AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮುರುಗನ್ ಸ್ವಾಮಿ ಮಂಗಳಾರತಿ ವೇಳೆ ಬಂದ ಮಯೂರ, ಇದು ದೇವನಿಷ್ಠೆ

ನೂರಾರು ಭಕ್ತರ ಸಮ್ಮುಖದಲ್ಲಿ ಸುಬ್ರಹ್ಮಣ್ಯ ದೇವರಿಗೆ ಆರತಿ ಸಲ್ಲಿಸುವಾಗ ನವಿಲು ಗರ್ಭಗುಡಿಯ ಮುಂದೆ ಬಂದಿದೆ. ಸುಬ್ರಹ್ಮಣ್ಯ ಸ್ವಾಮಿಯ ಮೂರ್ತಿಗೆ ಆರತಿ ಸಲ್ಲಿಸಿದ ನಂತರ ಪೂಜಾರಿ ನವಿಲಿಗೆ ಆರತಿ ಸಲ್ಲಿಸಿದ್ದಾರೆ. ಇಷ್ಟೊಂದು ಭಕ್ತರಿದ್ದರೂ ನವಿಲು ಅಲ್ಲಿಂದ ಕದಲದೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

Video Viral: ಮುರುಗನ್ ಸ್ವಾಮಿ ಮಂಗಳಾರತಿ ವೇಳೆ ಬಂದ ಮಯೂರ, ಇದು ದೇವನಿಷ್ಠೆ
ಸುಬ್ರಹ್ಮಣ್ಯ ಸ್ವಾಮಿಯ ಪೂಜೆಯ ವೇಳೆ ಗರ್ಭಗುಡಿಯ ಹತ್ತಿರ ಕಾಣಿಸಿಕೊಂಡ ನವಿಲು
ಅಕ್ಷತಾ ವರ್ಕಾಡಿ
|

Updated on: May 31, 2024 | 10:49 AM

Share

ತಮಿಳುನಾಡು:  ತಿರುಪ್ಪೂರ್ ಜಿಲ್ಲೆಯ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪವಾಡ ಸದೃಶ ಘಟನೆ ನಡೆದಿದೆ. ದೇವಾಲಯದ ಗರ್ಭಗುಡಿಯಲ್ಲಿ ನವಿಲೊಂದು ಕಾಣಿಸಿಕೊಂಡಿದ್ದು, ಆ ಅದ್ಬುತ ದೃಶ್ಯ ಕಂಡು ಜನ ಬೆರಗಾಗಿದ್ದಾರೆ. ಇದನ್ನೆಲ್ಲ ಆ ದೇವರ ಲೀಲೆ ಅಂತ ಭಕ್ತರು ಹೇಳಿದ್ದಾರೆ. ನೂರಾರು ಭಕ್ತರ ಸಮ್ಮುಖದಲ್ಲಿ ಸುಬ್ರಹ್ಮಣ್ಯ ದೇವರಿಗೆ ಆರತಿ ಸಲ್ಲಿಸುವಾಗ ನವಿಲು ಗರ್ಭಗುಡಿಯ ಮುಂದೆ ಬಂದಿದೆ. ಸುಬ್ರಹ್ಮಣ್ಯ ಸ್ವಾಮಿಯ ಮೂರ್ತಿಗೆ ಆರತಿ ಸಲ್ಲಿಸಿದ ನಂತರ ಪೂಜಾರಿ ನವಿಲಿಗೆ ಆರತಿ ಸಲ್ಲಿಸಿದ್ದಾರೆ. ಇಷ್ಟೊಂದು ಭಕ್ತರಿದ್ದರೂ ನವಿಲು ಅಲ್ಲಿಂದ ಕದಲದೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಏತನ್ಮಧ್ಯೆ, ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ನವಿಲು ಸುಬ್ರಹ್ಮಣ್ಯ ಸ್ವಾಮಿ ವಾಹನ ಎಂದು ಹೇಳಲಾಗುತ್ತದೆ. ಇದಲ್ಲದೆ, ನವಿಲು ಕಣ್ಣುಗಳು ಜ್ಞಾನ, ತಿಳುವಳಿಕೆ ಮತ್ತು ಬುದ್ಧಿವಂತಿಕೆಯನ್ನು ಸಂಕೇತಿಸುತ್ತದೆ ಎಂದು ಹೇಳಲಾಗುತ್ತದೆ. ದೇವಸ್ಥಾನಕ್ಕೆ ಬಂದಿದ್ದ ಭಕ್ತರೆಲ್ಲರೂ ಈ ಅದ್ಭುತ ದೃಶ್ಯವನ್ನು ತಮ್ಮ ಫೋನ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೀಟ್‌ ಸ್ಟ್ರೋಕ್‌ಗೆ ಒಳಗಾದ ಕೋತಿ, ಮೂಕ ಜೀವಿಯ ಪ್ರಾಣ ರಕ್ಷಿಸಿದ ಪೊಲೀಸ್‌ ಅಧಿಕಾರಿ

ನಿತಿನ್​ ಮೆಹ್ತಾ ಎಂಬ ಫೇಸ್​​​ಬುಕ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ವಿಡಿಯೋಗೆ ದೇವಸ್ಥಾನದ ಆಡಳಿತಾಧಿಕಾರಿಗಳು ಪ್ರತಿಕ್ರಿಯಿಸಿದ್ದು”ಇದು ದೇವರ ಮಹಿಮೆಗೆ ಸಾಕ್ಷಿಯಾಗಿದೆ. ಜನರಲ್ಲಿ ದೇವರ ಮೇಲಿನ ನಂಬಿಕೆ ಹೆಚ್ಚಲು ಇದೇ ಕಾರಣ ” ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ