AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ