AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ