AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?

Auto Ride: ಬೆಂಗಳೂರಿನಲ್ಲಿ ಆಟೋ ​ ಬುಕ್ ಮಾಡಿದ ಪ್ರಯಾಣಿಕರೊಬ್ಬರ ಅನುಭವವಿದು. ಯಾಕೆ ಹೀಗಾಗಿದೆ, ನಿಮಗೇನಾದರೂ ಗೊತ್ತೆ? ದಶರಥನಿಗೆ ಬೇಗ ಶ್ರೀಮಂತನಾಗಬೇಕೆನ್ನಿಸಿದೆ ಎಂದು ನೆಟ್ಟಿಗರೇನೋ ತಮಾಷೆ ಮಾಡುತ್ತಿದ್ದಾರೆ...

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?
ಒಂದೇ ಸಮಯಕ್ಕೆ ಬೇರೆ ಬೇರೆ ಜಾಗಗಳಲ್ಲಿ ಒಬ್ಬನೇ ಡ್ರೈವರ್​ ಬೇರೆ ಬೇರೆ ಆ್ಯಪ್​​ಗಳಲ್ಲಿ ಒಂದೇ ಸಮಯಕ್ಕೆ ರೈಡ್​ ಸ್ವೀಕರಿಸಿರುವ ಸ್ಕ್ರೀನ್​ ಶಾಟ್.
ಶ್ರೀದೇವಿ ಕಳಸದ
|

Updated on:Aug 08, 2023 | 6:16 PM

Share

Bengaluru : ಆಟೋ, ಕ್ಯಾಬ್​ ಪ್ರಯಾಣಕ್ಕೆ ಸಂಬಂಧಿಸಿದ ಅನೇಕ ರೀತಿಯ ಘಟನೆಗಳನ್ನು ಓದುತ್ತಿರುತ್ತೀರಿ. ಕೆಲವೊಮ್ಮೆ ನಿಮ್ಮ ಹೃದಯ ಮಿಡಿಯುತ್ತದೆ. ಕೆಲವೊಮ್ಮೆ ಕೋಪ ಬರುತ್ತದೆ. ಇನ್ನೂ ಕೆಲವೊಮ್ಮೆ ಅಚ್ಚರಿಯೂ ಆಗುತ್ತದೆ. ಇದೀಗ ಹೇಳಹೊರಟಿರುವ ಈ ಘಟನೆಗೆ ನೀವು ಹೇಗೆ ಸ್ಪಂದಿಸುತ್ತೀರಿ ಎಂಬ ಕುತೂಹಲ ನಮ್ಮದು. Harsh.fig ಎಂಬ X (Twitter) ಖಾತೆದಾರರು, ಆಟೋ ಚಾಲಕರೊಬ್ಬರು ಒಂದೇ ಸಮಯಕ್ಕೆ ಎರಡು ವಿಭಿನ್ನ ಆ್ಯಪ್​​ಗಳಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಮತ್ತು ಎರಡು ಪ್ರತ್ಯೇಕ ಮೊಬೈಲ್​​ಗಳಲ್ಲಿ ಆಟೋರೈಡ್​ ಸ್ವೀಕರಿಸಿರುವ ಸ್ಕ್ರೀನ್ ಶಾಟ್​ ಹಂಚಿಕೊಂಡಿದ್ದಾರೆ. ನೆಟ್ಟಿಗರಿಗಿದು ಉಚಿತ ಮನರಂಜನೆಯ ಸರಕಾಗಬಹುದೇನೋ.

ಎರಡು ವಿಭಿನ್ನ ಸ್ಥಳಗಳಲ್ಲಿ, ಎರಡು ವಿಭಿನ್ನ ಅಪ್ಲಿಕೇಶನ್‌ಗಳಲ್ಲಿ, ಎರಡು ವಿಭಿನ್ನ ಫೋನ್‌ಗಳಲ್ಲಿ ಒಬ್ಬನೇ ಆಟೋ ಚಾಲಕ ಈ ರೈಡ್​ ಅನ್ನು ಸ್ವೀಕರಿಸಿದ್ದು ಹೇಗೆ? ಎನ್ನುವ ಅಚ್ಚರಿಯಲ್ಲಿ ನೆಟ್ಟಿಗರು ಬಿದ್ದಿದ್ದಾರೆ. ದಶರಥ ಎಂದು ರೈಡರ್​​ನ ಹೆಸರನ್ನು ಮತ್ತು ಒಂದೇ ಆಟೋ ನಂಬರ್​ ಅನ್ನು ಈ ಆ್ಯಪ್​ಗಳು ತೋರಿಸಿವೆ.

ಇದನ್ನೂ ಓದಿ : Viral Video: ಏಕಕಾಲಕ್ಕೆ ಸೈಕಲ್ ಓಡಿಸುತ್ತ ಪಿಯಾನೋ ನುಡಿಸುತ್ತಿರುವ ಈ ಮುಸಾಫಿರ್

ಆ. 6ರಂದು ಹಂಚಿಕೊಂಡ ಈ ಪೋಸ್ಟ್​ ಅನ್ನು ಈತನಕ 380 ಜನರು ನೋಡಿದ್ದಾರೆ. ಹಾಗೆ ನೋಡಿದರೆ ಇದು ಸಾಕಷ್ಟು ಜನರ ಕಣ್ಣಿಗೆ ಬಿದ್ದಂತಿಲ್ಲ. ದಶರಥ ಬೇಗ ಶ್ರೀಮಂತನಾಗಲು ಹೊರಟಿರುವಂತೆ ಕಾಣುತ್ತಿದೆ ಎಂದಿದ್ದಾರೆ ಒಬ್ಬರು. ಆಮೇಲೆ ಏನಾಯಿತು? ಈ ವಿಷಯವಾಗಿ ನೀವು ಅವರನ್ನು ವಿಚಾರಿಸಿದಿರೆ? ಅವರ ಆಟೋದಲ್ಲಿ ಪ್ರಯಾಣಿಸಿದಿರೆ? ಹಣವನ್ನು ಹೇಗೆ ಪಾವತಿ ಮಾಡಿದಿರಿ? ಎಂದು ಕೇಳಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಬಂಡೀಪುರ; ಕಾರ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಲೆತ್ನಿಸಿದ ಪುಂಡರ ವಿಡಿಯೋ ವೈರಲ್

ದಶರಥನ ಈ ಪ್ರಕರಣದ ಬಗ್ಗೆ ನಿಮಗೇನು ಅನ್ನಿಸುತ್ತದೆ? ಹೇಗೆ ಎರಡು ವಿಭಿನ್ನ ಆ್ಯಪ್​ಗಳಲ್ಲಿ ಏಕಕಾಲಕ್ಕೆ ಬೇರೆ ಬೇರೆ ಸ್ಥಳದಲ್ಲಿ ರೈಡ್ ಸ್ವೀಕರಿಸಲು ಸಾಧ್ಯ? ಯೋಚಿಸಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 6:12 pm, Tue, 8 August 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ