AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​

ಪಾಟ್ನಾದ ಕೆನರಾ ಬ್ಯಾಂಕ್‌ನಲ್ಲಿ ಒಬ್ಬ ವ್ಯಕ್ತಿ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ವೈರಲ್ ಆಗಿದೆ. ಸಾಲ ಮಂಜೂರಾಗದ ಕಾರಣ ಕೋಪಗೊಂಡ ಆರೋಪಿ, ಮಹಿಳಾ ಮ್ಯಾನೇಜರ್‌ಗೆ ಬೆದರಿಕೆ ಹಾಕಿ ಅವಮಾನಿಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Dec 08, 2024 | 12:45 PM

Share

ಪಾಟ್ನಾ: ಬಿಹಾರದ ಪಾಟ್ನಾದಿಂದ ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆರೋಪಿ ಬ್ಯಾಂಕ್ ಮ್ಯಾನೇಜರ್ ಜೊತೆ ಅನುಚಿತವಾಗಿ ವರ್ತಿಸಿದ್ದು, ಮಹಿಳೆ ತನ್ನ ಕೃತ್ಯವನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದಂತೆ ಆಕೆಯ ಮೊಬೈಲ್ ಫೋನ್ ಅನ್ನು ನೆಲಕ್ಕೆ ಒಡೆದು ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಬೆದರಿಕೆ ಹಾಕಿ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ (ಡಿಸೆಂಬರ್ 6) ಈ ಘಟನೆ ಸಂಭವಿಸಿದ್ದು, ಬ್ಯಾಂಕ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಆರೋಪಿಯನ್ನು ರಾಕೇಶ್ ಕುಮಾರ್ ಸಿಂಗ್ ಎಂದು, ಬ್ಯಾಂಕ್ ಮ್ಯಾನೇಜರ್ ವಂದನಾ ವರ್ಮಾ ಎಂದು ಗುರುತಿಸಲಾಗಿದೆ. ರಾಕೇಶ್ ಕುಮಾರ್ ಅವರು ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದು, ಸಾಲಕ್ಕಾಗಿ ಬ್ಯಾಂಕ್‌ಗೆ ಮನವಿ ಮಾಡಿದರು. ಆದರೆ, ಅವರ CIBIL ಸ್ಕೋರ್‌ಗೆ ಅನುಗುಣವಾಗಿಲ್ಲದ ಕಾರಣ ಅವರ ಸಾಲವನ್ನು ಮಂಜೂರು ಮಾಡಿರಲ್ಲಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಇದರಿಂದ ಕೋಪಗೊಂಡ ರಾಕೇಶ್ ಬ್ಯಾಂಕ್ ಮ್ಯಾನೇಜರ್‌ಗೆ ಬೆದರಿಕೆ ಹಾಕಿದ್ದಾನೆ. ಬ್ಯಾಂಕ್‌ನ ಮಹಿಳಾ ಉದ್ಯೋಗಿಯ ಮೇಲೆ ಕಿಡಿಕಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯತ್ತ ಬೆರಳು ತೋರಿಸಿ ತನ್ನ CIBIL ಸ್ಕೋರ್ ಸರಿಪಡಿಸುವಂತೆ ಬೆದರಿಕೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ ಪೊಲೀಸರ ಪ್ರಕಾರ, ಗಾಂಧಿ ಮೈದಾನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ