AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಗಮನ ಸೆಳೆದ ಕಡಲೆಕಾಯಿ ಮಾರಾಟಗಾರನ ಕಚ್ಚಾ ಬಾದಾಮ್​ ಹಾಡು: ವಿಡಿಯೋ ವೈರಲ್​

ಬಬೂನ್​ ಬಡ್ಯಾಕರ್​ ಎನ್ನುವ ವ್ಯಕ್ತಿ ಬರಿಗಾಲಿನಲ್ಲಿ ಸೈಕಲ್​ ತುಳಿದುಕೊಂಡು ಮನೆಮನೆಗೆ ತೆರಳಿ ಕಡಲೆಕಾಯಿ ಮಾರುತ್ತಾನೆ. ಹೀಗೆ ಕಡಲೆಕಾಯಿ ಮಾರುವ ವೇಳೆ ಕಚ್ಚಾ ಬಾದಮ್​ ಹಾಡನ್ನು ಹಾಡುತ್ತಾನೆ.

ನೆಟ್ಟಿಗರ ಗಮನ ಸೆಳೆದ ಕಡಲೆಕಾಯಿ ಮಾರಾಟಗಾರನ ಕಚ್ಚಾ ಬಾದಾಮ್​ ಹಾಡು: ವಿಡಿಯೋ ವೈರಲ್​
ಬೂಬನ್​ ಬಡ್ಯಾಕರ್​
TV9 Web
| Edited By: |

Updated on: Jan 07, 2022 | 2:42 PM

Share

ಸಾಮಾಜಿಕ ಜಾಲತಾಣಗಳು ಹೊಸ ಹೊಸ ವಿಚಾರಗಳಿಂದ ವಿಭಿನ್ನ ರೀತಿಯ ವೀಡಿಯೋಗಳಿಂದ  ನೆಟ್ಟಿಗರನ್ನು ಸೆಳೆಯುತ್ತಿರುತ್ತವೆ. ವೈರಲ್​ ಹಾಡುಗಳು, ವೈರಲ್​ ವೀಡಿಯೋಗಳು, ವೈರಲ್​  ಆಹಾರಗಳಿಂದ ನೋಡುಗರನ್ನು ಅಚ್ಚರಿಗೊಳಿಸುತ್ತಿರುತ್ತವೆ. ಇದೀಗ ಕಡಲೆಕಾಯಿ ಮಾರಾಟಗಾರನೊಬ್ಬ ಕಚ್ಚಾ ಬಾದಾಮ್ ಎನ್ನುವ​ ಹಾಡನ್ನು ರಚಿಸಿ ಹಾಡನ್ನು ಹಾಡುತ್ತಾ ಕಡಲೆಕಾಯಿ ಮಾರಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗಿದೆ. 

ಪಶ್ವಿಮ ಬಂಗಾಳದ ಬ್ರಿಬುರ್ಮ್ ಎನ್ನುವ​ ಹಳ್ಳಿಯೊಂದರಲ್ಲಿ ಕಡಲೆಕಾಯಿ ಮಾರಾಟ ಮಾಡುವ ವ್ಯಕ್ತಿಯೊಬ್ಬ ಹಾಡು ಹೇಳಿಕೊಂಡು ತಾನು ತಂದಿರುವ ಕಡಲೆಕಾಯಿಯನ್ನು ಮಾರಾಟ ಮಾಡಿದ್ದಾನೆ. ಅವನ ಹಾಡು ನೆಟ್ಟಿಗರ ಗಮನ ಸೆಳೆದಿದೆ. ಬೂಬನ್​ ಬಡ್ಯಾಕರ್​ ಎನ್ನುವ ವ್ಯಕ್ತಿ ಬರಿಗಾಲಿನಲ್ಲಿ ಸೈಕಲ್​ ತುಳಿದುಕೊಂಡು ಮನೆಮನೆಗೆ ತೆರಳಿ ಕಡಲೆಕಾಯಿ ಮಾರುತ್ತಾನೆ. ಹೀಗೆ ಕಡಲೆಕಾಯಿ ಮಾರುವ ವೇಳೆ ಕಚ್ಚಾ ಬಾದಮ್​ ಹಾಡನ್ನು ಹಾಡುತ್ತಾನೆ. ಈತನ ಹಾಡು ಕೇಳಿಯೆ ಜನ ಕಳೆದುಹೋಗುತ್ತಾರೆ. ಬಬೂನ್ ಅವರ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಹಲವರು ಅವರ ಕಚ್ಚಾ ಬಾದಾಮ್​ ಹಾಡಿಗೆ ಮ್ಯಾಶ್​ ಅಪ್​ಗಳನ್ನು ಮಾಡಿ ಹಂಚಿಕೊಂಡಿದ್ದಾರೆ. ಯುಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋ 11 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು , 69 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ಇನ್ನೊಂದು ಪ್ರಮುಖ ವಿಚಾರವೆಂದರೆ ಬೂಬನ್​ ತಮ್ಮ ಕಚ್ಚಾ ಬಾದಾಮ್​ ಹಾಡಿಗಾಗಿ  ಪೊಲೀಸ್​ ಠಾಣೆ​ ಮೆಟ್ಟಲನ್ನೂ ಏರಿದ್ದರು. ಹೌದು. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಡು ವೈರಲ್​ ಆಗಿ ಲಕ್ಷಾಂತರ ಜನ ವೀಕ್ಷಿಸಿದರೂ ತನಗೆ ಯಾವುದೇ ಆದಾಯ ಬಂದಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ. ನನ್ನ ಹಾಡಿನಿಂದ ಹಲವರು ಹಣಗಳಿಸುತ್ತಿದ್ದಾರೆ. ನನಗೂ ನನ್ನ ಹಾಡಿನಿಂದ ಬಂದ ಲಾಭ ಸಿಗಬೇಕು ಎಂದು ಪೋಲೀಸರಿಗೆ ದೂರನ್ನೂ ನೀಡಿದ್ದರು. ಈ ಬಗ್ಗೆ ಅವರು ಪೋಲೀಸರಿಗೆ ದೂರು ನೀಡಿದ ನಂತರ ನನಗೆ ಹಲವು ಬೆದರಿಕೆ ಕರೆಗಳೂ ಬಂದಿವೆ. ಅದೆಲ್ಲವನ್ನೂ ನಾನು ಎದುರಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:

Goldfish: ಗೋಲ್ಡ್​ ಫಿಶ್​ಗಳಿಗೆ ವಾಹನ ಚಲಾಯಿಸುವ ತರಬೇತಿ ನೀಡಿದ ವಿಜ್ಞಾನಿಗಳು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?