AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ

Odisha Train Accident : ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆ, ಪರಿಹಾರದ ಬದಲಾಗಿ ತನಗೆ ಉದ್ಯೋಗ ನೀಡಬೇಕೆಂದು ಕೇಂದ್ರ ರೈಲ್ವೆ ಸಚಿವರನ್ನು ಕಾಣಲು ಪಾಟ್ನಾದ ಈ ವ್ಯಕ್ತಿ ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ
ಪಾಟ್ನಾದ ಸಂಜಯ್ ಕುಮಾರ್
TV9 Web
| Edited By: |

Updated on:Jun 09, 2023 | 12:06 PM

Share

Government Job: ಸರ್ಕಾರಿ ನೌಕರಿಯನ್ನು ಗಿಟ್ಟಿಸಲು ವ್ಯಕ್ತಿಯೊಬ್ಬ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಪ್ರಸಂಗ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆಂದು ಇವನು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ. ಬಾಲ್​ಸೋರ್​ ರೈಲು ಅಪಘಾತದ ನಂತರ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ತಾನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav)​ ಅವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸಿದ್ಧಾಗಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಅವನ ತಾಯಿ 2018ರಲ್ಲಿಯೇ ನಿಧನ ಹೊಂದಿದ್ದರ ಮಾಹಿತಿ ಬೆಳಕಿಗೆ ಬಂದಿದೆ. ತತ್ಪರಿಣಾಮವಾಗಿ ಪೊಲೀಸರು ಅವನನ್ನು ಬಂಧಿಸಿದ್ದಾರೆ.

ಈ ವ್ಯಕ್ತಿಯನ್ನು ಪಾಟ್ನಾದ ಸಂಜಯ್ ಕುಮಾರ್ ಎಂದು ಗುರುತಿಲಾಗಿದೆ. ಇವನು ​ ಗುರುವಾರದಂದು ಸಚಿವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾನೆ. ಆಗ ರೈಲು ಭವನದಲ್ಲಿ ಅವರನ್ನು ಕಾಣಲು ತಿಳಿಸಲಾಗಿದೆ. ಆ ಪ್ರಕಾರ ಅವನು ಸಚಿವರ ಕಚೇರಿಗೆ ತೆರಳಿದ್ಧಾನೆ.  ಅಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಅವನ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ.

ಇದನ್ನೂ ಓದಿ : Viral Video: ಮ್ಯಾಷಪ್​ ವಿಥ್ ಅಮ್ಮಾ; ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸಿನಿಸಂಗಮ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತನ್ನ ತಾಯಿ ಕೋರಮಂಡಲ್​ ಎಕ್ಸ್​ಪ್ರೆಸ್​ ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ಹಾಗಿದ್ದರೆ ನಿಮ್ಮ ತಾಯಿಯ ಪ್ರಯಾಣಕ್ಕೆ ಸಂಬಂಧಿಸಿದ ಮಾಹಿತಿ, ಸಾಕ್ಷ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳು ಕೇಳಿದಾಗ ಅವನು ನಿರುತ್ತರನಾಗಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ತಾನು ಟ್ರಾವೆಲ್ ಏಜೆಂಟ್ ಮೂಲಕ ಟಿಕೆಟ್​ ಬುಕ್​ ಮಾಡಿದ್ದೆ, ಅವನ ಹೆಸರು ನೆನಪಿಲ್ಲ. ಅಲ್ಲದೆ ಸೀಟ್​ ವೇಟಿಂಗ್​ ಲಿಸ್ಟ್​ನಲ್ಲಿತ್ತು ಎಂದು ಹೇಳಲು ಪ್ರಯತ್ನಿಸಿದ್ದಾನಾದರೂ ಸಾಕ್ಷ್ಯಾಧಾರಗಳೊಂದಿಗೆ ಸಾಬೀತುಪಡಿಸುವಲ್ಲಿ ವಿಫಲನಾಗಿದ್ದಾನೆ. ಅಧಿಕಾರಿಗಳಿಗೆ ಅನುಮಾನ ದಟ್ಟವಾಗಿದ್ದರಿಂದ ಅವನನ್ನು ಕೂಡಲೇ ಬಂಧಿಸಿದ್ದಾರೆ.

ಇದನ್ನೂ ಓದಿ : Viral: ”ಕಚರಾ” ಮರುಬಳಕೆ; ಝೊಮ್ಯಾಟೋದ ಕೀಳು ಅಭಿರುಚಿಯ ಜಾತೀವಾದಿ ಜಾಹೀರಾತು

”ಸಂಜಯ್ ತನ್ನ ತಾಯಿಯ ಫೋಟೋ ನಮಗೆ ನೀಡಿದ. ಫೇಷಿಯಲ್ ರಿಕಗ್ನಿಷನ್ ತಂತ್ರಜ್ಞಾನದ ಮೂಲಕ ಆಕೆಯನ್ನು ಹುಡುಕುವುದು ನಮ್ಮ ಗುರಿಯಾಗಿತ್ತು. ಹಾಗಾಗಿ ಎಲ್ಲಾ ರೈಲು ನಿಲ್ದಾಣಗಳಲ್ಲಿಯೂ ಅವರ ತಾಯಿಯನ್ನು ಹುಡುಕಲು ಪ್ರಾರಂಭಿಸಿದೆವು. ಆದರೆ ಅವರು ಪತ್ತೆಯಾಗಲಿಲ್ಲ. ಈ ಪ್ರಕರಣವನ್ನು ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯರೆದುರು ಸಂಜಯ್​ ತನ್ನ ತಪ್ಪನ್ನು ಒಪ್ಪಿಕೊಂಡ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Viral Video: ಮೆಕ್​ಡೊನಾಲ್ಡ್ಸ್​; ಡೇಟಿಂಗ್​, ಪ್ರೇಮದ ಬೆಲೆ ಇಲ್ಲಿ ರೂ. 179?; ನೆಟ್ಟಿಗರ ಆಕ್ರೋಶ

ಬಾಲ್​ಸೋರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ರೈಲ್ವೇ ಸಚಿವಾಲಯವು ಪರಿಹಾರ ಘೋಷಿಸಿದಾಗ, ಸಂಜಯ್​ ಸಚಿವರನ್ನು ಸಂಪರ್ಕಿಸಿ ಪರಿಹಾರದ ಬದಲಾಗಿ ತನಗೆ ಸರ್ಕಾರಿ ನೌಕರಿ ನೀಡಬೇಕೆಂದು ಕೇಳಲು ನಿರ್ಧರಿಸಿದ. ಅಧಿಕಾರಿಯೆದುರು, ತಾನು ಬಹುಕಾಲದಿಂದ ನಿರುದ್ಯೋಗಿಯಾಗಿದ್ದೆ, ಖಿನ್ನತೆಗೂ ಜಾರಿದ್ದೆ. ಇದಕ್ಕೆ ಉದ್ಯೋಗವೊಂದೇ ಮಾರ್ಗ ಎಂದು ಕಂಡುಕೊಂಡೆ ಎಂದಿದ್ದ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:00 pm, Fri, 9 June 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?