AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಪಾಟ್ನಾದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತಾರ್‌ಗೆ ಹನಿಮೂನ್‌ಗೆಂದು ಕರೆದುಕೊಂಡು ಹೋಗಿ ಅಲ್ಲಿನ ಶೇಖ್‌ಗೆ 10 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾನೆ. ಪತ್ನಿಯನ್ನು ಮಾರಾಟ ಮಾಡಿದ ನಂತರ ಭಾರತಕ್ಕೆ ಬಂದ ಪತಿ ಅಂಚೆ ಮೂಲಕ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಭದ್ರತಾ ಸಿಬ್ಬಂದಿಯ ಸಹಾಯದಿಂದ ಮಹಿಳೆ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಭಾರತಕ್ಕೆ ಮರಳಿದ್ದು, ಇದೀಗ ಪತಿ ಮತ್ತು ಅತ್ತೆಯ ವಿರುದ್ಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Nov 23, 2024 | 3:39 PM

Share

ಬಿಹಾರದ ಪಾಟ್ನಾದ ವ್ಯಕ್ತಿಯೊಬ್ಬ ಪತ್ನಿಯನ್ನು ಹನಿಮೂನ್​​ಗೆಂದು ಕತಾರ್‌ಗೆ ಕರೆದುಕೊಂಡು ಹೋಗಿ ಅಲ್ಲಿನ ಶೇಖ್‌ಗೆ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯನ್ನು ಮಾರಾಟ ಮಾಡಿ ಪಾಟ್ನಾಗೆ ತಲುಪಿದ್ದ ಈತ ಪತ್ನಿಗೆ ಅಂಚೆ ಮೂಲಕ ತ್ರಿವಳಿ ತಲಾಖ್ ಕಳುಹಿಸಿದ್ದಾನೆ. ಮತ್ತೊಂದೆಡೆ, ಭದ್ರತಾ ಸಿಬ್ಬಂದಿಯ ಸಹಾಯದಿಂದ ಮಹಿಳೆ ತನಗಾದ ಕಹಿ ಅನುಭವವನ್ನು ಪತ್ರದಲ್ಲಿ ಬರೆದು ಭಾರತೀಯ ರಾಯಭಾರ ಕಚೇರಿಗೆ ತಲುಪಿಸಿದ್ದಾಳೆ. ನಂತರ ರಾಯಭಾರ ಕಚೇರಿಯ ಸಿಬ್ಬಂದಿಗಳು ಮಹಿಳೆಯನ್ನು ಭಾರತಕ್ಕೆ ಸುರಕ್ಷಿತವಾಗಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತಕ್ಕೆ ಬಂದ ಮಹಿಳೆ ತನಗಾದ ಸಂಕಷ್ಟವನ್ನು ವಿವರಿಸಿದ್ದಾಳೆ. ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

2021 ರಲ್ಲಿ ಆರೋಪಿ ಶಹಬಾಜ್ ಹಸನ್​ನೊಂದಿಗೆ ಈ ಮಹಿಳೆಗೆ ವಿವಾಹವಾಗಿತ್ತು. ಮನೆಯವರಿಗೆ ಯುವಕ ವಿದ್ಯುತ್ ಇಲಾಖೆಯಲ್ಲಿ ಸರ್ಕಾರಿ ನೌಕರ ಎಂದು ತಿಳಿಸಿದ್ದರು. ಆದರೆ, ಮದುವೆ ಬಳಿಕ ಗಂಡನ ಮನೆಗೆ ಹೋದಾಗ ಪತಿ ಎನ್ ಜಿಒದಲ್ಲಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 2021 ರ, ಅಕ್ಟೋಬರ್ 29 ರಂದು, ಅವನು ತನ್ನ ಹೆಂಡತಿಯನ್ನು ಮನವೊಲಿಸಿ ಕತಾರ್‌ಗೆ ಕರೆದುಕೊಂಡು ಹೋಗಿದ್ದಾನೆ.

10 ಲಕ್ಷಕ್ಕೆ ಡೀಲ್:

ಪತಿ ಆಕೆಯನ್ನು ಕತಾರ್ ನ ಶೇಖ್ ಎಂಬುವವರಿಗೆ 10 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ. ಇದಾದ ನಂತರ ಅವರು ಭದ್ರತಾ ಸಿಬ್ಬಂದಿಯ ಸಹಾಯದಿಂದ ಹೇಗೋ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಇದೀಗ ಸುರಕ್ಷಿತವಾಗಿ ಭಾರತಕ್ಕೆ ತಲುಪಿದ್ದಾಳೆ.

ಇದನ್ನೂ ಓದಿ: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು

ಈ ಸಂಪೂರ್ಣ ವಿಷಯಕ್ಕೆ ಸಂಬಂಧಿಸಿದಂತೆ, ಮಹಿಳೆ ಇದೀಗ ರಾಜಧಾನಿಯ ದಿಘಾ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ. ಇಲ್ಲಿ ಒನ್ ಸ್ಟಾಪ್ ಸೆಂಟರ್ ಮೂಲಕ ಮಹಿಳೆಗೆ ಕಾನೂನು ನೆರವು ನೀಡಲಾಗುತ್ತಿದೆ. ಕೇಂದ್ರಕ್ಕೆ ಬಂದಿರುವ ಮಾಹಿತಿ ಪ್ರಕಾರ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಮಹಿಳೆಯ ಅತ್ತೆ ಮಾವಂದಿರಿಗೆ ನೋಟಿಸ್ ನೀಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್