AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?

Auto Ride: ಬೆಂಗಳೂರಿನಲ್ಲಿ ಆಟೋ ​ ಬುಕ್ ಮಾಡಿದ ಪ್ರಯಾಣಿಕರೊಬ್ಬರ ಅನುಭವವಿದು. ಯಾಕೆ ಹೀಗಾಗಿದೆ, ನಿಮಗೇನಾದರೂ ಗೊತ್ತೆ? ದಶರಥನಿಗೆ ಬೇಗ ಶ್ರೀಮಂತನಾಗಬೇಕೆನ್ನಿಸಿದೆ ಎಂದು ನೆಟ್ಟಿಗರೇನೋ ತಮಾಷೆ ಮಾಡುತ್ತಿದ್ದಾರೆ...

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?
ಒಂದೇ ಸಮಯಕ್ಕೆ ಬೇರೆ ಬೇರೆ ಜಾಗಗಳಲ್ಲಿ ಒಬ್ಬನೇ ಡ್ರೈವರ್​ ಬೇರೆ ಬೇರೆ ಆ್ಯಪ್​​ಗಳಲ್ಲಿ ಒಂದೇ ಸಮಯಕ್ಕೆ ರೈಡ್​ ಸ್ವೀಕರಿಸಿರುವ ಸ್ಕ್ರೀನ್​ ಶಾಟ್.
ಶ್ರೀದೇವಿ ಕಳಸದ
|

Updated on:Aug 08, 2023 | 6:16 PM

Share

Bengaluru : ಆಟೋ, ಕ್ಯಾಬ್​ ಪ್ರಯಾಣಕ್ಕೆ ಸಂಬಂಧಿಸಿದ ಅನೇಕ ರೀತಿಯ ಘಟನೆಗಳನ್ನು ಓದುತ್ತಿರುತ್ತೀರಿ. ಕೆಲವೊಮ್ಮೆ ನಿಮ್ಮ ಹೃದಯ ಮಿಡಿಯುತ್ತದೆ. ಕೆಲವೊಮ್ಮೆ ಕೋಪ ಬರುತ್ತದೆ. ಇನ್ನೂ ಕೆಲವೊಮ್ಮೆ ಅಚ್ಚರಿಯೂ ಆಗುತ್ತದೆ. ಇದೀಗ ಹೇಳಹೊರಟಿರುವ ಈ ಘಟನೆಗೆ ನೀವು ಹೇಗೆ ಸ್ಪಂದಿಸುತ್ತೀರಿ ಎಂಬ ಕುತೂಹಲ ನಮ್ಮದು. Harsh.fig ಎಂಬ X (Twitter) ಖಾತೆದಾರರು, ಆಟೋ ಚಾಲಕರೊಬ್ಬರು ಒಂದೇ ಸಮಯಕ್ಕೆ ಎರಡು ವಿಭಿನ್ನ ಆ್ಯಪ್​​ಗಳಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಮತ್ತು ಎರಡು ಪ್ರತ್ಯೇಕ ಮೊಬೈಲ್​​ಗಳಲ್ಲಿ ಆಟೋರೈಡ್​ ಸ್ವೀಕರಿಸಿರುವ ಸ್ಕ್ರೀನ್ ಶಾಟ್​ ಹಂಚಿಕೊಂಡಿದ್ದಾರೆ. ನೆಟ್ಟಿಗರಿಗಿದು ಉಚಿತ ಮನರಂಜನೆಯ ಸರಕಾಗಬಹುದೇನೋ.

ಎರಡು ವಿಭಿನ್ನ ಸ್ಥಳಗಳಲ್ಲಿ, ಎರಡು ವಿಭಿನ್ನ ಅಪ್ಲಿಕೇಶನ್‌ಗಳಲ್ಲಿ, ಎರಡು ವಿಭಿನ್ನ ಫೋನ್‌ಗಳಲ್ಲಿ ಒಬ್ಬನೇ ಆಟೋ ಚಾಲಕ ಈ ರೈಡ್​ ಅನ್ನು ಸ್ವೀಕರಿಸಿದ್ದು ಹೇಗೆ? ಎನ್ನುವ ಅಚ್ಚರಿಯಲ್ಲಿ ನೆಟ್ಟಿಗರು ಬಿದ್ದಿದ್ದಾರೆ. ದಶರಥ ಎಂದು ರೈಡರ್​​ನ ಹೆಸರನ್ನು ಮತ್ತು ಒಂದೇ ಆಟೋ ನಂಬರ್​ ಅನ್ನು ಈ ಆ್ಯಪ್​ಗಳು ತೋರಿಸಿವೆ.

ಇದನ್ನೂ ಓದಿ : Viral Video: ಏಕಕಾಲಕ್ಕೆ ಸೈಕಲ್ ಓಡಿಸುತ್ತ ಪಿಯಾನೋ ನುಡಿಸುತ್ತಿರುವ ಈ ಮುಸಾಫಿರ್

ಆ. 6ರಂದು ಹಂಚಿಕೊಂಡ ಈ ಪೋಸ್ಟ್​ ಅನ್ನು ಈತನಕ 380 ಜನರು ನೋಡಿದ್ದಾರೆ. ಹಾಗೆ ನೋಡಿದರೆ ಇದು ಸಾಕಷ್ಟು ಜನರ ಕಣ್ಣಿಗೆ ಬಿದ್ದಂತಿಲ್ಲ. ದಶರಥ ಬೇಗ ಶ್ರೀಮಂತನಾಗಲು ಹೊರಟಿರುವಂತೆ ಕಾಣುತ್ತಿದೆ ಎಂದಿದ್ದಾರೆ ಒಬ್ಬರು. ಆಮೇಲೆ ಏನಾಯಿತು? ಈ ವಿಷಯವಾಗಿ ನೀವು ಅವರನ್ನು ವಿಚಾರಿಸಿದಿರೆ? ಅವರ ಆಟೋದಲ್ಲಿ ಪ್ರಯಾಣಿಸಿದಿರೆ? ಹಣವನ್ನು ಹೇಗೆ ಪಾವತಿ ಮಾಡಿದಿರಿ? ಎಂದು ಕೇಳಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಬಂಡೀಪುರ; ಕಾರ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಲೆತ್ನಿಸಿದ ಪುಂಡರ ವಿಡಿಯೋ ವೈರಲ್

ದಶರಥನ ಈ ಪ್ರಕರಣದ ಬಗ್ಗೆ ನಿಮಗೇನು ಅನ್ನಿಸುತ್ತದೆ? ಹೇಗೆ ಎರಡು ವಿಭಿನ್ನ ಆ್ಯಪ್​ಗಳಲ್ಲಿ ಏಕಕಾಲಕ್ಕೆ ಬೇರೆ ಬೇರೆ ಸ್ಥಳದಲ್ಲಿ ರೈಡ್ ಸ್ವೀಕರಿಸಲು ಸಾಧ್ಯ? ಯೋಚಿಸಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 6:12 pm, Tue, 8 August 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ