಳಾ ಉದ್ಯೋಗಿಯ ಮೇಲೆ ಕಿಡಿಕಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯತ್ತ ಬೆರಳು ತೋರಿಸಿ ತನ್ನ CIBIL ಸ್ಕೋರ್ ಸರಿಪಡಿಸುವಂತೆ ಬೆದರಿಕೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ ಪೊಲೀಸರ ಪ್ರಕಾರ, ಗಾಂಧಿ ಮೈದಾನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!