Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?

Auto Ride: ಬೆಂಗಳೂರಿನಲ್ಲಿ ಆಟೋ ​ ಬುಕ್ ಮಾಡಿದ ಪ್ರಯಾಣಿಕರೊಬ್ಬರ ಅನುಭವವಿದು. ಯಾಕೆ ಹೀಗಾಗಿದೆ, ನಿಮಗೇನಾದರೂ ಗೊತ್ತೆ? ದಶರಥನಿಗೆ ಬೇಗ ಶ್ರೀಮಂತನಾಗಬೇಕೆನ್ನಿಸಿದೆ ಎಂದು ನೆಟ್ಟಿಗರೇನೋ ತಮಾಷೆ ಮಾಡುತ್ತಿದ್ದಾರೆ...

Viral: ಒಂದೇ ಆಟೋ ಒಬ್ಬನೇ ಡ್ರೈವರ್​ ಒಂದೇ ಸಮಯಕ್ಕೆ ಬೇರೆಬೇರೆ ಸ್ಥಳಗಳಲ್ಲಿ ಆಟೋ ಬುಕ್ ಆಗಿದ್ದು ಹೇಗೆ?
ಒಂದೇ ಸಮಯಕ್ಕೆ ಬೇರೆ ಬೇರೆ ಜಾಗಗಳಲ್ಲಿ ಒಬ್ಬನೇ ಡ್ರೈವರ್​ ಬೇರೆ ಬೇರೆ ಆ್ಯಪ್​​ಗಳಲ್ಲಿ ಒಂದೇ ಸಮಯಕ್ಕೆ ರೈಡ್​ ಸ್ವೀಕರಿಸಿರುವ ಸ್ಕ್ರೀನ್​ ಶಾಟ್.
Follow us
ಶ್ರೀದೇವಿ ಕಳಸದ
|

Updated on:Aug 08, 2023 | 6:16 PM

Bengaluru : ಆಟೋ, ಕ್ಯಾಬ್​ ಪ್ರಯಾಣಕ್ಕೆ ಸಂಬಂಧಿಸಿದ ಅನೇಕ ರೀತಿಯ ಘಟನೆಗಳನ್ನು ಓದುತ್ತಿರುತ್ತೀರಿ. ಕೆಲವೊಮ್ಮೆ ನಿಮ್ಮ ಹೃದಯ ಮಿಡಿಯುತ್ತದೆ. ಕೆಲವೊಮ್ಮೆ ಕೋಪ ಬರುತ್ತದೆ. ಇನ್ನೂ ಕೆಲವೊಮ್ಮೆ ಅಚ್ಚರಿಯೂ ಆಗುತ್ತದೆ. ಇದೀಗ ಹೇಳಹೊರಟಿರುವ ಈ ಘಟನೆಗೆ ನೀವು ಹೇಗೆ ಸ್ಪಂದಿಸುತ್ತೀರಿ ಎಂಬ ಕುತೂಹಲ ನಮ್ಮದು. Harsh.fig ಎಂಬ X (Twitter) ಖಾತೆದಾರರು, ಆಟೋ ಚಾಲಕರೊಬ್ಬರು ಒಂದೇ ಸಮಯಕ್ಕೆ ಎರಡು ವಿಭಿನ್ನ ಆ್ಯಪ್​​ಗಳಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಮತ್ತು ಎರಡು ಪ್ರತ್ಯೇಕ ಮೊಬೈಲ್​​ಗಳಲ್ಲಿ ಆಟೋರೈಡ್​ ಸ್ವೀಕರಿಸಿರುವ ಸ್ಕ್ರೀನ್ ಶಾಟ್​ ಹಂಚಿಕೊಂಡಿದ್ದಾರೆ. ನೆಟ್ಟಿಗರಿಗಿದು ಉಚಿತ ಮನರಂಜನೆಯ ಸರಕಾಗಬಹುದೇನೋ.

ಎರಡು ವಿಭಿನ್ನ ಸ್ಥಳಗಳಲ್ಲಿ, ಎರಡು ವಿಭಿನ್ನ ಅಪ್ಲಿಕೇಶನ್‌ಗಳಲ್ಲಿ, ಎರಡು ವಿಭಿನ್ನ ಫೋನ್‌ಗಳಲ್ಲಿ ಒಬ್ಬನೇ ಆಟೋ ಚಾಲಕ ಈ ರೈಡ್​ ಅನ್ನು ಸ್ವೀಕರಿಸಿದ್ದು ಹೇಗೆ? ಎನ್ನುವ ಅಚ್ಚರಿಯಲ್ಲಿ ನೆಟ್ಟಿಗರು ಬಿದ್ದಿದ್ದಾರೆ. ದಶರಥ ಎಂದು ರೈಡರ್​​ನ ಹೆಸರನ್ನು ಮತ್ತು ಒಂದೇ ಆಟೋ ನಂಬರ್​ ಅನ್ನು ಈ ಆ್ಯಪ್​ಗಳು ತೋರಿಸಿವೆ.

ಇದನ್ನೂ ಓದಿ : Viral Video: ಏಕಕಾಲಕ್ಕೆ ಸೈಕಲ್ ಓಡಿಸುತ್ತ ಪಿಯಾನೋ ನುಡಿಸುತ್ತಿರುವ ಈ ಮುಸಾಫಿರ್

ಆ. 6ರಂದು ಹಂಚಿಕೊಂಡ ಈ ಪೋಸ್ಟ್​ ಅನ್ನು ಈತನಕ 380 ಜನರು ನೋಡಿದ್ದಾರೆ. ಹಾಗೆ ನೋಡಿದರೆ ಇದು ಸಾಕಷ್ಟು ಜನರ ಕಣ್ಣಿಗೆ ಬಿದ್ದಂತಿಲ್ಲ. ದಶರಥ ಬೇಗ ಶ್ರೀಮಂತನಾಗಲು ಹೊರಟಿರುವಂತೆ ಕಾಣುತ್ತಿದೆ ಎಂದಿದ್ದಾರೆ ಒಬ್ಬರು. ಆಮೇಲೆ ಏನಾಯಿತು? ಈ ವಿಷಯವಾಗಿ ನೀವು ಅವರನ್ನು ವಿಚಾರಿಸಿದಿರೆ? ಅವರ ಆಟೋದಲ್ಲಿ ಪ್ರಯಾಣಿಸಿದಿರೆ? ಹಣವನ್ನು ಹೇಗೆ ಪಾವತಿ ಮಾಡಿದಿರಿ? ಎಂದು ಕೇಳಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಬಂಡೀಪುರ; ಕಾರ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಲೆತ್ನಿಸಿದ ಪುಂಡರ ವಿಡಿಯೋ ವೈರಲ್

ದಶರಥನ ಈ ಪ್ರಕರಣದ ಬಗ್ಗೆ ನಿಮಗೇನು ಅನ್ನಿಸುತ್ತದೆ? ಹೇಗೆ ಎರಡು ವಿಭಿನ್ನ ಆ್ಯಪ್​ಗಳಲ್ಲಿ ಏಕಕಾಲಕ್ಕೆ ಬೇರೆ ಬೇರೆ ಸ್ಥಳದಲ್ಲಿ ರೈಡ್ ಸ್ವೀಕರಿಸಲು ಸಾಧ್ಯ? ಯೋಚಿಸಿ, ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 6:12 pm, Tue, 8 August 23

ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ